Byndoor ಕುಸಿಯುತ್ತಿರುವ ಸೋಮೇಶ್ವರ ಗುಡ್ಡ ಸ್ಥಳಕ್ಕೆ ಭೇಟಿ

ಉದಯವಾಣಿ ವರದಿ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು

Team Udayavani, Jul 17, 2024, 11:51 PM IST

Byndoor ಕುಸಿಯುತ್ತಿರುವ ಸೋಮೇಶ್ವರ ಗುಡ್ಡ ಸ್ಥಳಕ್ಕೆ ಭೇಟಿ

ಬೈಂದೂರು: ಹಲವು ದಿನದಿಂದ ಸುರಿಯುತ್ತಿರುವ ಮಳೆಗೆ ಬೈಂದೂರಿನ ಪಡುವರಿ ಗ್ರಾಮದ ಸೋಮೇಶ್ವರ ಗುಡ್ಡ ಕುಸಿಯುತ್ತಿರುವ ಬಗ್ಗೆ ಉದಯವಾಣಿ ಜು. 17ರಂದು ವರದಿ ಪ್ರಕಟಿಸಿದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಬುಧವಾರ ಬೆಳಗ್ಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ವ್ಯಕ್ತಿಯೊಬ್ಬರು ರಸ್ತೆ ನಿರ್ಮಿಸಿದ ಪರಿಣಾಮ ಇಲ್ಲಿನ ಸೋಮೇಶ್ವರ ಗುಡ್ಡದಿಂದ ಅಪಾರ ಪ್ರಮಾಣದ ಮಣ್ಣು ರಸ್ತೆಗೆ ಬೀಳುತ್ತಿದೆ. ಈ ಮಣ್ಣು ಚರಂಡಿ ಹಾಗೂ ಸೋಮೇಶ್ವರ ದೊಂಬೆ ರಸ್ತೆಗೆ ನೀರಿನೊಂದಿಗೆ ಸಾಗುತ್ತಿದ್ದು, ಯಾವುದೇ ಕ್ಷಣದಲ್ಲೂ ಇಲಿಲ ಕುಸಿತವಾಗುವ ಸಾಧ್ಯತೆ ಇದೆ. ಒಂದೊಮ್ಮೆ ಕುಸಿದರೆ ಬಾರಿ ಅಪಾಯ ಉಂಟಾಗುವ ಸಾದ್ಯತೆ ಇದೆ.

ಇಲ್ಲಿನ ಅಪಾಯ ಸಾಧ್ಯತೆ ಬಗ್ಗೆ ಬೈಂದೂರು ಪಟ್ಟಣ ಪಂಚಾಯತ್‌ ಆಡಳಿತ ಗಮನಹರಿಸಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ.

ಸ್ಥಳೀಯರ ಆಕ್ರೋಶ
ಜನಸಾಮಾನ್ಯರಿಗೆ ಒಂದು ಸಣ್ಣ ಮನೆ ಕಟ್ಟಲು ನೂರು ದಾಖಲೆ ಕೇಳುವ ಅಧಿಕಾರಿಗಳು ಗುಡ್ಡ ಕೊರೆದು ರಸ್ತೆ ನಿರ್ಮಿಸಲು ಹೇಗೆ ಅನುಮತಿ ಹೇಗೆ ನೀಡಿದರು? ಮುಖ್ಯ ರಸ್ತೆಯಿಂದ ಕನಿಷ್ಠ 8 ಮೀಟರ್‌ ಅಂತರ ಇರಬೇಕೆಂಬ ನಿಯಮ ಇದೆ. ಆದರೆ ಈ ರಸ್ತೆ ನಿರ್ಮಾಣಕ್ಕೆ 3 ಮೀಟರ್‌ ಕೂಡ ಅಂತರ ಇಲ್ಲ. ಹಣವಂತರಿಗೊಂದು, ಜನಸಾಮಾನ್ಯರಿಗೆ ಇನ್ನೊಂದು ನ್ಯಾಯವೇ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಧಿಕಾರಿಗಳಿಗೆ ತರಾಟೆ
ಗುಡ್ಡ ಕುಸಿಯುತ್ತಿರುವ ಮಾಹಿತಿ ತಿಳಿದು ಕಂದಾಯ ಇಲಾಖೆ, ಪೊಲೀಸ್‌ ಸಹಿತ ಇತರ ಅಧಿಕಾರಿಗಳು ಸ್ಥಳಕ್ಕಾಮಿಸಿದರು. ಕುಸಿಯುವ ಭೀತಿ ಇರುವುದರಿಂದ ದೊಂಬೆ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲು ಮುಂದಾದ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಈಗ ಮುಖ್ಯರಸ್ತೆ ಮುಚ್ಚಿದರೆ ಸಾರ್ವಜನಿಕರು ನಿತ್ಯ ಸುತ್ತು ಬಳಸಿ ಬರಲು ಸಾಧ್ಯವಿಲ್ಲ. ಮೊದಲು ಗುಡ್ಡ ಕೊರೆದವರ ಮೇಲೆ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು. ಸ್ಥಳೀಯರನ್ನು ಸಮಾಧಾನಪಡಿಸಿದ ಬಳಿಕ ಬ್ಯಾರಿಕೇಡ್‌ ಹಾಗೂ ಎಚ್ಚರಿಕೆ ಫಲಕ ಅಳವಡಿಸಿ ದೊಂಬೆ ರಸ್ತೆಯಲ್ಲಿ ಸಂಚಾರ ಸ್ಥಗಿತ ಮಾಡಲಾಗಿದೆ.

ಪ್ರಕರಣ ದಾಖಲಿಸುತ್ತೇವೆ
ಈ ಕುರಿತು ಪ್ರತಿಕ್ರಿಯಿಸಿದ ಪ.ಪಂ. ಅಧಿಕಾರಿ ಅಜಯ್‌ ಭಂಡಾರ್‌ಕರ್‌ ಅವರು, ಈ ಬಗ್ಗೆ ಪರಿಶೀಲಿಸಿ, ಯಾರಿಂದಾದರೂ ತಪ್ಪಾಗಿದ್ದರೆ ಪ್ರಕರಣ ದಾಖಲಿಸಿಕೊಂಡು ಅನುಮತಿ ರದ್ದುಪಡಿಸುವುದಾಗಿ ತಿಳಿಸಿದರು.

ಸ್ಥಳಕ್ಕೆ ಬೈಂದೂರು ತಹಶೀಲ್ದಾರ್‌ ಪ್ರದೀಪ್‌ ಆರ್‌., ಕಂದಾಯ ಇಲಾಖೆಯ ಪ್ರಥಮ ದರ್ಜೆ ನಿರೀಕ್ಷಕ ದೀಪಕ್‌, ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ ಕುಮಾರ್‌, ಉಪ ವಲಯ ಅರಣ್ಯಾಧಿಕಾರಿ ಹರ್ಷ ವಿ., ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್‌, ಠಾಣಾಧಿಕಾರಿ ತಿಮ್ಮೇಶ್‌ ಬಿ.ಎನ್‌., ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಅಜಯ್‌ ಭಂಡಾರ್‌ಕರ್‌, ಕಿರಿಯ ಆರೋಗ್ಯ ನಿರೀಕ್ಷಕ ಸತೀಶ್‌ ಆರ್‌.ಚಂದನ್‌, ಗಸ್ತು ಅರಣ್ಯ ಪಾಲಕರಾದ ಶಂಕರ ಡಿ.ಎಲ್‌., ಮಂಜುನಾಥ ನಾಯ್ಕ ಮೊದಲಾದವರು ಭೇಟಿ ನೀಡಿದರು.

ಗುಡ್ಡ ಕುಸಿದರೆ ಅಧಿಕಾರಿಗಳೇ ಹೊಣೆ: ಗಂಟಿಹೊಳೆ
ಉಪ್ಪುಂದ: ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್‌ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅದಕ್ಕೆ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ. ತತ್‌ಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕ ಗುರುರಾಜ್‌ ಗಂಟಿಹೊಳೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.