Job for Reservation; ಉದ್ಯಮಗಳ ಹಿತಾಸಕ್ತಿಗೆ ಬದ್ಧ: ಎಂ. ಬಿ. ಪಾಟೀಲ್
Team Udayavani, Jul 18, 2024, 7:15 AM IST
ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿ
ಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.
ಈ ವಿಚಾರವಾಗಿ ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರ ಜತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು. ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಎಲ್ಲರ ಜತೆಗೂ ಮಾತುಕತೆ ನಡೆಸಲಾಗುವುದು ಎಂದರು.
ರಾಜ್ಯದ ಉದ್ಯಮಗಳಿಗೆ ಕೇರಳ, ಆಂಧ್ರ ಆಹ್ವಾನ
ಬೆಂಗಳೂರು/ಹೊಸದಿಲ್ಲಿ: ಕರ್ನಾಟಕದಲ್ಲಿರುವ ಖಾಸಗಿ ಸಂಸ್ಥೆಗಳನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂಗೆ ಸ್ಥಳಾಂತರಗೊಳ್ಳುವಂತೆ ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಆಹ್ವಾನಿಸಿದ್ದಾರೆ. ಜತೆಗೆ ಕೇರಳದ ಕಾನೂನು ಸಚಿವ ಪಿ. ರಾಜೀವ ಕೂಡ ನಮ್ಮಲ್ಲಿ ಉತ್ತಮ ಸೌಲಭ್ಯ ನೀಡುತ್ತೇವೆಂದು ಆಮಿಷವೊಡ್ಡಿದ್ದಾರೆ.
ಸಾಫ್ಟ್ವೇರ್ ಮತ್ತು ಸೇವಾ ಕಂಪನಿಗಳ ರಾಷ್ಟ್ರೀಯ ಸಂಘಟನೆ (ಎನ್ಎಎಸ್ಎಸ್ಸಿಒಎಂ) ಅನ್ನು ಉಲ್ಲೇಖೀಸಿ ಟ್ವೀಟ್ ಮಾಡಿರುವ ನಾರಾ ಲೋಕೇಶ್ ಎನ್ಎಎಸ್ಎಸ್ಸಿಒಎಂ ಸದಸ್ಯರೇ , ನಿಮ್ಮ ಹತಾಶೆ ನಮಗೆ ಅರ್ಥವಾಗುತ್ತದೆ. ನೀವು ನಿಮ್ಮ ಉದ್ಯಮಗಳನ್ನು ವಿಸ್ತರಿಸುವ ಅಥವಾ ಸ್ಥಳಾಂತರಿಸಲು ಯೋಜಿಸಿದರೆ ನಾವು ನಿಮ್ಮನ್ನು ಸ್ವಾಗತಿಸಲು ಸಿದ್ದರಾಗಿದ್ದೇವೆ.\
ವಿಶಾಖಪಟ್ಟಣಂನಲ್ಲಿರುವ ನಮ್ಮ ಐಟಿ, ಐಟಿ ಸೇವೆಗಳು, ಎಐ ಮತ್ತು ಡೆಟಾ ಸೆಂಟರ್ ಕ್ಲಸ್ಟರ್ಗಳಿಗೆ ನೀವು ಸ್ಥಳಾಂತರಗೊಳ್ಳಬಹುದು. ಅತ್ಯುತ್ತಮ ದರ್ಜೆಯ ಸೌಲಭ್ಯಗಳನ್ನು ಒದಗಿಸುವುದರ ಜತೆಗೆ ಸರಕಾರದಿಂದ ಯಾವುದೇ ನಿರ್ಬಂಧವಿಲ್ಲದೇ ಅತ್ಯಂತ ಸೂಕ್ತ ಪ್ರತಿಭೆಗಳನ್ನೂ ಒದಗಿಸುತ್ತೇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.