Ankola ಗಂಗಾವಳಿ ತಟದಲ್ಲಿ ಬದುಕು ಕಸಿದ ಗುಡ್ಡ


Team Udayavani, Jul 18, 2024, 1:14 AM IST

Ankola ಗಂಗಾವಳಿ ತಟದಲ್ಲಿ ಬದುಕು ಕಸಿದ ಗುಡ್ಡ

ಉದಯವಾಣಿ ಸಮಾಚಾರ
ಅಂಕೋಲಾ: ಉತ್ತರಕನ್ನಡದ  ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿಯ ಇನ್ನೊಂದು ದಡದಲ್ಲೂ ಭಾರೀ ಅನಾಹುತವೇ ಸಂಭವಿಸಿದೆ. ಮನೆಗಳು ಕುರುಹಿಲ್ಲದಂತೆ ನೆಲಸಮವಾಗಿವೆ. ಜೀವನೋಪಾಯಕ್ಕೆ ಸಾಥಿಯಾಗಿದ್ದ ದೋಣಿಗಳೂ ನಾಶವಾಗಿವೆ. ಜನರ ಬದುಕಿನ ಬುಡವೇ ಅಲುಗಾಡಿದೆ.

ನಿಜ. ಈ ಗುಡ್ಡ ಕುಸಿತದಿಂದ ಶಿರೂರು ಉಳುವರೆ ಗ್ರಾಮದಲ್ಲೀಗ ನೀರವ ಮೌನ ಆವರಿಸಿದೆ. ಎಲ್ಲಿ ನೋಡಿದರೂ ಗುಡ್ಡದ ಮಣ್ಣಿನಡಿ ಮತ್ತು ಗಂಗಾವಳಿ ನೀರಿಗೆ ಸಿಲುಕಿ ಧ್ವಂಸಗೊಂಡಿರುವ ವಸ್ತುಗಳೇ ಕಾಣಿಸುತ್ತಿವೆ. ಭಾರೀ ಪ್ರಮಾಣದ ನೀರು ನುಗ್ಗಿದ್ದರಿಂದ ಸುಮಾರು ಏಳು ಮನೆಗಳು ನೆಲಕಚ್ಚಿವೆ. 27ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ.

ಉಳುವರೆ ಗ್ರಾಮದ ಮಡುಕುಣಿ ಗೌಡರಕೊಪ್ಪ ಮತ್ತು ಅಂಬಿಗರ ಕೊಪ್ಪವಂತೂ ನೀರಿಗೆ ಆಪೋಶನವಾಗಿದೆ. ಇಲ್ಲಿಯ ಕೃಷಿ ಜಮೀನು, ನೂರಾರು ತೆಂಗಿನ ಮರ ಸೇರಿದಂತೆ ಗುಡ್ಡದಿಂದ ಜಾರಿ ಬಂದಿರುವ ಮರಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ಜನವಸತಿ ಪ್ರದೇಶ ಮತ್ತು ಮನೆಗಳಿಗೆ ಅಪ್ಪಳಿಸಿವೆ. ಇದರಿಂದ ಮನೆಗಳಿಗೂ ಹಾನಿ ಉಂಟಾಗಿದೆ.

ಎಲ್ಲ ಸಾಮಗ್ರಿಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಅನೇಕ ಮನೆಗಳೂ ಬೀಳುವ ಸ್ಥಿತಿಯಲ್ಲಿವೆ. ಅಂಬಿಗರ ಕೊಪ್ಪದಲ್ಲಂತೂ ಜೀವನೋಪಾಯಕ್ಕಾಗಿ ಇಟ್ಟುಕೊಂಡಿದ್ದ ಸುಮಾರು 50ಕ್ಕೂ ಹೆಚ್ಚು ದೋಣಿಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ಛಿದ್ರ-ಛಿದ್ರವಾಗಿವೆ.

ತಾಯಿಗಾಗಿ ಹುಡುಕಾಟ: ಇನ್ನು ಗೌಡರ ಕೊಪ್ಪದಲ್ಲಿ ಏಳು ಮನೆಗಳು ಸಂಪೂರ್ಣ ನೆಲಸಮವಾಗಿವೆ. ಎಲ್ಲೆಡೆ ಗುಡ್ಡದ ಮಣ್ಣು ತುಂಬಿಹೋಗಿದೆ. ಇಲ್ಲಿನ ಸಣ್ಣು ಗೌಡ (55) ಎಂಬ ಮಹಿಳೆ ನಾಪತ್ತೆಯಾಗಿದ್ದಾರೆ.

ನಾಪತ್ತೆಯಾಗುವ ವೇಳೆ ಅವರು ಉಟ್ಟಿದ್ದ ಸೀರೆ ಒಂದು ಬದಿಯಲ್ಲಿ ಬಿದ್ದಿದ್ದು ಅವರ ಮಗ ಮಂಜುನಾಥ ಹನುಮಂತ ಗೌಡ ಅದನ್ನು ಹಿಡಿದುಕೊಂಡು ತಾಯಿಗಾಗಿ ಹುಡುಕಾಟ ನಡೆಸುತ್ತಿರುವುದು ಮನ ಕಲಕಿಸುತ್ತಿದೆ.

ಆಭರಣ ಮಣ್ಣುಪಾಲು: ಗೌಡರ ಕೊಪ್ಪದ ನಿವಾಸಿ ನೀಲಾ ಮುದ್ದು ಗೌಡ ಅವರು ಪುತ್ರಿ ದಿವ್ಯಾಳ ಮದುವೆಗೆಂದು ನಾಲ್ಕು ಲಕ್ಷ ರೂ. ಮೌಲ್ಯದ ಆಭರಣ ಮಾಡಿಸಿಟ್ಟಿದ್ದರು. ಜತೆಗೆ ಒಂದಷ್ಟು ಹಣವನ್ನೂ ಕೂಡಿಟ್ಟಿದ್ದರು. ಎಲ್ಲವೂ ಈಗ ಗುಡ್ಡದ ಮಣ್ಣು ಪಾಲಾಗಿದೆ. ಈ ಮನೆಯವರು ಕೂಡ ಆಭರಣಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬದುಕು ಕಸಿದ ದುರಂತ: ಗುಡ್ಡ ಕುಸಿತ ದುರಂತ ನಿತ್ಯ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದವರ ಬದುಕನ್ನೇ ಕಿತ್ತುಕೊಂಡಿದೆ. ಅಂಬಿಗರು ನಿತ್ಯ ದೋಣಿ ಮೂಲಕ ಗಂಗಾವಳಿ ನದಿಯಲ್ಲಿ ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದರು. ಅಂತಹ ದೋಣಿಗಳು ಇಲ್ಲದಂತಾಗಿ ಭವಿಷ್ಯದ ಬದುಕಿಗೆ ಕತ್ತಲೆ ಕವಿದಿದೆ. ಅಲ್ಲದೇ ಮನೆಗಳಿಗೂ ಹಾನಿಯಾಗಿ ಜೀವನದ ಮೇಲೆ ಬರೆ ಎಳೆದಂತಾಗಿದೆ. ಗೌಡರಕೊಪ್ಪದವರು ನಿತ್ಯ ಅಲ್ಲಿ ಇಲ್ಲಿ ಕೂಲಿ ಕೆಲಸ ಮಾಡಿ ಪುಟ್ಟ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಆದರೆ ಗುಡ್ಡ ಕುಸಿತ ಘಟನೆ ಇವರ ಜಂಘಾಬಲವನ್ನೇ ಉಡುಗಿಸಿದೆ. ಎಲ್ಲರೂ ದಿಕ್ಕು ತೋಚದೆ ಕಂಗಾಲಾಗಿದ್ದಾರೆ.

ಗುಡ್ಡ ಕುಸಿದು ದಿನವೇ ಕಳೆದರೂ ಉಳುವರೆ ಗ್ರಾಮಕ್ಕೆ ಯಾವೊಬ್ಬ ಅಧಿಕಾರಿಗಳು ಆಗಮಿಸಿಲ್ಲ. ಜನರಿಗೆ ಕಾಳಜಿ ಕೇಂದ್ರ ಮಾಡಲು ಯಾರೂ ಇಲ್ಲ. ಸ್ಥಳೀಯರೇ ಮತ್ತು ಪಂಚಾಯತಿ ಸದಸ್ಯರೇ ಸೇರಿ ಕಾಳಜಿ ಕೇಂದ್ರ ಮಾಡಿ ದಿನಸಿ ಸಾಮಾನು ತಂದು ಜನರನ್ನು ಸ್ಥಳಾಂತರಿಸಿದ್ದೇವೆ. ನಮಗಿಲ್ಲಿ ಶಾಶ್ವತ ಪರಿಹಾರ ಕಲ್ಪಿಸಲು ಜನಪ್ರತಿನಿಧಿಗಳು ಮುಂದೆ ಬರಬೇಕು.
-ಸಂತೋಷ ಅಂಬಿಗ
ಸ್ಥಳೀಯ ನಿವಾಸಿ

-ಅರುಣ ಶೆಟ್ಟಿ

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.