Team India: ಕ್ರಿಕೆಟ್‌ ಆಯ್ಕೆ ಸಮಿತಿಯೊಂದಿಗೆ ಗಂಭೀರ್‌, ಜಯ್‌ ಶಾ ಚರ್ಚೆ

ಅನೌಪಚಾರಿಕ ಸಭೆಗೆ ಹೊಸದಿಲ್ಲಿ ನಿವಾಸದಿಂದಲೇ ಭಾಗವಹಿಸಿದ ನೂತನ ಕೋಚ್‌ ಗೌತಮ್‌

Team Udayavani, Jul 18, 2024, 7:35 AM IST

Gambir

ಹೊಸದಿಲ್ಲಿ: ಟೀಮ್‌ ಇಂಡಿಯಾದ ನೂತನ ಕೋಚ್‌ ಗೌತಮ್‌ ಗಂಭೀರ್‌ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ರಾಷ್ಟ್ರೀಯ ಆಯ್ಕೆ ಸಮಿತಿ ಜತೆ ಚರ್ಚೆ ನಡೆಸಿದ್ದಾರೆ. ಆನ್‌ಲೈನ್‌ನಲ್ಲಿ ಸುಮಾರು ಒಂದು ಗಂಟೆ ಕಾಲ ಇವರ ನಡುವೆ ಮಾತುಕತೆ ನಡೆದಿತ್ತು ಎಂಬುದಾಗಿ ಕ್ರಿಕೆಟ್‌ ವೆಬ್‌ಸೈಟ್‌ ಒಂದು ವರದಿ ಮಾಡಿದೆ.

ಅಜಿತ್‌ ಅಗರ್ಕರ್‌ ನೇತೃತ್ವದ ಆಯ್ಕೆ ಸಮಿತಿ ಸದಸ್ಯರೆಲ್ಲ ಇದರಲ್ಲಿ ಪಾಲ್ಗೊಂಡಿದ್ದರು. ಗಂಭೀರ್‌ ತಮ್ಮ ಹೊಸದಿಲ್ಲಿ ನಿವಾಸದಿಂದಲೇ ಈ ಅನೌಪಚಾರಿಕ ಸಭೆಯಲ್ಲಿ ಭಾಗವಹಿಸಿದರು. ಭವಿಷ್ಯದ ಟೀಮ್‌ ಇಂಡಿಯಾ, ತನ್ನ ಅಪೇಕ್ಷೆಯ ತಂಡ ಹಾಗೂ ನಾಯಕತ್ವದ ಕುರಿತು ಮಾತುಕತೆ ನಡೆಯಿತು. ಆಯ್ಕೆ ವಿಷಯದಲ್ಲಿ ತಾನು ಕೈಯಾಡಿಸುವುದಿಲ್ಲ, ಆದರೆ ತನ್ನ ಬಯಕೆಯ ತಂಡ ಹೇಗಿರಬೇಕು ಎಂಬ ಕುರಿತು ಗಂಭೀರ್‌ ಹೇಳಿಕೊಂಡರು ಎಂದು ವರದಿಯಾಗಿದೆ. ಮೂರೂ ಮಾದರಿಗಳಲ್ಲಿ ಆಡಬಲ್ಲ ಕ್ರಿಕೆಟಿಗರನ್ನು ತಾನು ಬಯಸುವುದಾಗಿ ಕೋಚ್‌ ಆದ ಬಳಿಕ ಗಂಭೀರ್‌ ಹೇಳಿದ್ದನ್ನು ನೆನಪಿಸಿಕೊಳ್ಳಬಹುದು.

ನಾಯಕರಾರು ಲಂಕಾ ಸರಣಿಗೆ?
ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ ನಾಯಕತ್ವದ ಕುರಿತು ಏನೇನು ಮಾತುಕತೆ ನಡೆಯಿತು ಎಂದು ತಿಳಿದು ಬಂದಿಲ್ಲ. ಟಿ20 ಹಾಗೂ ಏಕದಿನ ತಂಡಗಳು ಶೀಘ್ರದಲ್ಲೇ ಪ್ರಕಟಗೊಳ್ಳಲಿವೆ. ಟಿ20 ಸರಣಿಗೆ ಹಾರ್ದಿಕ್‌ ಪಾಂಡ್ಯ ಅಥವಾ ಸೂರ್ಯಕುಮಾರ್‌ ಯಾದವ್‌, ಏಕದಿನ ಸರಣಿಗೆ ರೋಹಿತ್‌ ಶರ್ಮ ನಾಯಕರಾಗುವ ಸಾಧ್ಯತೆ ಇದೆ.

ಏಕದಿನ ಆಡಲಿರುವ ರೋಹಿತ್‌
ರೋಹಿತ್‌ ಶರ್ಮ ಶ್ರೀಲಂಕಾ ಪ್ರವಾಸದ ಏಕದಿನ ಸರಣಿಯಲ್ಲಿ ಆಡು ವು ದಾಗಿ ಹೇಳಿರುವ ಬಗ್ಗೆ ಈ ಸಭೆ  ಯಲ್ಲಿ ಸುಳಿವು ಲಭಿಸಿದೆ. ಐಸಿಸಿ ಚಾಂಪಿ ಯನ್ಸ್‌ ಟ್ರೋಫಿ ಪಂದ್ಯಾ ವಳಿಗೂ ಮುನ್ನ ಹೆಚ್ಚಿನ ಏಕದಿನ ಪಂದ್ಯ ಗಳಿಲ್ಲದ ಕಾರಣ ರೋಹಿತ್‌ ಈ ಸರಣಿ ಯಲ್ಲಿ ಆಡುವುದು ಬಹುತೇಕ ಖಚಿತ.

ಅಯ್ಯರ್‌ ಪುನರಾಗಮನ?
ವಿರಾಟ್‌ ಕೊಹ್ಲಿ ಮತ್ತು ಜಸ್‌ಪ್ರೀತ್‌ ಬುಮ್ರಾ ಅವರಿಗೆ ವಿಶ್ರಾಂತಿ ಲಭಿಸುವ ಕಾರಣ ಶ್ರೇಯಸ್‌ ಅಯ್ಯರ್‌ ಏಕದಿನ ತಂಡವನ್ನು ಪ್ರವೇಶಿಸುವ ಸಾಧ್ಯತೆ ಇದೆ. ಹಾಗೆಯೇ ಕೆ.ಎಲ್‌. ರಾಹುಲ್‌ ಕೂಡ.

ಅಭ್ಯಾಸ ಆರಂಭಿಸಿದ ಶಮಿ
ಹೊಸದಿಲ್ಲಿ: ಮೊಹಮ್ಮದ್‌ ಶಮಿ ಬೌಲಿಂಗ್‌ ಅಭ್ಯಾಸ ಆರಂಭಿಸಿದ್ದಾರೆ. ತಮ್ಮ ಬೌಲಿಂಗ್‌ ವೀಡಿಯೋವನ್ನು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ಏಕದಿನ ವಿಶ್ವಕಪ್‌ ವೇಳೆ ಹಿಮ್ಮಡಿ ಗಾಯಕ್ಕೀಡಾಗಿದ್ದ ಶಮಿ, 9 ತಿಂಗಳಿನಿಂದ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಟಿ20 ವಿಶ್ವಕಪ್‌ನಲ್ಲೂ ಅವರಿಗೆ ಆಡಲಾಗಿರಲಿಲ್ಲ. ಶಸ್ತ್ರಚಿಕಿತ್ಸೆ ಮಾಡಿಕೊಂಡ ಬಳಿಕ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ ಪುನಶ್ಚೇತನ ಪ್ರಕ್ರಿಯೆಯಲ್ಲಿ ತೊಡಗಿದ್ದರು.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Pakistan Cricket Board: ಪಾಕ್‌ ಕ್ರಿಕೆಟ್‌ ಸ್ಟೇಡಿಯಂ ನವೀಕರಣಕ್ಕೆ ದೊಡ್ಡ ಮೊತ್ತ

Pakistan Cricket Board: ಪಾಕ್‌ ಕ್ರಿಕೆಟ್‌ ಸ್ಟೇಡಿಯಂ ನವೀಕರಣಕ್ಕೆ ದೊಡ್ಡ ಮೊತ್ತ

Hockey; India dominated against Pakistan; captain Harman scored 2 goals

Hockey; ಪಾಕ್‌ ವಿರುದ್ದ ಪ್ರಾಬಲ್ಯ ಮೆರೆದ ಭಾರತ; 2 ಗೋಲು ಬಾರಿಸಿದ‌ ನಾಯಕ ಹರ್ಮನ್

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.