Valmiki Nigama Scam; ವಾಲ್ಮೀಕಿ ನಿಗಮದ ಹಣ ಮದ್ಯ ಖರೀದಿಗೆ ಬಳಕೆ!
ಇ.ಡಿ. ಸ್ಫೋಟಕ ಮಾಹಿತಿ, ದದ್ದಲ್ ಮನೆಯಲ್ಲಿ ದಾಖಲೆ ಜಪ್ತಿ
Team Udayavani, Jul 18, 2024, 7:45 AM IST
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವರ್ಗಾವಣೆಯಾದ ಹಣ ಲೋಕಸಭಾ ಚುನಾ
ವಣೆ ವೇಳೆ ಮದ್ಯ ಖರೀದಿಗೆ ಬಳಕೆಯಾಗಿದೆ ಎಂಬ ಕಳವಳಕಾರಿ ಅಂಶವನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಹಿಂಗಗೊಳಿಸಿದೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಇ.ಡಿ., ಆಂಧ್ರ ಮತ್ತು ತೆಲಂಗಾಣದಲ್ಲಿ ಈ ಹಣ ಚುನಾವಣೆ ಸಂದರ್ಭ ದುರ್ಬಳಕೆಯಾದ ಬಗ್ಗೆ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೃಢಪಡಿಸಿದೆ. ಇದು ಸರಕಾರಕ್ಕೆ ಮತ್ತೂಂದು ಮುಜುಗರ ತಂದೊಡ್ಡಿದೆ.
ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ನಿವಾಸದಲ್ಲೇ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಜಪ್ತಿ ಮಾಡಿ ಕೊಳ್ಳಲಾಗಿದೆ. ಸಾರ್ವತ್ರಿಕ ಚುನಾವಣೆ ಗಳಿಗೆ ಸ್ವಲ್ಪ ಮೊದಲು ದೊಡ್ಡ ಪ್ರಮಾಣದ ಮದ್ಯವನ್ನು ಸಂಗ್ರಹಿಸಲು ದೊಡ್ಡ ಮೊತ್ತದ ದುಡ್ಡು ಬಳಸಲಾಗಿದೆ. ಬಂದ ಆದಾಯವನ್ನು ಬಳಸಿಕೊಂಡು ಲಂಬೋರ್ಗಿನಿ ಸೇರಿದಂತೆ ಉನ್ನತ-ಮಟ್ಟದ ವಾಹನಗಳನ್ನು ಖರೀದಿಸ ಲಾಗಿದೆ ಎಂದು ಇಡಿ ತಿಳಿಸಿದೆ.
ದಾಖಲೆ ವಶ
ಬಿ. ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಅವರ (ನಿಗಮದ ಅಧ್ಯಕ್ಷ) ನಿವಾಸದಲ್ಲಿ ಶೋಧ ಸಂದರ್ಭ ನಾಗೇಂದ್ರ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವವರು ಅಕ್ರಮ ಹಣ ವರ್ಗಾವಣೆಯಲ್ಲಿ ಶಾಮೀಲಾಗಿರುವುದು ಕಂಡು ಬಂದಿದೆ.
89.62 ಕೋಟಿ ರೂ. ದುರುಪಯೋಗ
ನಿಗಮಕ್ಕೆ ಸೇರಿದ 89.62 ಕೋಟಿ. ರೂ.ಗಳ ದುರುಪಯೋಗ ಆರೋಪದಲ್ಲಿ ನಾಗೇಂದ್ರ ಅವರನ್ನು ಜುಲೈ 12ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ), 2002ರ ನಿಬಂಧನೆಗಳ ಅಡಿಯಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದರು.
ಇದಕ್ಕೂ ಮೊದಲು ಜುಲೈ 10ರಂದು 4 ರಾಜ್ಯಗಳಲ್ಲಿ 23 ಕಡೆ ಶೋಧ ಮತ್ತು ಹಗರಣಕ್ಕೆ ಸಂಬಂಧಿಸಿದ ದಾಖಲೆ ವಶಪಡಿಸಿಕೊಳ್ಳುವ ಕಾರ್ಯಾಚರಣೆಗಳನ್ನು ನಡೆಸಿತ್ತು. ಮೇ 26ರಂದು ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆಯ ಅನಂತರ ಕರ್ನಾಟಕ ಪೊಲೀಸ್ ಮತ್ತು ಸಿಬಿಐ ದಾಖಲಿಸಿದ ಎಫ್ಐಆರ್ಗಳ ಆಧಾರದ ಮೇಲೆ ಇಡಿ ತನಿಖೆಯನ್ನು ಪ್ರಾರಂಭಿಸಿತ್ತು.
ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 18 ನಕಲಿ ಖಾತೆಗಳಿಗೆ 90 ಕೋಟಿ ರೂ. ಅಕ್ರಮವಾಗಿ ವರ್ಗ ಮಾಡಲಾಗಿದೆ. ಈ ಖಾತೆಗಳಿಂದ ಆರೋಪಿಗಳು ನಗದು ಹಾಗೂ ಚಿನ್ನಾಭರಣದ ರೂಪದಲ್ಲಿ ಈ ಸಂಪತ್ತನ್ನು ಪಡೆದಿದ್ದಾರೆ ಎಂಬ ವಿಚಾರ ಇಡಿ ತನಿಖೆಯಲ್ಲಿ ಕಂಡು ಬಂದಿದೆ.
ಇಂದು ನಾಗೇಂದ್ರ ಕಸ್ಟಡಿ ಅಂತ್ಯ
ನಾಗೇಂದ್ರ ಅವರಿಗೆ ಇ.ಡಿ. ವಿಚಾರಣೆ ಮುಂದುವರಿದಿದೆ. ಅವರನ್ನು ವಶಕ್ಕೆ ಪಡೆದ ಅವಧಿ ಗುರುವಾರಕ್ಕೆ ಮುಕ್ತಾಯಗೊಳ್ಳಲಿದ್ದು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ ನಾಗೇಂದ್ರ ಅವರನ್ನು ಕಸ್ಟಡಿಗೆ ಇಡಿ ಅಧಿಕಾರಿಗಳು ಕೇಳುವ ಸಾಧ್ಯತೆಗಳಿವೆ. ಕಸ್ಟಡಿಗೆ ನೀಡದಿದ್ದರೆ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಬೇಕಾಗಿದೆ.
ನಾಗೇಂದ್ರ ಪತ್ನಿಗೂ ಇ.ಡಿ. ಸಂಕಷ್ಟ
ಬೆಂಗಳೂರು, ಜು. 17: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ. ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ತಮ್ಮ ಕಚೇರಿಗೆ ಕರೆಸಿ ಸುದೀರ್ಘ ವಿಚಾರಣೆ ನಡೆಸಿದ್ದಾರೆ. ರಾತ್ರಿ ಮತ್ತೆ ಅವರ ನಿವಾಸಕ್ಕೆ ಕರೆದೊಯ್ದು ಬಿಟ್ಟಿದ್ದಾರೆ. ಹಗರಣದ ವಿಚಾರವನ್ನು ನಾಗೇಂದ್ರ ನಿಮ್ಮ ಬಳಿ ಹಂಚಿಕೊಂಡಿದ್ದರೇ? ಆರೋಪಿಗಳಿಂದ ನಾಗೇಂದ್ರ ಪರ ಹಣ ಪಡೆದಿದ್ದೀರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಮುಂದಿಟ್ಟು ಹೇಳಿಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.