Arrested: ರೌಡಿ ಕೊಲೆ; 20 ವರ್ಷ ಬಳಿಕ ಚಿತ್ರ ನಿರ್ದೇಶಕ ಸೆರೆ


Team Udayavani, Jul 18, 2024, 10:47 AM IST

Arrested: ರೌಡಿ ಕೊಲೆ; 20 ವರ್ಷ ಬಳಿಕ ಚಿತ್ರ ನಿರ್ದೇಶಕ ಸೆರೆ

ಬೆಂಗಳೂರು: ವಿಲ್ಸನ್‌ಗಾರ್ಡನ್‌ ಠಾಣೆ ವ್ಯಾಪ್ತಿ ಯಲ್ಲಿ 2004ರಲ್ಲಿ ನಡೆದಿದ್ದ ರೌಡಿಶೀಟರ್‌ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕನನ್ನು ಸಿಸಿಬಿಯ ಸಂಘಟಿತ ಅಪರಾಧ ದಳದ ಪೊಲೀಸರು 20 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ದುಗುಂಟೆಪಾಳ್ಯ ನಿವಾಸಿ ಗಜೇಂದ್ರ ಅಲಿಯಾಸ್‌ ಗಜ (46)  ಎಂಬಾತನನ್ನು ಬಂಧಿಸಲಾಗಿದೆ. 2004ರಲ್ಲಿ  ರಾಜಕೀಯ ರ್ಯಾಲಿಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಆಗ ಒಂದು ಗುಂಪು ರೌಡಿಶೀಟರ್‌ ಆಗಿದ್ದ ರವಿ ಅಲಿಯಾಸ್‌ ಕೊತ್ತ ರವಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಈ ಸಂಬಂಧ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಚಂದ್ರಪ್ಪ ಮತ್ತು ಬಾಬು ಎಂಬುವರ ಜತೆಗೆ 8ನೇ ಆರೋಪಿಯಾಗಿದ್ದ ಗಜೇಂದ್ರನನ್ನು ಬಂಧಿಸಲಾಗಿತ್ತು. 1 ವರ್ಷದ ಬಳಿಕ ಆರೋಪಿ ಜಾಮೀನು ಪಡೆದು ಕೊಂಡು ಬಿಡುಗಡೆಯಾಗಿದ್ದ. ಆ ನಂತರ ಆರೋಪಿ ತಮಿಳುನಾಡಿನ ವೆಲ್ಲೂರಿನಲ್ಲಿ 3 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಬಳಿಕ ಬೆಂಗಳೂರಿಗೆ ಬಂದು, ಕುಟುಂಬ ಸಮೇತ ಸುದ್ದಗುಂಟೆಪಾಳ್ಯದಲ್ಲಿ ವಾಸವಾಗಿದ್ದ ಎಂದು ಪೊಲೀಸರು ಹೇಳಿದರು.

ಸಿನಿಮಾ ನಿರ್ದೇಶಕ: ಬೆಂಗಳೂರಿಗೆ ಬಂದಿದ್ದ ಗಜೇಂದ್ರ, ಸಿನಿಮಾ ನಿರ್ದೇಶನದ ಬಗ್ಗೆ ಒಲವು ಬೆಳೆಸಿಕೊಂಡು ಸ್ಯಾಂಡಲ್‌ವುಡ್‌ನ‌ಲ್ಲಿ “ಪುಟಾಣಿ ಪವರ್‌’ ಸೇರಿ 3 ಸಿನಿಮಾಗಳನ್ನು ನಿರ್ದೇಶಿಸಿದ್ದಾನೆ. ಆದರೂ ತನ್ನ ಮೇಲಿನ ಕೊಲೆ ಕೇಸ್‌ ಬಗ್ಗೆ ಭಯಗೊಂಡಿದ್ದ ಗಜೇಂದ್ರ, ಪೊಲೀಸರು ಮರೆತಿ ದ್ದಾರೆ ಎಂದು ಭಾವಿಸಿ ಓಡಾಡಿಕೊಂಡಿದ್ದ. ಆದರೆ, ಕೋರ್ಟ್‌ಗೆ ಹಾಜರಾಗದೆ ನಾಪತ್ತೆ ಯಾಗಿದ್ದ ಆರೋಪಿಗಳ ಬಂಧಿಸು ವಂತೆ ಕೋರ್ಟ್‌ ಪೊಲೀಸರಿಗೆ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ್ದ ಸಿಸಿಬಿ ಪೊಲೀಸರು, ಆರೋಪಿಯ ಈ ಹಿಂದಿನ ವಿಳಾಸ ಪರಿಶೀಲಿಸಿದ್ದರು. ಆಗ ತಮಿಳುನಾಡಿನ ವೆಲ್ಲೂರಿಗೆ ಹೋಗಿದ್ದಾಗಿ ಗೊತ್ತಾಗಿದೆ. ನಂತರ ವೆಲ್ಲೂರಿಗೂ ಒಂದು ತಂಡ ಹೋದಾಗ, ಆತ ಬೆಂಗಳೂರಿನ ಸದ್ದುಗುಂಟೆ ಪಾಳ್ಯದಲ್ಲಿ ವಾಸವಾಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

ಬಳಿಕ ಆತನ ಮನೆಗೆ ದಾಳಿ ನಡೆಸಿ, ಆತನ ಆಧಾರ್‌ ಕಾರ್ಡ್‌, ಇತರೆ ದಾಖಲೆ ಪರಿಶೀಲಿಸಿದಾಗ ಈತನೇ ಗಜೇಂದ್ರ ಎಂದು ಖಚಿತ ಪಡಿಸಿಕೊಂಡು ಬಂಧಿಸಲಾಗಿದೆ. ಆರೋಪಿಯ ವಿಚಾರಣೆಯಲ್ಲಿ, ಪ್ರಕರಣದಲ್ಲಿ ತಮ್ಮ ಪರ ವಾದ ಮಂಡಿಸಿದ್ದ ವಕೀಲರಿಗೆ ಈ ಬಗ್ಗೆ ಪ್ರಶ್ನಿಸಿದಾಗ, ಕೇಸ್‌ ಖುಲಾಸೆಗೊಂಡಿದೆ ಎಂದು ಮಾಹಿತಿ ನೀಡಿದ್ದರು. ಹೀಗಾಗಿ ಸುಮ್ಮನಾಗಿದ್ದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.