Bigg Boss Kannada ಸೀಸನ್‌ 11ರ ಆರಂಭಕ್ಕೆ ಸಿದ್ಧತೆ; ಸ್ಪರ್ಧಿಗಳಾಗಿ ಬರುವವರು ಇವರೇನಾ?


Team Udayavani, Jul 18, 2024, 1:49 PM IST

Bigg Boss Kannada ಸೀಸನ್‌11ರ ಆರಂಭಕ್ಕೆ ಸಿದ್ಧತೆ; ಸ್ಪರ್ಧಿಗಳಾಗಿ ಬರುವವರು ಇವರೇನಾ?

ಬೆಂಗಳೂರು: ಬಿಗ್ ಬಾಸ್‌ (BIGG BOSS) ಕಾರ್ಯಕ್ರಮಕ್ಕೆ ಆಯಾ ಭಾಷೆಯಲ್ಲಿ ಪ್ರತ್ಯೇಕವಾದ ವೀಕ್ಷಕರ ಬಳಗವೇ ಇದೆ. ಅದು ಯಾವುದೇ ಭಾಷೆಯಲ್ಲಿರಲಿ ʼಬಿಗ್‌ ಬಾಸ್‌ʼ ವಿವಾದಾತ್ಮಕ ಕಾರ್ಯಕ್ರಮವೆನ್ನುವ ಹಣೆಪಟ್ಟಿಯನ್ನೇ ಹೊಂದಿದೆ. ಅದಕ್ಕೆ ಕಾರಣ ದೊಡ್ಮನೆಯೊಳಗೆ ನಡೆಯುವ ಕೆಲ ಚಟುವಟಿಕೆ ಹಾಗೂ ಸ್ಪರ್ಧಿಗಳೆಂದರೆ ತಪ್ಪಾಗದು.

ಇತ್ತೀಚೆಗೆ ಬಿಗ್ ಬಾಸ್ ಮಲಯಾಳಂ ಸೀಸನ್ 6 ಮುಕ್ತಾಯ ಕಂಡಿದೆ. ಸದ್ಯ ಹಿಂದಿ ಬಿಗ್‌ ಬಾಸ್‌ ಓಟಿಟಿ ಸೀಸನ್‌ ಸಾಗುತ್ತಿದೆ. ಈ ನಡುವೆ ಕಳೆದ ವರ್ಷ ಭಾರೀ ಸದ್ದು ಮಾಡಿದ್ದ ಕನ್ನಡ ಬಿಗ್‌ ಬಾಸ್‌ ಕಾರ್ಯಕ್ರಮದ 11ನೇ ಸೀಸನ್‌ ಆರಂಭಕ್ಕೆ ತೆರೆಮರೆಯಲ್ಲಿ ಸಿದ್ಧತೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಕಿರುತೆರೆ, ಬೆಳ್ಳಿತೆರೆ, ಮಾಧ್ಯಮ, ರಾಜಕೀಯ, ಸಾಮಾಜಿಕ, ಸೋಶಿಯಲ್‌ ಮೀಡಿಯಾ ಹೀಗೆ ನಾನಾ ಕ್ಷೇತ್ರದಲ್ಲಿ ಸಾಧನೆಗೈದ, ವಿವಾದದ ಮೂಲಕ ಸುದ್ದಿಯಾದ ಒಂದಷ್ಟು ಜನರು ಸ್ಪರ್ಧಿಗಳಾಗಿ ಕ್ಯಾಮರಾ ಕಣ್ಗಾವಲಿನ ʼಬಿಗ್‌ ಬಾಸ್‌ʼ ಮನೆಯೊಳಗೆ ಎಂಟ್ರಿ ಆಗುತ್ತಾರೆ.

ಕನ್ನಡದಲ್ಲಿ ಬಿಗ್‌ ಬಾಸ್‌ ಕಾರ್ಯಕ್ರಮಕ್ಕೆ ಹೆಚ್ಚಿನ ವೀಕ್ಷಕರಿದ್ದಾರೆ. ಕಿಚ್ಚ ಸುದೀಪ್‌ (Kichcha Sudeep) ಅವರು ನಡೆಸಿಕೊಡುವುದರಿಂದ ಈ ಕಾರ್ಯಕ್ರಮ ಕಿರುತೆರೆಯಲ್ಲಿ ಹೊಸ ಬಗೆಯ ದಾಖಲೆಯನ್ನು ಪ್ರತಿ ಸೀಸನ್‌ ನಲ್ಲೂ ಬರೆಯುತ್ತದೆ.

ಯಾವಾಗ ಶುರು ಬಿಗ್‌ ಬಾಸ್‌ ಸೀಸನ್ 11?:

ಇದೀಗ ಬಿಗ್‌ ಬಾಸ್‌ ಸೀಸನ್‌ 11ರ ಆರಂಭಕ್ಕೆ ಸಿದ್ದತೆಗಳು ನಡೆಯುತ್ತಿದೆ ಎಂದು ವರದಿಯಾಗಿದೆ. ಬೆಂಗಳೂರು ಹೊರವಲಯದಲ್ಲಿ ನಡೆಯುವ ಬಿಗ್‌ ಬಾಸ್‌ ಕಾರ್ಯಕ್ರಮದ ಮನೆಯ ತಯಾರಿಗಾಗಿ ನೂರಾರು ಜನರ ಅಗತ್ಯವಿರುತ್ತದೆ. ಇದಕ್ಕಾಗಿ ತಿಂಗಳುಗಟ್ಟಲೆ ಸಮಯಬೇಕು. ಹಾಗಾಗಿ ಸೆಪ್ಟೆಂಬರ್‌ ಅಂತ್ಯಕ್ಕೆ ಅಥವಾ ಅಕ್ಟೋಬರ್‌ 3ನೇ ವಾರದಿಂದ ಹೊಸ ಸೀಸನ್‌ ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ.

ಇವರೇನಾ ಸ್ಪರ್ಧಿಗಳು.. ಪ್ರತಿ ಸೀಸನ್‌ ನಲ್ಲಿ ಬಿಗ್‌ ಬಾಸ್‌ ಆರಂಭವಾಗುವ ಮುನ್ನವೇ ಸ್ಪರ್ಧಿಗಳು ಯಾರಾಗಲಿದ್ದಾರೆ ಎನ್ನುವುದೇ ಕುತೂಹಲದ ವಿಚಾರ. ಸ್ಪರ್ಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಅಷ್ಟು ಸುಲಭದಲ್ಲ. ವಿವಿಧ ಕ್ಷೇತ್ರಗಳ ಜೊತೆ ವಿವಿಧ ಮನಸ್ಥಿತಿಯವರು ದೊಡ್ಮನೆಯೊಳಗೆ ಇದ್ದರೆ ಆಟ ಸಾಗುವ ರೀತಿ ನೋಡುವುದೇ ಚೆಂದ. ಹಾಗಾಗಿ ಆಯೋಜಕರಿಗೆ ಇದೊಂದು ಸವಾಲೇ ಸರಿ.

ಬಿಗ್‌ ಬಾಸ್‌ ಸೀಸನ್ 11 ಆರಂಭವಾಗಲಿದೆ ಎನ್ನುವ ದೂರದ ಮಾತು ಕೇಳಿ ಬರುತ್ತಿರುವ ಬೆನ್ನಲ್ಲೇ ಸ್ಪರ್ಧಿಗಳು ಯಾರು ಎನ್ನುವುದರ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ. ʼಮಜಾಭಾರತʼ ಖ್ಯಾತಿಯ ರಾಘವೇಂದ್ರ, ಯೂಟ್ಯೂಬರ್‌ ವರ್ಷಾ ಕಾವೇರಿ, ನಟ ತ್ರಿವಿಕ್ರಮ್‌ ,‘ಬೃಂದಾವನ’ ಧಾರಾವಾಹಿ ನಟ ವರುಣ್ ಆರಾಧ್ಯ, ತುಕಾಲಿ ಸಂತು ಪತ್ನಿ ಮಾನಸಾ, ಸುನೀಲ್ ರಾವ್, ಭವ್ಯಾ ಗೌಡ, ಮೋಕ್ಷಿತಾ ಪೈ, ರೀಲ್ಸ್ ರೇಷ್ಮಾ ಸೇರಿದಂತೆ ಇತರರ ಹೆಸರು ಕೂಡ ಈ ಬಾರಿಯ ಬಿಗ್‌ ಬಾಸ್‌ ಸ್ಪರ್ಧಿಗಳ ಲಿಸ್ಟ್‌ ನಲ್ಲಿ ಕೇಳಿ ಬರುತ್ತಿದೆ. ಆದರೆ ಅಧಿಕೃತ ಮಾಹಿತಿ ಹೊರಬರಲು ಇನ್ನೂ ಕೆಲ ತಿಂಗಳುಗಳೇ ಬೇಕು.

ಸೀಸನ್‌ 10ರಲ್ಲಿ ಹತ್ತಾರು ವಿವಾದಗಳು.. ಕಳೆದ ಸೀಸನ್‌ ಅಂದರೆ ಬಿಗ್‌ ಬಾಸ್‌ ಸೀಸನ್‌ 10 ಕಾರ್ಯಕ್ರಮದಲ್ಲಿ ಹತ್ತಾರು ವಿವಾದಗಳು ಎಬ್ಬಿದ್ದವು. ಹುಲಿ ಉಗುರು ಧರಿಸಿದ್ದಾರೆ ಎನ್ನುವ ಆರೋಪದ ಮೇಲೆ ವರ್ತೂರು ಸಂತೋಷ್‌ ಅವರನ್ನು ಅರಣ್ಯ ಅಧಿಕಾರಿಗಳು ಬಿಗ್‌ ಬಾಸ್‌ ಮನೆಯೊಳಗೆ ಬಂದೇ ವಶಕ್ಕೆ ಪಡೆದುಕೊಂಡಿದ್ದರು. ಈ ಸುದ್ದಿ ಅಂದು ಟಿವಿ ಮಾಧ್ಯಮಗಳಲ್ಲಿ ಹತ್ತಾರು ದಿನ ಸುದ್ದಿಯಾಗಿತ್ತು. ಸಮುದಾಯವೊಂದರ ಬಗ್ಗೆ ತನಿಷಾ ಕುಪ್ಪಂಡ ಅವರು ಅವಮಾನವಾಗುವ ರೀತಿ ಮಾತನಾಡಿದ್ದಾರೆ ಎನ್ನುವ ಕಾರಣಕ್ಕೆ ಅವರ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಟಾಸ್ಕ್‌ ವೊಂದರಲ್ಲಿ ಕಣ್ಣಿಗೆ ಸೋಪಿನ ನೀರು ತಾಗಿ ಸಂಗೀತಾ , ಡ್ರೋನ್‌ ಪ್ರತಾಪ್‌ ಆಸ್ಪತ್ರೆಗೆ ಸೇರಿದ್ದರು.

ಕಳೆದ ಸೀಸನ್‌ ನಲ್ಲಿ ಕಿಚ್ಚ ಸುದೀಪ್‌ ಅವರು ಸಿನಿಮಾ ಚಿತ್ರೀಕರಣದ ಕಾರಣ, ಕೆಲ ಎಪಿಸೋಡ್‌ ಗಳನ್ನು ಮಿಸ್‌ ಮಾಡಿಕೊಂಡಿದ್ದರು. ಈ ಬಾರಿ ಕಿಚ್ಚ ಸುದೀಪ್‌ ಅವರೇ ಕಾರ್ಯಕ್ರಮ ನಡೆಸಿಕೊಡುತ್ತಾರೋ ಅಥವಾ ಬೇರೆ ಯಾರಾದರೂ ನಡೆಸಿಕೊಡುತ್ತಾರೋ ಎನ್ನುವುದನ್ನು ಕಾದುನೋಡಬೇಕಿದೆ.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Tv Actor Varun: ಪ್ರೀತಿಸಿ ದ್ರೋಹ, ಧಮ್ಕಿ; ನಟ ವರುಣ್‌ ಮೇಲೆ ಕೇಸ್‌

11-bigg-boss

Bigg Boss Kannada-11: ಬಿಗ್ ಬಾಸ್.. ಪ್ರೋಮೊ ರಿಲೀಸ್: ಆ್ಯಂಕರ್ ಯಾರೆಂಬುದೇ ಕುತೂಹಲ !

3

BBK-11: ಕಿಚ್ಚನ ಹೆಸರು ತೆಗೆದು ಹಾಕಿದ ವಾಹಿನಿ; ಬಿಗ್‌ ಬಾಸ್‌ಗೆ ಸುದೀಪ್‌ ಅನುಮಾನ?

7

Vikas Sethi: ಮಲಗಿದ್ದಲ್ಲೇ ಹೃದಯ ಸ್ತಂಭನ; 48ರ ಹರೆಯದಲ್ಲಿ ಖ್ಯಾತ ನಟ ನಿಧನ

Bigg Boss Tamil 8: ತಮಿಳು ಬಿಗ್‌ ಬಾಸ್‌ಗೆ ನಿರೂಪಕನಾಗಿ ಆಗಿ ಎಂಟ್ರಿ ಕೊಟ್ಟ ʼಮಹಾರಾಜʼ

Bigg Boss Tamil 8: ತಮಿಳು ಬಿಗ್‌ ಬಾಸ್‌ಗೆ ನಿರೂಪಕನಾಗಿ ಆಗಿ ಎಂಟ್ರಿ ಕೊಟ್ಟ ʼಮಹಾರಾಜʼ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.