Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!
Team Udayavani, Jul 18, 2024, 4:21 PM IST
ಸೈದಾಪುರ/ಯಾದಗಿರಿ: ವ್ಯಕ್ತಿಹೋರ್ವ ತನ್ನ ಪತ್ನಿ ಅತ್ತೆ, ಮಾವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಸೈದಾಪುರ ಬಳಿ ನಡೆದಿದೆ. ಕುಟುಂಬದಲ್ಲಿ ಉಂಟಾದ ಕಲಹವು ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ.
ಕೊಲೆಯಾದ ಮೂವರು ದಾವಣಗೆರೆ ಮೂಲದವರಾಗಿದ್ದು, ಪತ್ನಿ ಅನ್ನಪೂರ್ಣ (25), ಅತ್ತೆ ಕವಿತಾ (45) ಮಾವ ಬಸವರಾಜಪ್ಪ (52) ಕೊಲೆಯಾದ ದುರ್ದೈವಿಗಳು. ಮುನಗಾಲ ಗ್ರಾಮದ ನಿವಾಸಿ ನವೀನ (35) ಕೊಲೆ ಮಾಡಿದ ಆರೋಪಿ.
ಆರೋಪಿ ನವೀನ್ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ದಾವಣಗೆರೆ ಮೂಲದ ಅನ್ನಪೂರ್ಣಳನ್ನು ಮದುವೆಯಾಗಿದ್ದ. ಅನ್ನಪೂರ್ಣ ಮತ್ತು ನವೀನ್ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇದೆ. ಆದರೆ ಒಂದು ವರ್ಷದ ಹಿಂದೆ ಗಂಡನ ಕಿರುಕುಳ ತಾಳದೆ ಅನ್ನಪೂರ್ಣ ವಾಪಸ್ ತವರು ಮನೆಗೆ ಹೋಗಿದ್ದಳು.
ಆದರೆ ಬುಧವಾರ ಮತ್ತೆ ಜೊತೆಗೆ ಇರೋಣಾ ಎಂದು ನವೀನ್ ಪತ್ನಿಯನ್ನು ಕರೆದಿದ್ದ. ಹೀಗಾಗಿ ನ್ಯಾಯ ಪಂಚಾಯತಿ ಮಾಡಿ ಮತ್ತೆ ಜೊತೆಗಿರಲು ಒಪ್ಪಿಗೆ ನೀಡಿದ ನಂತರ ಮಗಳನ್ನ ಗಂಡ ಮನೆಗೆ ಬಿಡಲು ದಾವಣಗೆರೆಯಿಂದ ಅನ್ನಪೂರ್ಣ ಪೋಷಕರು ಬಂದಿದ್ದರು. ರಾಜಿ ಪಂಚಾಯತಿ ಬಳಿಕ ಅತ್ತೆ ಮಾವನನ್ನು ಬಸ್ ನಿಲ್ದಾಣಕ್ಕೆ ಕಾರಿನಲ್ಲಿ ಬಿಡಲು ಪತಿ ಪತ್ನಿ ಹೋಗಿದ್ದರು. ಈ ವೇಳೆ ನವೀನ್ ಕಬ್ಬಿಣದ ರಾಡ್ ಹಾಗೂ ಚಾಕುನಿಂದ ಕೊಲೆ ಮಾಡಿದ್ದಾನೆ.
ಕೊಲೆ ಮಾಡಿ ವಡಗೇರ ತಾಲ್ಲೂಕಿನ ಜೋಳದಡಗಿ ಬಳಿ ಶವ ಬಿಸಾಡಿದ್ದಾನೆಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಅನ್ನಪೂರ್ಣ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು
Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!
Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು
Yadagairi: ಶಾಲಾ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಟೋ ಪಲ್ಟಿ, ತಪ್ಪಿದ ದುರಂತ.!
Yadagiri; ಹೈಕಮಾಂಡ್ ಹೇಳಿದರೆ ಸಿಎಂ ಆಗಲೂ ನಾನು ರೆಡಿ: ಸಚಿವ ಶರಣಬಸಪ್ಪ ದರ್ಶನಾಪುರ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.