Dowry ಕಿರುಕುಳಕ್ಕೆ ಮಹಿಳೆ ಬಲಿ: ಪತಿ, ಆತನ ಮೊದಲ ಪತ್ನಿ ಸೇರಿ ನಾಲ್ವರಿಗೆ 7 ವರ್ಷ ಜೈಲು
ಮಂಗಳೂರಿನಲ್ಲಿ ವರದಕ್ಷಿಣೆಗಾಗಿ ದೈಹಿಕ ಮತ್ತು ಮಾನಸಿಕ ಹಿಂಸೆಗೆ ಬಲಿಯಾಗಿದ್ದ ರೇಷ್ಮಾ ಬಾನು
Team Udayavani, Jul 18, 2024, 8:38 PM IST
ಮಂಗಳೂರು: ವರದಕ್ಷಿಣೆ ಸಾವು ಪ್ರಕರಣವೊಂದರಲ್ಲಿ ಮೃತ ಮಹಿಳೆಯ ಗಂಡ, ಆತನ ಮೊದಲನೇ ಪತ್ನಿ, ಅತ್ತೆ ಮತ್ತು ಮೊದಲನೇ ಪತ್ನಿಯ ಅಣ್ಣನಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿನ ಸಜೆ ಮತ್ತು ತಲಾ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಭದ್ರಾವತಿ ತಾಲೂಕು ತಿಪ್ಲಾಪುರ ಗ್ರಾಮದ ಮಜೀದ್ ಅಹಮ್ಮದ್ (35), ಆತನ ಮೊದಲನೇ ಪತ್ನಿ ಸಪೂರ ಅಂಜುಮ್ (28), ತಾಯಿ ಮಮ್ತಾಜ್ ಬಾನು (60) ಮತ್ತು ಸಪೂರಳ ಅಣ್ಣ ಭದ್ರಾವತಿ ಹಳೆನಗರದ ಕಾಜಿ ಮೊಹಲ್ಲ 4 ನೇ ಕ್ರಾಸ್ ನಿವಾಸಿ ಜಮೀರ್ ಅಹಮ್ಮದ್ (30) ಶಿಕ್ಷೆಗೊಳಗಾದವರು. ಚೆನ್ನಗಿರಿಯ ರೇಷ್ಮಾ ಬಾನು (26) ಮೃತ ಮಹಿಳೆ.
ರೇಷ್ಮಾ ಬಾನುವನ್ನು ಮಜೀದ್ ಅಹಮ್ಮದ್ ಎರಡನೇ ಮದುವೆಯಾಗಿದ್ದು, ಬಳಿಕ ಕಾಟಿಪಳ್ಳ 9 ನೇ ಬ್ಲಾಕ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಸುರತ್ಕಲ್ನಲ್ಲಿ ಗ್ಯಾರೇಜ್ ನಡೆಸುತ್ತಿದ್ದ. ತಾಯಿ ಹಾಗೂ ಇತರರೊಂದಿಗೆ ಸೇರಿ ರೇಷ್ಮಾ ಬಾನು ವಿಗೆ ವರದಕ್ಷಿಣೆಗಾಗಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ. ಅದರಂತೆ 2019 ರ ಏ.28 ರಂದು ಮಧ್ಯಾಹ್ನ ರೇಷ್ಮಾ ರೂಮ್ನಲ್ಲಿ ಮಲಗಿದ್ದಾಗ ಆರೋಪಿ ಮಜೀದ್ ಗ್ಯಾರೇಜ್ನಿಂದ ಬಂದು ದಿಂಬುವಿನಿಂದ ಉಸಿರುಗಟ್ಟಿಸಿ ಅಸ್ವಸ್ಥಗೊಳಿಸಿದ್ದ. ಬಳಿಕ ನಾಲ್ವರು ಸೇರಿ ಚೂಡಿದಾರ ಶಾಲ್ನಿಂದ ಕುತ್ತಿಗೆಗೆ ಸುತ್ತಿ ಫ್ಯಾನ್ಗೆ ನೇಣಿಗೆ ಹಾಕುತ್ತಾರೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.