NEET-UG ಪರೀಕ್ಷೆ ಫಲಿತಾಂಶ ನಾಳೆ ಮಧ್ಯಾಹ್ನದೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್
Team Udayavani, Jul 19, 2024, 6:00 AM IST
ಹೊಸದಿಲ್ಲಿ: ಪಾರದರ್ಶಕತೆ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುರುತು ಮರೆಮಾಚಿ ಕೇಂದ್ರವಾರು ಮತ್ತು ನಗರವಾರು ನೀಟ್-ಯುಜಿ ಪರೀಕ್ಷೆಯ ಫಲಿತಾಂಶ ಶನಿವಾರ (ಜು.20) ಮಧ್ಯಾಹ್ನ 12 ಗಂಟೆಯೊಳಗೆ ಪ್ರಕಟಿಸುವಂತೆ ಎನ್ಟಿ ಎಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚಿಸಿತು.
ಇಡೀ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದ್ದರೆ ಮಾತ್ರವೇ ಮರು ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ ಕೋರ್ಟ್, ವಿಚಾರಣೆಯನ್ನು ಜು.22ಕ್ಕೆ ಮುಂದೂಡಿತು.
ಮರು ಪರೀಕ್ಷೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಆರಂಭಿಸಿದ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು, ಲಕ್ಷಾಂತರ ಯುವಕರು ನಮಗಾಗಿ ಕಾಯುತ್ತಿದ್ದಾರೆ. ಅರ್ಜಿಗಳ ವಿಚಾರಣೆ ನಡೆಸಿ, ನಿರ್ಧಾರ ಮಾಡೋಣ. ಇಡೀ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದೆ ಎಂಬುದು ಸಾಬೀತಾದರೆ ಮಾತ್ರವೇ ಮರು ಪರೀಕ್ಷೆ ನಡೆಸಬಹುದು ಎಂದು ತಿಳಿಸಿತು.
ಇದೇ ವೇಳೆ, ಸಿಬಿಐ ನಮಗೆ ಏನು ಹೇಳಿದೆ ಎಂಬುದನ್ನು ನಾವು ಬಹಿರಂಗ ಮಾಡಿದರೆ ತನಿಖೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಸಿಜೆಐ ಹೇಳಿದರು. ಟೆಲಿಗ್ರಾಂನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಪೀಠವು, ಈ ರೀತಿ ಕೆಲಸವನ್ನು ಯಾರೋ ಹಣಕ್ಕಾಗಿ ಮಾಡಿರುತ್ತಾರೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಾಕಷ್ಟು ಸಂಪರ್ಕ ಬೇಕಾಗುತ್ತವೆ. ಎಲ್ಲ ನಗರಗಳಲ್ಲೂ ಸಂಪರ್ಕ ಸಾಧಿಸಬೇಕಾಗುತ್ತದೆ ಎಂದು ಹೇಳಿತು. ಎನ್ಟಿಎ ಕೂಡ ಇದು ಸುಳ್ಳು ಸುದ್ದಿ ಎಂದು ವಾದಿಸಿತು.
7 ಸ್ತರದ ಭದ್ರತೆ: ಅರ್ಜಿದಾರರ ಪರ ವಕೀಲರು, ಹಝಾರಿಬಾಗ್ನಲ್ಲಿ ಇ-ರಿûಾದಲ್ಲಿ ಪ್ರಶ್ನೆಪತ್ರಿಕೆಗಳಿರುವ ಟ್ರಂಕ್ ಒಯ್ದಿರುವ ಬಗ್ಗೆ ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮುದ್ರಣದಿಂದ ಕೇಂದ್ರದವರೆಗಿನ ವ್ಯವಸ್ಥೆಯನ್ನು ಸಿಬಿಐ ತನಿಖೆ ನಡೆಸುತ್ತಿದೆ. ಪ್ರಶ್ನೆಪತ್ರಿಕೆ ಸಾಗಣೆಗೆ 7 ಸ್ತರದ ಭದ್ರತೆ ಒದಗಿಸಲಾಗಿರುತ್ತದೆ. ಜಿಪಿಎಸ್ ಟ್ರ್ಯಾಕಿಂಗ್ ಕೂಡ ಇರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.