Assembly: ಶೇ.24.1 ಹಣ ಪರಿಶಿಷ್ಟರಿಗೆ ಕಾನೂನು ತಂದವ ನಾನು

ಸರಕಾರದ ಕಾರ್ಯಕ್ರಮ ವಿವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Team Udayavani, Jul 19, 2024, 7:40 AM IST

CM-siddarama

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಆಧರಿಸಿ ಒಟ್ಟಾರೆ ಬಜೆಟ್‌ನ ಶೇ. 24.1ರಷ್ಟು ಹಣವನ್ನು ಆ ವರ್ಗಕ್ಕೇ ಖರ್ಚು ಮಾಡಬೇಕೆಂಬ ಕಾನೂನು ತಂದಿದ್ದೇ ನಾವು. ಮುಂಬಡ್ತಿಯಲ್ಲಿ ಮೀಸಲಾತಿ, 1 ಕೋಟಿ ರೂ. ಮೊತ್ತದವರೆಗಿನ ಕಾಮಗಾರಿಯ ಗುತ್ತಿಗೆಯಲ್ಲಿ ಮೀಸಲಾತಿ, ಕೆಐಎಡಿಬಿ ಭೂಮಿ ಖರೀದಿಸಲು ಶೇ.75 ರಷ್ಟು ನೆರವು ಕೊಡುವ ಕಾನೂನು ತಂದಿದ್ದೇ ನಾವು..

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಪಕ್ಷಗಳ ಆರೋಪಗಳಿಗೆ ಗುರುವಾರ ವಿಧಾನಸಭೆಯಲ್ಲಿ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರಕಾರ ಏನೇನು ಮಾಡಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು.

ರಾಜ್ಯದ ಜನಸಂಖ್ಯೆಯಲ್ಲಿ ಶೇ.17.15 ರಷ್ಟು ಪರಿಶಿಷ್ಟ ಜಾತಿಯವರಿದ್ದು, ಶೇ. 6.95ರಷ್ಟು ಪರಿಶಿಷ್ಟ ಪಂಗಡದವರಿದ್ದಾರೆ. ಸಮ ಸಮಾಜ ನಿರ್ಮಾಣ ಆಗಬೇಕಿದ್ದರೆ ಸಾಮಾಜಿಕವಾಗಿ, ಆರ್ಥಿಕವಾಗಿ ಈ ವರ್ಗಗಳಿಗೆ ಶಕ್ತಿ ಬರಬೇಕು. ಅಸಮಾನತೆ ತೊಲಗಿಸಬೇಕು ಎಂದು ನಮ್ಮ ಸಂವಿಧಾನದಲ್ಲಿದೆ. ಸಂವಿಧಾನ ಜಾರಿಯಾಗಿ 77 ವರ್ಷವಾದರೂ ಸಮಾನತೆ ಬಂದಿಲ್ಲ. ಅದಕ್ಕಾಗಿಯೇ ನಿಗಮಗಳನ್ನು ರಚಿಸಿ, ಆ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ.

ನನ್ನ ಬದ್ಧತೆ ಬದಲಾಗದು
ಬಿಜೆಪಿಯವರು ಏನು ಮಾಡದೇ ಇದ್ದರೂ ಪರಿಶಿಷ್ಟರಿಗೆ ಅನ್ಯಾಯ ಆಗಿದೆ ಎನ್ನುತ್ತಾರೆ. ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸಿದರೆ ಸಾಲದು. ಅವರಿಗೆ ಸಾಮಾಜಿಕ, ಆರ್ಥಿಕ ನ್ಯಾಯ ಸಿಗಬೇಕು. ಅದು ನಮ್ಮ ಬದ್ಧತೆ. ಆ ಬದ್ಧತೆ ಈಗಲೂ ಇದೆ, ಮುಂದೆಯೂ ಇರುತ್ತದೆ. ಸಾಯುವವರೆಗೂ ಇರುತ್ತದೆ. ಅದರಲ್ಲಿ ಯಾವ ಬದಲಾವಣೆಯೂ ಆಗುವುದಿಲ್ಲ. ಈ ವಿಚಾರದಲ್ಲಿ ಬಿಜೆಪಿಯವರಿಂದ ಪಾಠ ಕಲಿಯಬೇಕಿಲ್ಲ. ಯಾರಿಂದಲೂ ಪಾಠ ಹೇಳಿಸಿಕೊ ಳ್ಳುವ ಅಗತ್ಯವಿಲ್ಲ ಎಂದು ಸಮರ್ಥಿಸಿಕೊಂಡರು.

ಕೇಂದ್ರ ಸರಕಾರ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಏಕೆ ಮಾಡಿಲ್ಲ?
2013ರ ಡಿಸೆಂಬರ್‌ನಲ್ಲಿ ನಾನು ಮುಖ್ಯ ಮಂತ್ರಿಯಾಗಿದ್ದಾಗ ಬೆಳಗಾವಿ ಅಧಿವೇಶನದ ವೇಳೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತಂದೆ. ಈ ಕಾಯ್ದೆಯಂತೆ 2024- 25ರ 1.60 ಲಕ್ಷ ಕೋಟಿ ರೂ.ಗಳ ಬಜೆಟ್‌ನಲ್ಲಿ ಶೇ. 24.1ರಷ್ಟನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿಟ್ಟಿದ್ದೇವೆ. ಈ ಕಾನೂನು ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಬಿಟ್ಟರೆ ಬೇರೆಲ್ಲೂ ಇಲ್ಲ. ಮುಂಭಡ್ತಿಯಲ್ಲಿ ಮೀಸಲಾತಿ ತಂದಿದ್ದೇವೆ. ಇದನ್ನು ಸುಪ್ರೀಂ ಕೋರ್ಟ್‌ ಕೂಡ ಎತ್ತಿಹಿಡಿ ದಿದೆ. 1 ಕೋಟಿ ರೂ.ವರೆಗಿನ ಕಾಮಗಾರಿಯ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದೇವೆ ಎಂದರು.

ಮುಂದಿನ ಸಂಪುಟದಲ್ಲಿ ಕನ್ನಡಿಗರಿಗೆ ಮೀಸಲು ವಿಧೇಯಕ: ಸಿಎಂ ಸ್ಪಷ್ಟನೆ
ಖಾಸಗಿ ವಲಯದ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ವಿಧೇಯಕವನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ಸದನದ ಮುಂದೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಷಯ ಪ್ರಸ್ತಾವಿಸಿದ ವಿಪಕ್ಷ ನಾಯಕ ಆರ್‌. ಅಶೋಕ್‌, ಖಾಸಗಿ ಉದ್ಯಮ ಗಳಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಉದ್ಯೋಗದ ಭರವಸೆ ಕೊಟ್ಟು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದ ನೀವು ಅದನ್ನು ಅಳಿಸಿ ಹಾಕಿದ್ದೇಕೆ? ಇದೇನು ತಘಲಕ್‌ ದರ್ಬಾರೇ ಎಂದು ಪ್ರಶ್ನಿಸಿದರು.

ಯಾವ ಮೊಹಮ್ಮದ್‌ ಬಿನ್‌ ತುಘಲಕ್‌ನ ಆಡಳಿತವೂ ಇಲ್ಲಿಲ್ಲ. ಇಲ್ಲಿರುವುದು ಸಿದ್ದರಾಮಯ್ಯ ಸರಕಾರವೇ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕದ ಬಗ್ಗೆ ಅರೆಬರೆ ಚರ್ಚೆಯಾಗಿತ್ತು. ಸ್ವಲ್ಪ ಗೊಂದಲಗಳಿತ್ತು. ಹೀಗಾಗಿ ಮುಂದಿನ ಸಂಪುಟ ಸಭೆಯ ಮುಂದೆ ತರೋಣ ಎಂದಿದ್ದೆ. ಗೊಂದಲ ನಿವಾರಣೆ ಮಾಡಿ ಅಧಿವೇಶನದ ಮುಂದೆಯೂ ತರುತ್ತೇವೆ ಎಂದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.