Holenarasipura; ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿ ಬಲಿ!
Team Udayavani, Jul 19, 2024, 10:51 AM IST
ಹಾಸನ: ಶಂಕಿತ ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾರೆ.
ಹೊಳೆನರಸೀಪುರ ತಾಲೂಕು, ಹಳ್ಳಿಮೈಸೂರು, ಹೋಬಳಿ ಗೋಹಳ್ಳಿ ಗ್ರಾಮದ ಮಂಜುನಾಥ – ರೇಖಾ ದಂಪತಿ ಪುತ್ರ ಕುಶಾಲ್ (22) ಶಂಕಿತ ಡೆಂಗ್ಯೂಗೆ ಬಲಿಯಾದ ವೈದ್ಯ ವಿದ್ಯಾರ್ಥಿ.
ಹಾಸನದ ವೈದ್ಯಕೀಯ ಕಾಲೇಜು (ಹಿಮ್ಸ್) ವಿದ್ಯಾರ್ಥಿ ಕುಶಾಲ್ ಅವರು ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಪರಿಸ್ಥಿತಿ ಬಿಗಡಾಯಿಸಿದಾಗ ಗುರುವಾರ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಕುಶಾಲ್ ತಾಯಿ ರೇಖಾ ಅವರೂ ಡೆಂಗ್ಯೂ ಶಂಕಿತ ಜ್ವರದಿಂದ ಬಳಲುತ್ತಿದ್ದು ಮಗ ದಾಖಲಾಗಿದ್ದ ಆಸ್ಪತ್ರೆಯಲ್ಲೇ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.