Ballari: ಕಾರ್ಖಾನೆಯಲ್ಲಿ ಸಿಲಿಂಡರ್ ಸ್ಫೋಟ; ಒಬ್ಬ ಸಾವು, ನಾಲ್ವರಿಗೆ ಗಾಯ
ಸುರಕ್ಷತಾ ಕ್ರಮ ಅನುಸರಿಸದೆ ಕೆಲಸ ಮಾಡಿಸಲಾಗಿದೆ ಎಂದು ಮೃತನ ಪತ್ನಿಯಿಂದ ದೂರು
Team Udayavani, Jul 19, 2024, 9:20 PM IST
ಬಳ್ಳಾರಿ: ತಾಲೂಕಿನ ಹಲಕುಂದಿ ಗ್ರಾಮದ ಬಳಿಯಿರುವ ಫ್ಯಾಕ್ಟರಿಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಒಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆಯಲ್ಲಿ ರಾಜಸ್ಥಾನ ಮೂಲದ ಕುನ್ವಾರ್ ಸಿಂಗ್ ಅಲಿಯಾಸ್ ಕುಮಾರ್ ಸಿಂಗ್ (40) ಎಂಬ ಕಾರ್ಮಿಕ ಮೃತಪಟ್ಟಿದ್ದು, ಮೋಹನ್ ಪ್ರಸಾದ್ ಕುಸ್ಮಾ, ಸುಮನ್, ಜಿತೇಂದ್ರ, ದಿನೇಶ್ ಎಂಬುವವರು ಗಾಯಗೊಂಡಿದ್ದಾರೆ.
ತಾಲೂಕಿನ ಹಲಕುಂದಿ ಬಳಿಯ ವಿಆರ್ಕೆಪಿ ಸ್ಯಾಂಜ್ ಆ್ಯಂಡ್ ಪವರ್ ಪ್ಲಾಂಟ್ ಎಲ್ಎಲ್ಪಿ ಕಾರ್ಖಾನೆಯಲ್ಲಿ ಮೆಕಾನಿಕಲ್ ಫೋರ್ಮನ್ ಆಗಿ ಕೆಲಸ ಮಾಡುತ್ತಿದ್ದ ಕುನ್ವಾರ್ ಸಿಂಗ್, ಕಳೆದ ಜು.12 ರಂದು ಕಬ್ಬಿಣದ ಹಾಳೆಗಳನ್ನು ವೆಲ್ಡಿಂಗ್ ಯಂತ್ರದಿಂದ ಕತ್ತರಿಸುವ ವೇಳೆ ಅಲ್ಲೇ ಇದ್ದ ಸಿಲಿಂಡರ್ಗೆ ಕಿಡಿ ತಾಗಿದೆ. ಆಗ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿದ್ದ ಕುನ್ವಾರ್ ಸಿಂಗ್ ಸೇರಿ ಐವರು ಗಾಯಗೊಂಡಿದ್ದಾರೆ.
ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ತಲೆಗೆ ತೀವ್ರವಾಗಿ ಗಾಯವಾಗಿದ್ದ ಕುನ್ವಾರ್ ಸಿಂಗ್ನನ್ನು ವಿಮ್ಸ್ಗೆ ದಾಖಲಿಸಿತ್ತಾದರೂ, ಜುಲೈ 17ರಂದು ಅಸುನೀಗಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಕುನ್ವಾರ್ ಸಿಂಗ್ ಪತ್ನಿ ಸರೋಜ್ ಸಿಂಗ್, ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಪತಿಯನ್ನು ಕೆಲಸಕ್ಕೆ ನಿಯೋಜಿಸಿದ್ದ ಕಾರ್ಖಾನೆಯ ಸೂಪರ್ವೈಸರ್, ಜಾರ್ಖಂಡ್ ಮೂಲದ ಸುರಜಿತ್ ಮಹತೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.