Mangaluru ಕಳವು ಪ್ರಕರಣ: ಮೂವರ ಬಂಧನ; 4.64 ಲ.ರೂ. ಮೌಲ್ಯದ ಚಿನ್ನಾಭರಣ ವಶ

ಮತ್ತೊಂದು ಕಳವು ಪ್ರಕರಣ ಭೇದಿಸಿದ ಉರ್ವ ಪೊಲೀಸರು

Team Udayavani, Jul 20, 2024, 12:37 AM IST

Mangaluru ಕಳವು ಪ್ರಕರಣ: ಮೂವರ ಬಂಧನ; 4.64 ಲ.ರೂ. ಮೌಲ್ಯದ ಚಿನ್ನಾಭರಣ ವಶ

ಮಂಗಳೂರು: ಕೋಡಿಕಲ್‌ ವಿವೇಕಾನಂದ ನಗರದ ಮನೆ ಯಲ್ಲಿ ಜು.6ರಂದು ನಡೆದಿದ್ದ ಕಳವಿಗೆ ಸಂಬಂಧಿಸಿ ಮೂವ ರನ್ನು ಬಂಧಿಸಿ, ಅವರಿಂದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿ ಕೊಳ್ಳುವ ಮೂಲಕ ಉರ್ವ ಠಾಣೆಯ ಪೊಲೀಸರು ಮತ್ತೊಂದು ಪ್ರಕರಣವನ್ನು ಭೇದಿಸಿದ್ದಾರೆ.

ಬೆಂಗಳೂರು ಮೂಲದ ವೆಂಕಟೇಶ್‌ ಆಲಿಯಾಸ್‌ ವೆಂಕಿ (21), ಸಾಗರ್‌(21) ಮತ್ತು ರಂಜಿತ್‌ (20) ಬಂಧಿತರು. ಇವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಗಂಗೌಡನಹಳ್ಳಿಯಲ್ಲಿ ಬಂಧಿಸಲಾಗಿದೆ.

ಕೃತ್ಯಕ್ಕೆ ಬಳಸಿದ್ದ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಗಳು ಬೆಂಗಳೂರು, ಮಂಗಳೂರು ಸಹಿತ ರಾಜ್ಯದ ಹಲ ವೆಡೆ ಮನೆ ಕಳ್ಳತನ ನಡೆಸಿರುವುದು ತನಿಖೆ ವೇಳೆ ಗೊತ್ತಾಗಿದೆ.

ಕದ್ರಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಭಾಗಿ ಯಾಗಿರುವುದನ್ನೂ ಒಪ್ಪಿಕೊಂಡಿದ್ದಾರೆ. ವೆಂಕಿಯ ಮೇಲೆ 18 ಹಾಗೂ ಸಾಗರ್‌ ಮೇಲೆ 6 ಕಳವು ಪ್ರಕರಣಗಳು ದಾಖಲಾಗಿವೆ.

ಹಗಲಲ್ಲೇ ಕಳವು
ಮನೆ ಮಂದಿ ಬೆಳಗ್ಗೆ 9 ಗಂಟೆ ಸುಮಾರಿಗೆ ಕೆಲಸಕ್ಕೆ ಹೋಗಿ ಸಂಜೆ 5.45ಕ್ಕೆ ವಾಪಸು ಬಂದಾಗ ಕಳವು ನಡೆದಿರುವುದು ಗೊತ್ತಾಗಿತ್ತು. ಕಪಾಟಿನ ಲಾಕರ್‌ ಮುರಿದು 8 ಚಿನ್ನದ ಉಂಗುರಗಳು, ಬಳೆಗಳು, ಸರ ಗಳು, ಬೆಳ್ಳಿಯ ಆಭರಣಗಳು ಹಾಗೂ 6,000 ರೂ. ನಗದನ್ನು ಕಳ್ಳರು ಒಯ್ದಿದ್ದರು.

ಚಡ್ಡಿಗ್ಯಾಂಗ್‌ನಿಂದಲೂ ಕೃತ್ಯ!
ಕೋಡಿಕಲ್‌ನ ವಿವೇಕಾನಂದ ನಗರದ ಒಂದು ಭಾಗದಲ್ಲಿ ಜು. 6ರಂದು ಹಗಲಿನಲ್ಲೇ ವೆಂಕಿ, ಸಾಗರ್‌ ಮತ್ತು ರಂಜಿತ್‌ ಕಳವು ನಡೆಸಿದ್ದರೆ, ಜು.7ರ ನಸುಕಿನ ವೇಳೆ ಇನ್ನೊಂದು ಭಾಗದ ಮನೆಗೆ ನುಗ್ಗಿದ್ದ “ಚಡ್ಡಿಗ್ಯಾಂಗ್‌’ ನವರು ಹಣ ಕದ್ದಿದ್ದರು. ಬಳಿಕ ಇದೇ ಗ್ಯಾಂಗ್‌ನವರು ಜು.9ರಂದು ನಸುಕಿನ ವೇಳೆ ಕೋಟೆಕಣಿಯಲ್ಲಿ ದಂಪತಿಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಬಳಿಕ ಉರ್ವ ಪೊಲೀಸರ ಬಲೆಗೆ ಬಿದ್ದಿದ್ದರು.

ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಆದೇಶದಂತೆ, ಡಿಸಿಪಿಗಳಾದ ಸಿದ್ದಾರ್ಥ ಗೋಯಲ್‌ ಮತ್ತು ದಿನೇಶ್‌ ಕುಮಾರ್‌ ನಿರ್ದೇಶನದಂತೆ, ಸಹಾಯಕ ಪೊಲೀಸ್‌ ಆಯುಕ್ತ ಪ್ರತಾಪ್‌ ಸಿಂಗ್‌ ತೋರಟ್‌ ಮಾರ್ಗದರ್ಶನದಂತೆ, ಉರ್ವ ಠಾಣೆ ನಿರೀಕ್ಷಕಿ ಭಾರತಿ ನೇತೃತ್ವದಲ್ಲಿ ಪಿಎಸ್‌ಐಗಳಾದ ಹರೀಶ್‌ ಎಚ್‌.ವಿ,, ಅನಿತಾ ಎಚ್‌.ಬಿ,, ಎಎಸ್‌ಐ ವಿನಯ್‌ ಕುಮಾರ್‌, ಸಿಬಂದಿ ವರ್ಗದ ಪುಷ್ಟರಾಜ್‌, ರಾಮಚಂದ್ರ, ಸತೀಶ್‌ ಎಚ್‌.ಕೆ., ಪ್ರಮೋದ್‌ ಕೆ., ವೆಂಕಟೇಶ್‌, ಅಭಿಷೇಕ್‌, ಭಾಸ್ಕರ್‌, ಯಲ್ಲಾಲಿಂಗ, ಮಮತಾ, ಚಂದ್ರಹಾಸ್‌, ಶರತ್‌ ಹಾಗೂ ಮಂಗಳೂರು ನಗರ ಗಣಕಯಂತ್ರ ವಿಭಾಗದ ಸಿಬಂದಿ ಮನೋಜ್‌ ಅವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.