KAVACHಸುರಕ್ಷ ವ್ಯವಸ್ಥೆ ಅಳವಡಿಕೆ ಇನ್ನಷ್ಟು ತ್ವರಿತಗತಿಯಲ್ಲಿ ನಡೆಯಲಿ


Team Udayavani, Jul 20, 2024, 6:04 AM IST

vande bharat

ಒಂದೆರಡು ವರ್ಷಗಳಿಂದೀಚೆಗೆ ದೇಶದಲ್ಲಿ ರೈಲು ದುರಂತಗಳು ಪದೇಪದೆ ಸಂಭವಿಸುತ್ತಿವೆ. ಹಿಂದೆಗೆ ಹೋಲಿಸಿದಲ್ಲಿ ಕಳೆದೊಂದು ದಶಕದ ಅವಧಿಯಲ್ಲಿ ರೈಲು ದುರ್ಘ‌ಟನೆಗಳ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದ್ದರೂ ಅಲ್ಲಲ್ಲಿ ಸಣ್ಣಪುಟ್ಟ ಅವಘಡಗಳು ಸಂಭವಿಸಿ, ಪ್ರಯಾಣಿಕರು ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಲೇ ಇವೆ. ರೈಲು ಯಾನವನ್ನು ಇನ್ನಷ್ಟು ಸುರಕ್ಷಿತ ವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮತ್ತು ಭಾರತೀಯ ರೈಲ್ವೇ ಹೆಚ್ಚಿನ ಒತ್ತು ನೀಡಬೇಕಿರುವುದು ಸದ್ಯದ ತುರ್ತು.

ತಿಂಗಳ ಹಿಂದೆಯಷ್ಟೇ ಪಶ್ಚಿಮ ಬಂಗಾಲದ ಡಾರ್ಜಿಲಿಂಗ್‌ನಲ್ಲಿ ಕಾಂಚನ ಗಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್‌ ರೈಲೊಂದು ಢಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದರೆ, 43 ಮಂದಿ ಗಾಯಗೊಂಡಿದ್ದರು. ಗುರುವಾರ ಉತ್ತರ ಪ್ರದೇಶದ ಗೊಂಡಾ ಸಮೀಪ ಮೋತಿಗಂಜ್‌ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು ಹಳಿ ತಪ್ಪಿ ಸಂಭವಿಸಿದ ದುರಂತದಲ್ಲಿ ನಾಲ್ವರು ಸಾವನ್ನಪ್ಪಿದರೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ತಿಂಗಳ ಅವಧಿಯಲ್ಲಿ ಎರಡು ರೈಲು ಅಪಘಾತ ಸಂಭವಿಸಿರುವುದು ದೇಶದ ಜನತೆಯಲ್ಲಿ ರೈಲು ಯಾನದ ಸುರಕ್ಷೆಯ ಕುರಿತಂತೆ ಅನುಮಾನಗಳು ಮೂಡುವಂತೆ ಮಾಡಿದೆ.

ಪ್ರತಿಯೊಂದು ದುರಂತ ಸಂಭವಿಸಿದಾಗಲೂ ದುರಂತದ ಕಾರಣ ತಿಳಿಯಲು ರೈಲ್ವೇ ಮಂಡಳಿ ತನಿಖಾ ಸಮಿತಿ ರಚಿಸಿ, ವರದಿಯನ್ನು ಪಡೆಯುತ್ತ ಬಂದಿದೆ ಯಾದರೂ ಈ ಸಮಿತಿಗಳು ನೀಡುವ ವರದಿಯನ್ನು ಗಂಭೀರವಾಗಿ ಪರಿಗಣಿಸ ದಿರುವುದೇ ಇಂತಹ ದುರ್ಘ‌ಟನೆಗಳು ಪದೇಪದೆ ಸಂಭವಿಸಲು ಕಾರಣ ವಾಗುತ್ತಿವೆ ಎಂಬ ಆರೋಪ ಸಾರ್ವತ್ರಿಕವಾಗಿ ಕೇಳಿ ಬರುತ್ತಿದೆ.

ದೇಶದಲ್ಲಿನ ರೈಲು ಸೇವೆಯ ಆಧುನೀಕರಣ, ಸುರಕ್ಷೆಗಾಗಿ ಸರಕಾರ ಹೆಚ್ಚಿನ ಪ್ರಮಾಣ  ದಲ್ಲಿ ಅನುದಾನವನ್ನು ವಿನಿಯೋಗಿಸುತ್ತಿದೆಯಾದರೂ ದುರ್ಘ‌ಟನೆ ಗಳನ್ನು ಸಂಪೂರ್ಣವಾಗಿ ತಪ್ಪಿಸಲು ಇಲಾಖೆಗೆ ಇನ್ನೂ ಸಾಧ್ಯವಾಗಿಲ್ಲ. ಭಾರ ತೀಯ ರೈಲ್ವೇಯ ಮಹತ್ವಾಕಾಂಕ್ಷೆಯ ಸ್ವಯಂಚಾಲಿತ ಸುರಕ್ಷ ವ್ಯವಸ್ಥೆಯಾದ “ಕವಚ್‌’ ತಂತ್ರಜ್ಞಾನದ ಅಳವಡಿಕೆಗೆ ಇನ್ನಷ್ಟು ವೇಗ ನೀಡಬೇಕಿದೆ. ಈ ಬಗ್ಗೆ ಕಾಂಚನಗಂಗಾ ಎಕ್ಸ್‌ಪ್ರೆಸ್‌ ದುರಂತದ ಕುರಿತಂತೆ ತನಿಖೆ ನಡೆಸಿದ್ದ ರೈಲ್ವೇ ಸುರಕ್ಷ ವಿಭಾಗದ ಮುಖ್ಯ ಆಯುಕ್ತರು ಸಲ್ಲಿಸಿರುವ ತಾತ್ಕಾಲಿಕ ವರದಿಯಲ್ಲಿಯೂ ಬೆಟ್ಟು ಮಾಡಿದ್ದಾರೆ. ರೈಲುಗಳ ಕಾರ್ಯಾಚರಣ ಪ್ರಕ್ರಿಯೆಯಲ್ಲಿನ ಬಹುಹಂತದ ವೈಫ‌ಲ್ಯದ ಕಾರಣಗಳಿಂದಾಗಿ ಕಂಚನಗಂಗಾ ದುರಂತ ಸಂಭವಿಸಿದೆ ಎಂದೂ ಆಯುಕ್ತರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಹವಾಮಾನ ವೈಪರೀತ್ಯ, ಸ್ವಯಂಚಾಲಿತ ಸಿಗ್ನಲ್‌ ವ್ಯವಸ್ಥೆಯ ವೈಫ‌ಲ್ಯ ಮತ್ತಿತರ ಸಂದರ್ಭಗಳಲ್ಲಿ ರೈಲು ಕಾರ್ಯಾಚರಣೆಯನ್ನು ಸಮರ್ಪಕವಾಗಿ ನಿಯಂ ತ್ರಿಸುವ ಪರ್ಯಾಯ ವಿಧಾನದ ಕೊರತೆ ರೈಲ್ವೇ ಇಲಾಖೆಯನ್ನು ಬಾಧಿ ಸುತ್ತಿದೆ. ರೈಲುಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ತಂತ್ರಜ್ಞಾನವನ್ನು ವ್ಯಾಪಕ ವಾಗಿ ಬಳಸಿ ಕೊಳ್ಳಲಾಗುತ್ತಿದೆಯಾದರೂ ಇಂದಿಗೂ ಹಲವಾರು ಕೆಲಸ ಕಾರ್ಯಗಳಿಗೆ ರೈಲ್ವೇ ಇಲಾಖೆ ಸಿಬಂದಿಯನ್ನೇ ಅವಲಂಬಿಸಿದೆ. ಈ ಸಿಬಂದಿಯ ಸಣ್ಣ ಲೋಪ ಕೂಡ ದೊಡ್ಡ ಅನಾಹುತಕ್ಕೆ ಕಾರಣವಾಗುತ್ತಿದ್ದು ರೈಲುಗಳ ಕಾರ್ಯಾಚರಣೆ ಪ್ರಕ್ರಿಯೆ ಯಲ್ಲಿ ಮಾನವ ಲೋಪವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಇಲಾಖೆ ಇನ್ನಷ್ಟು ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು.

ರೈಲು ನಿಲ್ದಾಣ, ಸಿಗ್ನಲ್‌ಗ‌ಳಲ್ಲಿ ಕಾರ್ಯ ನಿರ್ವಹಿಸುವ ಸಿಬಂದಿಗೆ ಪೂರೈಸ ಲಾಗುತ್ತಿರುವ ಸಾಧನ, ಸಲಕರಣೆಗಳಿಗೂ ಆಧುನಿಕ ಸ್ಪರ್ಶ ನೀಡುವ ಅಗತ್ಯವಿದೆ. ಇಂದಿನ 6ಜಿ ಯುಗದಲ್ಲಿಯೂ ಅದೇ ಶತಮಾನದಷ್ಟು ಹಳೆಯ ದಾದ ವಾಕಿ ಟಾಕಿಯ ಬದಲಿಗೆ ಸುಧಾರಿತ ಸಾಧನಗಳನ್ನು ಅಧಿಕಾರಿಗಳು ಮತ್ತು ಸಿಬಂದಿಗೆ ಮಾತ್ರವಲ್ಲದೆ ರೈಲು ಚಾಲಕರಿಗೂ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.