Anandapura: ತಾವರೆ ಹಳ್ಳಿ ಗ್ರಾಮದಲ್ಲಿ ಭೂ ಕುಸಿತ, ಆತಂಕದಲ್ಲಿ ಗ್ರಾಮಸ್ಥರು
Team Udayavani, Jul 20, 2024, 5:17 PM IST
ಆನಂದಪುರ: ಕಳೆದ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗೌರಿಕೆರೆ ಕೋಡಿಯಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿ ಭೂಕುಸಿತ ಉಂಟಾಗುತ್ತಿದೆ. ಗೌರಿ ಕೆರೆಯ ಕೋಡಿ ನೀರು ತಾವರೆಹಳ್ಳಿ ಗ್ರಾಮದ ಮೂಲಕ ಶರಾವತಿ ಸೇರಲಿದೆ.
ಕೊಡಿಯಲ್ಲಿ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವ ಕಾರಣ ಭೂಕುಸಿತ ಉಂಟಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ಕೊಡಿಯ ಪಕ್ಕದಲ್ಲಿ ಗ್ರಾಮದ ರಸ್ತೆಯಿದ್ದು ಭೂ ಕುಸಿತ ಮುಂದುವರೆದರೆ. ರಸ್ತೆ ಕೂಡ ಕುಸಿದು ಹೋಗುವುದಲ್ಲದೆ, ಅಂಗನವಾಡಿ ಸೇರಿದಂತೆ 10 ಕುಟುಂಬಗಳು ಸಂಪರ್ಕ ಕಳೆದುಕೊಳ್ಳುವುದಲ್ಲದೆ ಅನಾಹುತ ಸಂಭವಸುವ ಆದ್ಯತೆ ಇದೆ. ವಿಷಯ ತಿಳಿದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಭೂಕುಸಿತವಾಗುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪತಸಿಲ್ದಾರ್ ಅವರಿಗೆ ಗ್ರಾಮಸ್ಥರು ತ್ವರಿತವಾಗಿ ಶಾಶ್ವತ ಪರಿಹಾರ ನೀಡುವಂತೆ ಮನವಿ ನೀಡಿದರು. ಮನವಿಯನ್ನು ಸ್ವೀಕರಿಸಿ. ಈ ಭೂಕುಸಿತದ ವಿಚಾರವಾಗಿ ತಕ್ಷಣವೇ ಸರ್ಕಾರದ ಗಮನಕ್ಕೆ ತರುವುದಾಗಿ ಪ್ರಭಾರಿ ಉಪ ತಹಸಿಲ್ದಾರ್ ಕವಿರಾಜ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ಕುಮಾರ್ ತಿಳಿಸಿದರು. ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ. ಪಂಚಾಯತ್ ಉಪಾಧ್ಯಕ್ಷ ರೂಪಕಲ, ಮಾಜಿ ಅಧ್ಯಕ್ಷ ನೇತ್ರಾವತಿ ಮಂಜುನಾಥ್, ಸದಸ್ಯ ಮೋಹನ್ ಕುಮಾರ್ ಕಾಲೋನಿ, ಕಂದಾಯ ಇಲಾಖೆಯ ಗೋವಿಂದ್ ಮೂರ್ತಿ, ರವೀಂದ್ರ, ರಿತೀಶ್, ತುಕ್ಕೋಜಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.