Dakshina Kannada, Udupi ಮಳೆ ಇಳಿಮುಖ: ಕಡಲಬ್ಬರ ತೀವ್ರ , ಮೀನುಗಾರಿಕೆ ಶೆಡ್‌ ,ಮನೆ ಕುಸಿತ


Team Udayavani, Jul 21, 2024, 6:00 AM IST

1-maleee

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಶನಿವಾರ ದಿನವಿಡೀ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದೆ.

ಮಂಗಳೂರಿನಲ್ಲಿ ಬೆಳಗ್ಗೆ, ಸಂಜೆ ಮಳೆಯಾ ಗಿದ್ದು, ರಾತ್ರಿ ಮುಂದುವರೆದಿದೆ. ಉಳಿದಂತೆ ಮೋಡದಿಂದ ಕೂಡಿದ ವಾತಾವರಣ ಇತ್ತು. ಜಿಲ್ಲೆಯ ವಿವಿಧ ಭಾಗದಲ್ಲಿ ಸೃಷ್ಟಿಯಾಗಿದ್ದ ಕೃತಕ ನೆರೆ ಇಳಿಮುಖಗೊಂಡಿದೆ. ಸುಬ್ರಹ್ಮಣ್ಯ ದಲ್ಲಿ ಕಮಾರಧಾರಾ ಸ್ನಾನಘಟ್ಟ ಮುಳುಗಡೆ ಸ್ಥಿತಿಯಲ್ಲಿದೆ. ಹೆದ್ದಾರಿಯಲ್ಲಿದ್ದ ನೆರೆ ನೀರು ತೆರವುಗೊಂಡಿದೆ.

ಇಂದು ಆರೆಂಜ್‌ ಅಲರ್ಟ್‌
ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಜು.22ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಕುಕ್ಕೆ: ಮಳೆ ಇಳಿಮುಖ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರ ದಲ್ಲಿ ಐದು ದಿನಗಳಿಂದ ಸುರಿಯುತ್ತಿದ್ದ ಮಳೆ ಶನಿವಾರ ಇಳಿಮುಖವಾಗಿದೆ. ಇದರಿಂದಾಗಿ ಪ್ರವಾಹ ಸದೃಶವಾಗಿ ಹರಿ ಯುತ್ತಿದ್ದ ಕುಮಾರಧಾರಾ ಶಾಂತವಾಗಿ ನೀರು ಇಳಿಮುಖವಾಗುತ್ತಿದೆ. ದರ್ಪಣತೀರ್ಥ ಸೇತುವೆ ಸಂಚಾರಕ್ಕೆ ತೆರವುಗೊಂಡಿದೆ. ಗ್ರಾಮೀಣ ಭಾಗದಲ್ಲೂ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಕುಮಾರಧಾರಾದ ಸ್ನಾನಘಟ್ಟ ಶನಿವಾರವೂ ಮುಳುಗಡೆಯಾಗಿಯೇ ಇದೆ.

ಹರೇಕಳ: ಮನೆ ಕುಸಿತ
ಉಳ್ಳಾಲ: ಮನೆಮಂದಿ ರಾತ್ರಿ ವೇಳೆ ಮನೆಯೊಳಗಿದ್ದ ಸಂದರ್ಭ ಭಾರೀ ಮಳೆಗೆ ಮನೆಯ ಮಹಡಿ ಭಾಗಶಃ ಕುಸಿದುಬಿದ್ದಿದ್ದು, ದಂಪತಿ ಹಾಗೂ ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಹರೇಕಳ ರಾಜಗುಡ್ಡೆ ಶಾಲೆಯ ಮಣಿಬೆಟ್ಟು ಎಂಬಲ್ಲಿ ವಸಂತ್‌ ಪೂಜಾರಿ ಎಂಬವರ ಮನೆ ಭಾಗಶ; ಕುಸಿದುಬಿದ್ದಿದ್ದು, ತಡರಾತ್ರಿ ಮಲಗಿದ್ದಾಗ ಹಂಚುಗಳು ಬೀಳಲು ಆರಂಭವಾಗುವ ಅಪಾಯದ ಮುನ್ಸೂಚನೆ ಅರಿತ ಮನೆಯವರು ಹೊರಗೋಡಿ ಸಂಭಾವ್ಯ ಅನಾಹುತದಿಂದ ಪಾರಾಗಿದ್ದಾರೆ. ಕೂಲಿ ಕಾರ್ಮಿಕರಾಗರುವ ವಸಂತ ಪೂಜಾರಿ ಅವರು ಆರ್ಥಿಕವಾಗಿ ಹಿಂದುಳಿದಿದ್ದು, ಸದ್ಯಕ್ಕೆ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ.

ಕಡಲಿನ ಅಬ್ಬರ
ಉಡುಪಿ ಜಿಲ್ಲೆಯಲ್ಲಿ ಶನಿವಾರ ಮಳೆ ಪ್ರಮಾಣ ತಗ್ಗಿದ್ದು, ಹಲವೆಡೆ ಸಾಧಾರಣ ಮಳೆಯಾಗಿದೆ. ಮೂರ್ನಾಲ್ಕು ದಿನಗಳಿಂದ ಬಿಡುವಿಲ್ಲದೆ ನಿರಂತರ ಸುರಿದಿದ್ದ ಮಳೆ ಶನಿವಾರ ಕಡಿಮೆಯಾಗಿತ್ತು. ಜಿಲ್ಲೆಯ ಸಮುದ್ರ ತೀರದಲ್ಲಿ ಕಡಲಿನ ಅಬ್ಬರ ಮುಂದುವರಿದಿದೆ.

ನೆರೆ, ಹಾನಿಯಿಂದ ಬಳಲಿದ್ದ ಕುಂದಾಪುರ, ಬೈಂದೂರು, ಉಡುಪಿ, ಕಾಪು ತಾಲೂಕು ವ್ಯಾಪ್ತಿಯ ಗ್ರಾಮಗಳು ಜನ ಜೀವನ ಸಹಜ ಸ್ಥಿತಿಗೆ ಮರಳಿವೆ. ತಗ್ಗು ಪ್ರದೇಶಗಳಲ್ಲಿ ನೆರೆ ನೀರು ಇಳಿಮುಖವಾಗಿದ್ದು, ಜಲಾವೃತಗೊಂಡಿದ್ದ ರಸ್ತೆಗಳು ಸುಗಮ ಸಂಚಾರಕ್ಕೆ ಮುಕ್ತವಾಗಿವೆ. ಬೆಳಗ್ಗೆ ಹಾಗೂ ಮಧ್ಯಾಹ್ನ ವೇಳೆ ಕುಂದಾಪುರ, ಉಡುಪಿ, ಕಾಪು, ಸಿದ್ದಾಪುರ, ಹೆಬ್ರಿ, ಕಾರ್ಕಳ, ಅಜೆಕಾರು, ಬ್ರಹ್ಮಾವರ, ಪಡುಬಿದ್ರಿ, ಬೆಳ್ಮಣ್‌, ಬೈಂದೂರು, ಹಿರಿಯಡಕ ಭಾಗದಲ್ಲಿ ಬಿಸಿಲು-ಮೋಡ ಕವಿದ ವಾತಾವರಣ ನಡುವೆ ಸಣ್ಣದಾಗಿ ಕೆಲಕಾಲ ಮಳೆಯಾಗಿದೆ.

ಜಿಲ್ಲೆಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲತೀರದ ನಿವಾಸಿಗಳಲ್ಲಿ ಆತಂಕ ದೂರವಾಗಿಲ್ಲ. ಕುಂದಾಪುರ, ಉಡುಪಿ, ಪಡುಬಿದ್ರಿ, ಬ್ರಹ್ಮಾವರ, ಕಾಪು, ಮಲ್ಪೆ ಭಾಗದ ಸಮುದ್ರ ತೀರದಲ್ಲಿ ಎತ್ತರ ಗಾತ್ರದಲ್ಲಿ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಕಡಲು ಕೊರೆತ ಪ್ರಮಾಣ ಹೆಚ್ಚಳವಾಗಿದ್ದು, ಉಡುಪಿ ಗುಜ್ಜರ್‌ಬೆಟ್ಟಿನಲ್ಲಿ ಅಲೆಗಳ ಹೊಡೆತಕ್ಕೆ ತೆಂಗಿನ ಮರಗಳು ಸಮುದ್ರಪಾಲಾಗಿವೆ. ಕುಂದಾಪುರ ತಾಲೂಕು ವ್ಯಾಪ್ತಿ 53 ಮನೆಗಳಿಗೆ ಹಾನಿಯಾಗಿದ್ದು, 21 ಕಡೆಗಳಲ್ಲಿ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟು 64 ಮನೆಗಳಿಗೆ 13 ಜಾನುವಾರು ಕೊಟ್ಟಿಗೆಗಳಿಗೆ ಹಾನಿ ಸಂಭವಿಸಿದೆ.

ಮೀನುಗಾರಿಕೆ ಶೆಡ್‌ ಭಾಗಶಃ ಧರಾಶಾಯಿ
ಪಡುಬಿದ್ರಿ: ನಡಿಪಟ್ಣ ಪ್ರದೇಶದ ಕಡಲ್ಕೊರೆತ ಸಮಸ್ಯೆ ಉಲ್ಬಣಿಸಿದ್ದು, ಅಪಾಯದ ಸ್ಥಿತಿಯನ್ನು ಎದುರಿಸುತ್ತಿದ್ದ ಮಹೇಶ್ವರೀ ಮಾಟುಬಲೆ ಫಂಡ್‌ನ‌ ಮೀನುಗಾರಿಕೆ ಶೆಡ್‌ನ‌ ಪಶ್ಚಿಮ ಬದಿಯ ಕೋಣೆಯು ಧರಾಶಾಯಿಯಾಗಿದೆ.

ಸ್ಥಳಕ್ಕೆ ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಅವರು ಕಾಪು ತಹಶೀಲ್ದಾರ್‌ ಡಾ| ಪ್ರತಿಭಾ, ಮೀನುಗಾರಿಕಾ ಇಲಾಖಾ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಶೋಭಾ ಅವರೊಂದಿಗೆ ಭೇಟಿಯಿತ್ತು ಪರಿಶೀಲಿಸಿದ್ದಾರೆ. ಫಂಡ್‌ನ‌ ತಂಡೇಲರಾದ ಅಶೋಕ್‌ ಸಾಲ್ಯಾನ್‌ ಅವರು ತಮ್ಮ ಈ ಮೀನುಗಾರಿಕೆ ಶೆಡ್ಡನ್ನು ಉಳಿಸುವತ್ತ ಪ್ರಯತ್ನಗಳು ಆಗಬೇಕಿದೆ ಎಂದು ಶಾಸಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.