Nipah virus; ನಿಫಾ ಸೋಂಕಿಗೆ 14 ವರ್ಷದ ಕೇರಳ ಬಾಲಕ ಮೃತ್ಯು

ಆರೋಗ್ಯ ಸಚಿವೆ ವೀಣಾ ಜಾರ್ಜ್ ಘೋಷಣೆ, ಕರ್ನಾಟಕದ ಗಡಿ ಜಿಲ್ಲೆಯಲ್ಲೂ ಹೈ ಅಲರ್ಟ್‌

Team Udayavani, Jul 21, 2024, 5:19 PM IST

Nipha

ಮಲಪ್ಪುರಂ : ನಿಫಾ ವೈರಸ್ (Nipah virus) ಸೋಂಕಿಗೆ ಒಳಗಾಗಿದ್ದ ಮಲಪುರಂ ಜಿಲ್ಲೆಯ  14 ವರ್ಷದ ಬಾಲಕ ಹೃದಯಸ್ತಂಭನ (cardiac arrest) ದಿಂದ ಮೃತಪಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ಹೇಳಿಕೆ ನೀಡಿದ್ದಾರೆ.

ಸಚಿವೆ ವೀಣಾ ಮಾತನಾಡಿ ಬಾಲಕ ಭಾನುವಾರ ಬೆಳಗ್ಗೆ ಮಂಜೇರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಳಗ್ಗೆ 11:30ರ ಸಮಯದಲ್ಲಿ ಕೊನೆಯುಸಿರೆಳೆದಿರುವುದು ಗೊತ್ತಾಗಿದೆ. ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್​ನ ನಿವಾಸಿಯಾದ ಆ ಹುಡುಗನಿಗೆ ನಿಫಾ ವೈರಸ್ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿತ್ತು.

‘ಆ ಬಾಲಕ ವೆಂಟಿಲೇಟರ್​ನಲ್ಲಿದ್ದ. ಭಾನುವಾರ ಬೆಳಗ್ಗೆ ಆತನ ಮೂತ್ರ ವಿಸರ್ಜನೆ ಪ್ರಮಾಣ ಕಡಿಮೆ ಆಗಿತ್ತು. 10:50ರಲ್ಲಿ ತೀವ್ರವಾಗಿ ಹೃದಯ ಸ್ತಂಭನ ಉಂಟಾಯಿತು. ಆ ಬಳಿಕ ಪುನಶ್ಚೇತನಗೊಳಿಸಲು ಮಾಡಿದ ಪ್ರಯತ್ನಗಳು ವಿಫಲವಾದವು. ಬೆಳಗ್ಗೆ 11:30ಕ್ಕೆ ಮೃತಪಟ್ಟ.  ಅಂತಾರಾಷ್ಟ್ರೀಯ ನಿಯಮಗಳ ಅನುಸಾರವಾಗಿ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲಾಗುವುದು,’ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ:
ನಿಫಾ ವೈರಸ್ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯಿಸಿ  “ಕೆಲವು ವರ್ಷಗಳ ಹಿಂದೆ ಕೇರಳಕ್ಕೆ ನಿಫಾ ವೈರಸ್  ಬಾಧಿಸಿತ್ತು, ಅದಕ್ಕೆ  ಕೇರಳ ರಾಜ್ಯವು ಆಗ ತ್ವರಿತ ಕ್ರಮ ಕೈಗೊಂಡಿತ್ತು. ಆದ್ದರಿಂದ ಈ ಬಾರಿಯು  ಸರ್ಕಾರ ಮತ್ತು ಅಧಿಕಾರಿಗಳು, ವಿಶೇಷವಾಗಿ ವೈದ್ಯಕೀಯ ಪರಿಣತರು ಪರಿಸ್ಥಿತಿ ನಿಯಂತ್ರಣಕ್ಕೆ ತರುತ್ತಾರೆ ಎಂಬ ಭರವಸೆ ಇಟ್ಟುಕೊಂಡಿದ್ದೇನೆ ಎಂದರು.

ನಿಫಾ ವೈರಸ್ ಸೋಂಕಿಗೆ ಮದ್ದು ಇಲ್ಲ:
ನಿಫಾ ವೈರಸ್ ಕೇರಳಕ್ಕೆ ಆಗಾಗ್ಗೆ ಬಾಧಿಸುತ್ತಿರುತ್ತದೆ. ಬಾವುಲಿ ಮತ್ತು ಹಂದಿಗಳ ಮೈನಲ್ಲಿರುವ ದ್ರವದ ಮೂಲಕ ಮನುಷ್ಯರಿಗೆ ನಿಫಾ ವೈರಸ್ ಹರಡುತ್ತದೆ. ಇದು ಮನುಷ್ಯರಿಂದ ಮನುಷ್ಯರಿಗೂ ಹರಡುವ ಸೋಂಕು ರೋಗವಾಗಿದೆ. ಕೋವಿಡ್ ಸೋಂಕಿನಂತೆ ಈ ನಿಫಾ ವೈರಸ್ ಸೋಂಕು ಗುಣಪಡಿಸಲು ಯಾವ ಚಿಕಿತ್ಸೆ ಇಲ್ಲ. ಮರಣ ಪ್ರಮಾಣ ಶೇ. 70ರಷ್ಟಿದೆ. ಅಂದರೆ ಸೋಂಕಿತರಲ್ಲಿ ಶೇ. 70ರಷ್ಟು ಜನರು ಬದುಕುವುದಿಲ್ಲ. ಇದರ ಬೆನ್ನಲ್ಲೇ ಕೇರಳಕ್ಕೆ ಗಡಿ ಹಂಚಿಕೊಂಡಿರುವ ಕರ್ನಾಟಕ ಜಿಲ್ಲೆಗಳಲ್ಲೂ ಕೂಡ ಹೈ ಅಲರ್ಟ್ ಘೋಷಿಸಲಾಗಿದೆ.
ನಿಫಾ ವೈರಸ್ ಸೋಂಕಿನ ಲಕ್ಷಣಗಳೇನು?
ನಿಫಾ ವೈರಸ್ ಸೋಂಕು ತಗುಲಿದ ವ್ಯಕ್ತಿಗೆ ಮೊದಲು ಜ್ವರ ಬರುತ್ತದೆ. ತಲೆನೋವು, ವಾಂತಿ, ಉಸಿರಾಟ ತೊಂದರೆ ಕಾಣಿಸುತ್ತದೆ. ಮಿದುಳು ಉರಿಯೂತ, ಸ್ನಾಯು ಸೆಳೆತ ಇತ್ಯಾದಿ ಬಾಧೆ ಬರಬಹುದು. ರೋಗಿ ಕೋಮಾ ಸ್ಥಿತಿಗೆ ಜಾರಿ, ಮೃತಪಡಬಹುದು ಎಂದು ವೈದ್ಯರು ಹೇಳುತ್ತಾರೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.