Parliament; ಸರ್ವ ಪಕ್ಷ ಸಭೆಯಲ್ಲಿ 44 ಪಕ್ಷಗಳು ಭಾಗಿ: ಹಲವು ಬೇಡಿಕೆಗಳು
ಲೋಕಸಭೆಯ ಉಪ ಸ್ಪೀಕರ್ ಸ್ಥಾನ ಕೇಳಿದ ವಿಪಕ್ಷಗಳು.. ಮಿತ್ರ ಪಕ್ಷಗಳಿಂದಲೂ ಬೇಡಿಕೆಗಳ ಪಟ್ಟಿ
Team Udayavani, Jul 21, 2024, 7:27 PM IST
ಹೊಸದಿಲ್ಲಿ: ಸಂಸತ್ತಿನಲ್ಲಿ ಬಜೆಟ್ ಅಧಿವೇಶನಕ್ಕೂ ಮುನ್ನ ಭಾನುವಾರ ಸರ್ವಪಕ್ಷ ಸಭೆ ನಡೆಸಲಾಯಿತು. ಸರ್ವಪಕ್ಷಗಳ ಸಭೆಯಲ್ಲಿ 44 ಪಕ್ಷಗಳ 55 ಮುಖಂಡರು ಭಾಗವಹಿಸಿದ್ದರು. ರಕ್ಷಣ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಿತು.
ವಿಪಕ್ಷಗಳು ಕನ್ವರ್ ಯಾತ್ರಾ ಮಾರ್ಗದಲ್ಲಿ ಉಪಹಾರ ಗೃಹಗಳಿಗೆ ಮಾಲಕರ ಹೆಸರು ಹಾಕುವ ಉತ್ತರ ಪ್ರದೇಶ ಸರ್ಕಾರದ ಆದೇಶದಂತಹ ವಿವಾದಾತ್ಮಕ ವಿಷಯಗಳ ಕುರಿತು ಚರ್ಚೆಗೆ ಅವಕಾಶ ನೀಡುವಂತೆ, ಪ್ರತಿಷ್ಠಿತ ನೀಟ್ ಸೇರಿದಂತೆ ಪರೀಕ್ಷಾ ಪತ್ರಿಕೆ ಸೋರಿಕೆ ವಿಚಾರ ಚರ್ಚೆಗೆ ಅವಕಾಶ ನೀಡುವಂತೆ ಕೋರಿದವು. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ನಿರಂತರ ದಾಳಿಗಳು, ಮಣಿಪುರ ಪರಿಸ್ಥಿತಿ, ರೈಲು ಅಪಘಾತಗಳು, ನಿರುದ್ಯೋಗ ಮತ್ತು ಬೆಲೆ ಏರಿಕೆ ಸೇರಿದಂತೆ ಇತರ ಹಲವು ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯ ಅಗತ್ಯದ ಕುರಿತು ಚರ್ಚಿಸಲಾಗಿದೆ.
ಬಿಜೆಪಿ ಮಿತ್ರ ಪಕ್ಷವಾದ ಜೆಡಿಯು ಬಿಹಾರಕ್ಕೆ ವಿಶೇಷ ವರ್ಗದ ಸ್ಥಾನಮಾನವನ್ನು ನೀಡಬೇಕೆಂದು ಒತ್ತಾಯಿಸಿದರೆ ಪ್ರತಿಪಕ್ಷ ಆರ್ಜೆಡಿ ಬಿಹಾರದ ಬೇಡಿಕೆಗೆ ಬೆಂಬಲ ಸೂಚಿಸಿತು. ಬಿಜೆಡಿ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಕ್ರಮವಾಗಿ ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನವನ್ನು ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಪಕ್ಷಗಳಿಗೆ ಲೋಕಸಭೆ ಉಪಸಭಾಪತಿ ಸ್ಥಾನವನ್ನು ಕೋರಿದೆ ಮತ್ತು ಪ್ರತಿಷ್ಠಿತ ನೀಟ್ ಸೇರಿದಂತೆ ಪೇಪರ್ ಸೋರಿಕೆ ವಿಷಯವನ್ನು ಪ್ರಸ್ತಾಪಿಸಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಉಭಯ ಸದನಗಳನ್ನು ಸುಗಮವಾಗಿ ನಡೆಸಲು ಪ್ರತಿ ಪಕ್ಷದಿಂದ ಸಹಕಾರ ಕೋರಿದ ನಂತರ ಸಂಸತ್ತಿನಲ್ಲಿ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳಿಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಸಭೆಯಲ್ಲಿ ಹೇಳಿದರು.
ಕಾಂಗ್ರೆಸ್ ನಾಯಕ ಕೆ. ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಸಂಪ್ರದಾಯದ ಪ್ರಕಾರ ಲೋಕಸಭೆಯ ಉಪಸಭಾಪತಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದು,ಇಂಡಿಯಾ ಮೈತ್ರಿಕೂಟದ ಸದಸ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಸಣ್ಣ ಪಕ್ಷಗಳಿಗೂ ಅವಕಾಶ
ಹಿಂದಿನ ಸಂಪ್ರದಾಯ ಮುರಿದ ಕೇಂದ್ರ ಸರಕಾರ ತನ್ನ ರಾಜಕೀಯ ಪ್ರಭಾವವನ್ನು ಸೂಚಿಸಲು ಹಲವಾರು ಸಣ್ಣ ಪಕ್ಷಗಳನ್ನು ಸಭೆಗೆ ಆಹ್ವಾನಿಸಿತ್ತು. ಕೇವಲ ಒಬ್ಬ ಸಂಸದರನ್ನು ಒಳಗೊಂಡ ಪಕ್ಷಕ್ಕೂ ಅವಕಾಶ ನೀಡಲಾಗಿತ್ತು.ನಿಯಮಗಳಿಗೆ ಅನುಸಾರವಾಗಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ತನ್ನ ಇಚ್ಛೆಯನ್ನು ತಿಳಿಸಲು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸೂಚಿಸಿದರು.
ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ರಿಜಿಜು, 44 ಪಕ್ಷಗಳ 55 ನಾಯಕರು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದು ಉಪಯುಕ್ತ ಚರ್ಚೆ ನಡೆಯಿತು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.