Moodabidri: ಭಾರೀ ಗಾಳಿ-ಮಳೆ; ಲಕ್ಷಾಂತರ ರೂ. ನಷ್ಟ
15ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ
Team Udayavani, Jul 22, 2024, 12:02 AM IST
ಮೂಡುಬಿದಿರೆ: ರವಿವಾರ ಅಪರಾಹ್ನ 4 ಗಂಟೆ ಸುಮಾರಿಗೆ ಸುರಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಸ್ವರಾಜ್ಯ ಮೈದಾನದ ತಗ್ಗು ಪ್ರದೇಶ, ಒಂಟಿಕಟ್ಟೆ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. 15ಕ್ಕೂ ಅಧಿಕ ವಿದ್ಯುತ್ ಕಂಬಗಳು ಬಿದ್ದಿವೆ.
ಸ್ವರಾಜ್ಯ ಮೈದಾನದ ಬಳಿ ಧನಂಜಯ ಅವರ ಮನೆಯ ಮೇಲಂತಸ್ತಿನ ಛಾವಣಿಗೆ ಹಾನಿಯಾಗಿದೆ. ಒಳಸುತ್ತಿನಲ್ಲಿ ಪುಟ್ಟ ಅಂಗಳವಿರುವ ಪರಂಪರೆಯ ಶೈಲಿಯ ಈ ಪುರಾತನ ಮನೆ ಅಪಾಯದಲ್ಲಿದೆ.
ಪಕ್ಕದ ಪ್ರಶಾಂತ ಅವರ ಮನೆ ಮತ್ತು ಕಾರಿಗೆ ಮರ ಬಿದ್ದು ಹಾನಿಯಾಗಿದೆ. ಇದೇ ಪರಿಸರದ ಲಕ್ಷಿ$¾à ಬೋವಿ, ರಮೇಶ ಬೋವಿ, ತೇಜಸ್, ಮಹೇಶ್ ಅವರ ಮನೆಗಳಿಗೂ ಹಾನಿಯಾಗಿದೆ. ಈ ಪರಿಸರದಲ್ಲಿ ಹಲವು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಮಹೇಶ್ ಅವರ ಮನೆಯ ಹಿಂಬದಿಯಲ್ಲಿದ್ದ ತೆಂಗಿನಮರವೊಂದು ಬುಡ ಸಮೇತ ಬಿದ್ದಿದೆ. ಮಾಸ್ತಿಕಟ್ಟೆಯ ಅಚ್ಚಣ್ಣ ಸಹಿತ ಮೂವರ ಮನೆಗಳಿಗೂ ಹಾನಿಯಾಗಿದೆ.
ಪೇಪರ್ಮಿಲ್ ಸನಿಹ ಟ್ರಾನ್ಸ್ ಫಾರ್ಮರ್ ಡಿ.ಪಿ. ಉರುಳಿ ಬಿದ್ದಿದೆ. ಒಂಟಿಕಟ್ಟೆಯಲ್ಲಿ ಶುಭಕರ, ಪದ್ಮನಾಭ ಅವರ ಮನೆಗೂ ಹಾನಿಯಾಗಿದೆ. ಈ ಪರಿಸರದಲ್ಲೂ ಹಲವು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ.
ಮಾಜಿ ಸಚಿವ ಕೆ. ಅಭಯಚಂದ್ರ , ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ಕಂದಾಯ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
Mangaluru City Corporation: ಸೆ.19ರಂದು ಮೇಯರ್, ಉಪ ಮೇಯರ್ ಚುನಾವಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.