Team India; ರೋಹಿತ್-ವಿರಾಟ್ ಏಕದಿನ ಭವಿಷ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಕೋಚ್ ಗಂಭೀರ್
Team Udayavani, Jul 22, 2024, 12:37 PM IST
ಮುಂಬೈ: ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳಿಗಾಗಿ ಭಾರತ ತಂಡವು ಇಂದು ಶ್ರೀಲಂಕಾಗೆ ತೆರಳುತ್ತಿದೆ. ಇದಕ್ಕೂ ಮೊದಲು ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಪತ್ರಿಕಾಗೋಷ್ಠಿ ನಡೆಸಿ, ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.
ಇದೇ ವೇಳೆ ಗಂಭೀರ್ ಅವರು ಟೀಂ ಇಂಡಿಯಾ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಕ್ರಿಕೆಟ್ ಭವಿಷ್ಯದ ಬಗ್ಗೆ ಮಾತನಾಡಿದರು.
ಮುಖ್ಯ ಕೋಚ್ ಗೌತಮ್ ಗಂಭೀರ್ ಸೋಮವಾರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ರಾಷ್ಟ್ರೀಯ ತಂಡಕ್ಕಾಗಿ ಉತ್ತಮ ಕೆಲಸಗಳನ್ನು ಮಾಡುವುದನ್ನು ಮುಂದುವರಿಸಲು ಬೆಂಬಲಿಸಿದರು, ಇಬ್ಬರೂ ಮುಂದೆ ಏಕದಿನ ಮತ್ತು ಟೆಸ್ಟ್ಗಳಲ್ಲಿ ಪ್ರಮುಖ ಭಾಗವಾಗಲಿದ್ದಾರೆ ಎಂದು ಹೇಳಿದರು. ರೋಹಿತ್ ಮತ್ತು ಕೊಹ್ಲಿ ಚಾಂಪಿಯನ್ಸ್ ಟ್ರೋಫಿ ಮತ್ತು ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಗಾಗಿ ಆಡಲಿದ್ದು, 2025 ರ ಋತುವಿನ ನಂತರವೂ ಅವರು ಮುಂದುವರಿಯಲು ಬಾಗಿಲು ತೆರೆದೇ ಇದೆ ಎಂದು ಗಂಭೀರ್ ಹೇಳಿದರು.
“ಏಕದಿನ ವಿಶ್ವಕಪ್ ಇರಲಿ ಅಥವಾ ಟಿ20 ವಿಶ್ವಕಪ್ ಆಗಿರಲಿ, ದೊಡ್ಡ ವೇದಿಕೆಯಲ್ಲಿ ಏನು ಮಾಡಬೇಕು ಎಂದು ಇಬ್ಬರೂ ತೋರಿಸಿಕೊಟ್ಟಿದ್ದಾರೆ. ಇಬ್ಬರಲ್ಲೂ ಸಾಕಷ್ಟು ಕ್ರಿಕೆಟ್ ಉಳಿದಿದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಆಸ್ಟ್ರೇಲಿಯಾ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿ ನಡೆಯುತ್ತಿದೆ. ಅವರು ತಮ್ಮ ಫಿಟ್ನೆಸ್ ಉಳಿಸಿಕೊಂಡರೆ 2027ರ ಏಕದಿನ ವಿಶ್ವಕಪ್ ಕೂಡಾ ಆಡಬಹುದು ಎಂಬ ವಿಶ್ವಾಸವಿದೆ” ಎಂದು ಗಂಭೀರ್ ಹೇಳಿದರು.
“ಅವರು ಎಷ್ಟು ಸಮಯ ಆಡಬಲ್ಲರು ಎನ್ನುವುದು ತೀರಾ ವೈಯಕ್ತಿಕ ವಿಚಾರ. ಅವರಲ್ಲಿ ಎಷ್ಟು ಕ್ರಿಕೆಟ್ ಉಳಿದಿದೆ ಎಂದು ನಾನು ಹೇಳುವುದು ಅಸಾಧ್ಯ. ತಂಡದ ಯಶಸ್ಸಿಗಾಗಿ ಅವರು ಎಷ್ಟು ಕೊಡುಗೆ ನೀಡಬಹುದು ಎಂದು ಆಟಗಾರರೇ ನಿರ್ಧರಿಸಬೇಕು. ಮುಖ್ಯವಾಗಿ ತಂಡವಷ್ಟೇ ಮುಖ್ಯ. ವಿರಾಟ್ ಮತ್ತು ರೋಹಿತ್ ರಲ್ಲಿ ತುಂಬಾ ಕ್ರಿಕೆಟ್ ಉಳಿದಿದೆ. ಅವರು ಇನ್ನೂ ವಿಶ್ವದರ್ಜೆ ಕ್ರಿಕೆಟಿಗರು. ಅವರನ್ನು ಆದಷ್ಟು ಉಳಿಸಿಕೊಳ್ಳಲು ಯಾವುದೇ ತಂಡವು ಬಯಸುತ್ತದೆ” ಎಂದು ಗಂಭೀರ್ ಹೇಳಿದರು.
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಕಳೆದ ಟಿ20 ವಿಶ್ವಕಪ್ ಗೆಲುವಿನ ಬಳಿಕ ಟಿ20 ಮಾದರಿಗೆ ವಿದಾಯ ಹೇಳಿದ್ದಾರೆ. ಏಕದಿನ ಮತ್ತು ಟೆಸ್ಟ್ ಮಾದರಿಯಲ್ಲಿ ಮುಂದುವರಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ ಹಾಕಿ ತಂಡ
International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು
ENGvsAUS: ಏಕದಿನ ಸರಣಿಗೂ ಬಟ್ಲರ್ ಅಲಭ್ಯ; ಎಸ್ಆರ್ಎಚ್ ಆಟಗಾರನಿಗೆ ನಾಯಕತ್ವ
B–G Trophy: ಈತನೇ ಭಾರತದ ಮುಂದಿನ ಸೂಪರ್ ಸ್ಟಾರ್ ಎಂದ ಸ್ಟೀವ್ ಸ್ಮಿತ್, ಸ್ಟಾರ್ಕ್
Asian Champions Trophy ಸೆಮಿಫೈನಲ್ : ಕೊರಿಯಾ ವಿರುದ್ಧ ಭಾರತ ಫೇವರಿಟ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.