Team India; ಏಕದಿನದಿಂದ ರವೀಂದ್ರ ಜಡೇಜಾ ಔಟ್?: ಸ್ಪಷ್ಟನೆ ನೀಡಿದ ಗಂಭೀರ್, ಅಗರ್ಕರ್


Team Udayavani, Jul 22, 2024, 2:10 PM IST

ravindra jadeja

ಮುಂಬೈ: ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ನೂತನ ಕೋಚ್ ಗೌತಮ್ ಗಂಭೀರ್ (Gautam Gambhir) ಮತ್ತು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ (Ajit Agarkar) ಕೆಲವು ಮಹತ್ವದ ಪ್ರಶ್ನೆಗಳಿಗೆ ಉತ್ತರಿಸಿದರು. ಅದರಲ್ಲಿ ಪ್ರಮುಖವಾದದ್ದು ಏಕದಿನ ಕ್ರಿಕೆಟ್ ನಿಂದ ರವೀಂದ್ರ ಜಡೇಜಾ (Ravindra Jadeja) ಕಡೆಗಣನೆ.

ಟಿ20 ವಿಶ್ವಕಪ್ ಗೆಲುವಿನ ಬಳಿಕ ವಿರಾಟ್, ರೋಹಿತ್ ರಂತೆ ರವೀಂದ್ರ ಜಡೇಜಾ ಕೂಡಾ ಟಿ20 ಮಾದರಿಗೆ ವಿದಾಯ ಹೇಳಿದ್ದರು. ಏಕದಿನ ಮತ್ತು ಟೆಸ್ಟ್ ಮಾದರಿಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ್ದರು. ಶ್ರೀಲಂಕಾದಲ್ಲಿ ನಡೆಯಲಿರುವ ಏಕದಿನ ಸರಣಿಯಲ್ಲಿ ಜಡೇಜಾ ಸ್ಪಿನ್ ಬೌಲಿಂಗ್ ನ ಮುಂದಾಳತ್ವ ವಹಿಸಿದ್ದರು. ಆದರೆ ಲಂಕಾ ಸರಣಿಯಿಂದ ಅವರನ್ನು ಕೈ ಬಿಡಲಾಗಿದೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಮೊದಲು ಭಾರತ ಕೇವಲ ಆರು ಏಕದಿನ ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಮೂರು ಲಂಕಾ ವಿರುದ್ದ ಆಡುತ್ತಿದೆ. ಹೀಗಾಗಿ ಇದು ಮಹತ್ವ ಪಡೆದಿದೆ. ಜಡೇಜಾ ಅವರ ಕಡೆಗಣನೆ ಅವರನ್ನು ಏಕದಿನ ಭವಿಷ್ಯದ ಅಂತ್ಯ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಜಡೇಜಾ ಕೇವಲ ಟೆಸ್ಟ್ ಮಾದರಿಯಲ್ಲಿ ಆಡಲಿದ್ದಾರೆ ಎನ್ನುತ್ತಿದೆ ವರದಿ.

ರವೀಂದ್ರ ಜಡೇಜಾ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ ಇಂದು ಅಜಿತ್ ಅಗರ್ಕರ್ ಮಾತನಾಡಿದ್ದಾರೆ. “15 ಜನರ ತಂಡವನ್ನು ಆಯ್ಕೆ ಮಾಡುವಾಗ ಕೆಲವರು ತಪ್ಪಿಸಿಕೊಳ್ಳುವುದು ಸಹಜ. ಇದು ಅವಕಾಶಗಳನ್ನು ಹೆಚ್ಚು ಬಳಸಿಕೊಳ್ಳುವ ಬಗ್ಗೆ. ರಿಂಕು ತನ್ನ ಯಾವುದೇ ತಪ್ಪಿಲ್ಲದೆ ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಒಂದೇ ಕಿರು ಸರಣಿಯಲ್ಲಿ ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಇಬ್ಬರನ್ನೂ ತೆಗೆದು ಕೊಳ್ಳುವುದರಲ್ಲಿ ಅರ್ಥವಿಲ್ಲ. ಅವನನ್ನು ಕೈಬಿಡಲಿಲ್ಲ. ಅವರು ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅವರು ಇನ್ನೂ ನಮ್ಮ ಯೋಜನೆಯಲ್ಲಿದ್ದಾರೆ. ಅವರು ಪ್ರಮುಖ ಆಟಗಾರರಾಗಿದ್ದಾರೆ” ಎಂದು ಅಜಿತ್ ಹೇಳಿದರು.

ಇದೇ ವೇಳೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಏಕದಿನ ಭವಿಷ್ಯದ ಬಗ್ಗೆಯೂ ಗಂಭೀರ್ ಮಾತನಾಡಿದರು.

“ಏಕದಿನ ವಿಶ್ವಕಪ್ ಇರಲಿ ಅಥವಾ ಟಿ20 ವಿಶ್ವಕಪ್ ಆಗಿರಲಿ, ದೊಡ್ಡ ವೇದಿಕೆಯಲ್ಲಿ ಏನು ಮಾಡಬೇಕು ಎಂದು ಇಬ್ಬರೂ ತೋರಿಸಿಕೊಟ್ಟಿದ್ದಾರೆ. ಇಬ್ಬರಲ್ಲೂ ಸಾಕಷ್ಟು ಕ್ರಿಕೆಟ್ ಉಳಿದಿದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಆಸ್ಟ್ರೇಲಿಯಾ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿ ನಡೆಯುತ್ತಿದೆ. ಅವರು ತಮ್ಮ ಫಿಟ್ನೆಸ್ ಉಳಿಸಿಕೊಂಡರೆ 2027ರ ಏಕದಿನ ವಿಶ್ವಕಪ್ ಕೂಡಾ ಆಡಬಹುದು ಎಂಬ ವಿಶ್ವಾಸವಿದೆ” ಎಂದು ಗಂಭೀರ್ ಹೇಳಿದರು.

“ಅವರು ಎಷ್ಟು ಸಮಯ ಆಡಬಲ್ಲರು ಎನ್ನುವುದು ತೀರಾ ವೈಯಕ್ತಿಕ ವಿಚಾರ. ಅವರಲ್ಲಿ ಎಷ್ಟು ಕ್ರಿಕೆಟ್ ಉಳಿದಿದೆ ಎಂದು ನಾನು ಹೇಳುವುದು ಅಸಾಧ್ಯ. ತಂಡದ ಯಶಸ್ಸಿಗಾಗಿ ಅವರು ಎಷ್ಟು ಕೊಡುಗೆ ನೀಡಬಹುದು ಎಂದು ಆಟಗಾರರೇ ನಿರ್ಧರಿಸಬೇಕು. ಮುಖ್ಯವಾಗಿ ತಂಡವಷ್ಟೇ ಮುಖ್ಯ. ವಿರಾಟ್ ಮತ್ತು ರೋಹಿತ್ ರಲ್ಲಿ ತುಂಬಾ ಕ್ರಿಕೆಟ್ ಉಳಿದಿದೆ. ಅವರು ಇನ್ನೂ ವಿಶ್ವದರ್ಜೆ ಕ್ರಿಕೆಟಿಗರು. ಅವರನ್ನು ಆದಷ್ಟು ಉಳಿಸಿಕೊಳ್ಳಲು ಯಾವುದೇ ತಂಡವು ಬಯಸುತ್ತದೆ” ಎಂದು ಗಂಭೀರ್ ಹೇಳಿದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.