Sailor Missing; ಐಎನ್ಎಸ್ ಬ್ರಹ್ಮಪುತ್ರದಲ್ಲಿ ಬೆಂಕಿ ಅವಘಡ: ನಾವಿಕ ನಾಪತ್ತೆ!
ನಿರ್ವಹಣೆ ಕಾರ್ಯದ ವೇಳೆ ಅಗ್ನಿ ಅನಾಹುತ ;ಒಂದು ಬದಿಗೆ ವಾಲಿಬಿದ್ದ ಯುದ್ಧನೌಕೆ
Team Udayavani, Jul 23, 2024, 6:55 AM IST
ನವದೆಹಲಿ: ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ಬ್ರಹ್ಮಪುತ್ರ(INS Brahmaputra )ಬೆಂಕಿ ಅವಘಡಕ್ಕೀಡಾಗಿದ್ದು, ಬಹುತೇಕ ಸುಟ್ಟು ಹೋಗಿದೆ. ಘಟನೆಯಲ್ಲಿ ಯುದ್ಧನೌಕೆಯ ಕಿರಿಯ ನಾವಿಕರೊಬ್ಬರು ನಾಪತ್ತೆಯಾಗಿದ್ದಾರೆ.
ಮುಂಬೈನ ನೌಕಾ ನೆಲೆಯಲ್ಲಿ ಭಾನುವಾರ ನೌಕೆಯ ನಿರ್ವಹಣೆ ಕಾರ್ಯ ನಡೆಯುತ್ತಿತ್ತು. ಈ ವೇಳೆ ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ.
5,300 ಟನ್ ತೂಕದ ನೌಕೆ ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ ಒಂದು ಬದಿಗೆ ವಾಲಲು ಆರಂಭಿಸಿದೆ. ಅದನ್ನು ಸರಿಯಾಗಿ ನಿಲ್ಲಿಸುವ ಎಲ್ಲಾ ಪ್ರಯತ್ನಗಳು ವಿಫಲವಾಗಿದ್ದು, ಒಂದು ಬದಿಗೆ ನೌಕೆ ಬಿದ್ದು, ಬೆಂಕಿ ಬಹುತೇಕ ಆವರಿಸಿದೆ.
ಬೆಂಕಿ ನಂದಿಸುವ ಪ್ರಯತ್ನ ಭಾನುವಾರದಿಂದಲೂ ನಡೆದಿದ್ದು, ಸೋಮವಾರ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿಯ ಲೆಕ್ಕ ಸರಿಯಾಗಿದ್ದು, ಒಬ್ಬ ಕಿರಿಯ ನಾವಿಕ ಮಾತ್ರ ನಾಪತ್ತೆಯಾಗಿದ್ದಾರೆ. ರಕ್ಷ ಣಾ ತಂಡಗಳು ಅವರಿಗಾಗಿ ಶೋಧ ನಡೆಸುತ್ತಿವೆ. ಘಟನೆ ಸಂಬಂಧ ನೌಕಾಪಡೆ ತನಿಖೆಗೆ ಆದೇಶಿಸಿದೆ ಎಂದೂ ಮಾಹಿತಿ ನೀಡಿದ್ದಾರೆ.
ಐಎನ್ಎಸ್ ಬ್ರಹ್ಮಪುತ್ರ ಯುದ್ಧನೌಕೆಯು ಬ್ರಹ್ಮಪುತ್ರ ಕ್ಲಾಸ್ನಲ್ಲಿ ದೇಶೀಯವಾಗಿ ನಿರ್ಮಿಸಿದ ಮೊದಲ ಮಾರ್ಗದರ್ಶಿ ಕ್ಷಿಪಣಿ ಹೊಂದಿ ರುವ ಯುದ್ಧ ನೌಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.