Valmiki Nigama Scam: ಗದ್ದಲದಲ್ಲೇ ಪರಿಷತ್‌ನಲ್ಲಿ ಸಿಎಂ ಉತ್ತರ

ವಿಪಕ್ಷಗಳ ಗಲಾಟೆ ಜೋರಾಗುತ್ತಿದ್ದಂತೆ ಸದನ ಮುಂದೂಡಿಕೆ, ಲಿಖಿತ ಉತ್ತರದ ಅರ್ಧ ಭಾಗ ಓದಿ ಉಳಿದಿದ್ದು ಸದನದ ಮುಂದೆ ಮಂಡಿಸಿದ ಸಿಎಂ

Team Udayavani, Jul 23, 2024, 6:45 AM IST

Vidhana-parisaht

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣದ ಮೇಲಿನ ಚರ್ಚೆ ಹಾಗೂ ಅದಕ್ಕೆ ಮುಖ್ಯಮಂತ್ರಿಯವರ ಉತ್ತರದ ವಿಚಾರದಲ್ಲಿ ವಿಧಾನಸಭೆಯಲ್ಲಿ ನಡೆದ ಪ್ರಹಸನಕ್ಕೆ ವಿಧಾನಪರಿಷತ್ತೂ ಸೋಮವಾರ ಸಾಕ್ಷಿಯಾಯಿತು.

ಗಲಾಟೆಯ ಮಧ್ಯೆಯೇ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ವಿಪಕ್ಷಗಳ ವಿರುದ್ಧ ಹರಿಹಾಯ್ದರು. ಜತೆಗೆ ಪರಿಶಿಷ್ಟ ಜಾತಿ-ಪಂಗಡದವರ ಅಭಿವೃದ್ಧಿಗೆ ಹೊಸದಾಗಿ ಕಾಯ್ದೆಗಳನ್ನು ತಂದವರು ನಾವು, ಇರುವ ಕಾನೂನುಗಳಿಗೆ ತಿದ್ದಪಡಿ ತಂದವರು ನಾವು, ಕಾರ್ಯಕ್ರಮ-ಯೋಜನೆಗಳನ್ನು ಜಾರಿಗೆ ತಂದವರು ನಾವು. ದಲಿತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ, ಆರಂಭದಿಂದಲೂ ದಲಿತ-ದಮನಿತ ಸಮುದಾಯಗಳ ವಿರೋಧಿಯಾಗಿರುವ ಬಿಜೆಪಿಯಿಂದ ದಲಿತರ ಕಾಳಜಿಯ ಬಗ್ಗೆ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಸಮರ್ಥನೆ ನೀಡಿದರು.

ಗಲಾಟೆ, ಗದ್ದಲ, ಸದನದ ಬಾವಿಗಿಳಿದು ಪ್ರತಿಭಟನೆ, ಕಲಾಪ ಮುಂದೂಡಿಕೆ ನಡೆದು ಮುಖ್ಯಮಂತ್ರಿಯವರು ವಿಧಾನಸಭೆಯಲ್ಲಿ ಎರಡನೇ ದಿನ ಉತ್ತರ ನೀಡಿದರು. ಆದರೆ ವಿಧಾನಪರಿಷತ್ತಿನಲ್ಲಿ ಮೊದಲು ಉತ್ತರ ಕೊಟ್ಟು, ಅನಂತರ ಲಿಖೀತ ಉತ್ತರ ಓದಿ, ಕೊನೆಗೆ ವಿಪಕ್ಷಗಳ ಗಲಾಟೆ ಜೋರಾಗುತ್ತಿದ್ದಂತೆ ಇನ್ನುಳಿದ ಲಿಖೀತ ಉತ್ತರವನ್ನು ಸದನದ ಮುಂದೆ ಮಂಡಿಸಿದರು.

ಮೇಲ್ಮನೆಯಲ್ಲಿ ವಿಪಕ್ಷಗಳ ಚರ್ಚೆಗೆ ಮುಖ್ಯಮಂತ್ರಿಯವರು ಸೋಮವಾರ ಉತ್ತರ ನೀಡಲು ಸದನಕ್ಕೆ ಬಂದರು. ಪ್ರಶ್ನೋತ್ತರ ಬಳಿಕ ಅವರು ಸರಕಾರದ ಪರವಾಗಿ ಉತ್ತರಿಸಲು ಎದ್ದು ನಿಂತರು. ಆಗ ವಿಪಕ್ಷದವರು ಗಲಾಟೆ ಎಬ್ಬಿಸಿದರು. ಆಡಳಿತ ಪಕ್ಷಗಳ ಸದಸ್ಯರೂ ತಿರುಗೇಟು ಕೊಟ್ಟರು. ಈ ಗಲಾಟೆಯ ನಡುವೆ ಸಿಎಂ ಉತ್ತರ ಆರಂಭಿಸಿದರು. ಲಿಖಿತ ಉತ್ತರ ಓದಲಾರಂಭಿಸಿದಾಗ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದರು.

ಗದ್ದಲ, ಧಿಕ್ಕಾರ ಘೋಷಣೆ ನಡುವೆ ಅರ್ಧ ಉತ್ತರ ಓದಿದಿ ಸಿಎಂ ಅದನ್ನು ಮೊಟಕುಗೊಳಿಸಿ ಇನ್ನುಳಿದ ಉತ್ತರವನ್ನು ಸದನದ ಮುಂದೆ ಮಂಡಿಸಿದರು. ಗಲಾಟೆ ಜೋರಾಗುತ್ತಿದ್ದಂತೆ ಸಭಾಪತಿಯವರು ಸದನವನ್ನು ಸ್ವಲ್ಪ ಕಾಲ ಮುಂದೂಡಿದರು. ಮತ್ತೆ ಕಲಾಪ ಆರಂಭಗೊಂಡಾಗ ಸದನ ಕ್ರಮಬದ್ಧವಿಲ್ಲದಿದ್ದಾಗ ಸಿಎಂ ಉತ್ತರ ಕೊಟ್ಟಿದ್ದು ಸರಿಯಲ್ಲ ಎಂದು ವಿಪಕ್ಷಗಳು ತಗಾದೆ ತೆಗೆದವು. ಕಲಾಪ ತಹಬದಿಗೆ ತರಲು ನಾನು ಸಾಕಷ್ಟು ಪ್ರಯತ್ನಪಟ್ಟೆ, ಅದು ಸಾಧ್ಯವಾಗದಿದ್ದಾಗ ಲಿಖೀತ ಉತ್ತರ ಓದುವ ಸಂದರ್ಭ ಸೃಷ್ಟಿಯಾಯಿತು. ಈಗ ಸಿಎಂ ಉತ್ತರ ಕೊಟ್ಟಾಗಿದೆ ಎಂದ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನು ಭೋಜನ ವಿರಾಮಕ್ಕೆ ಮುಂದೂಡಿದರು.

ನಾವು ಅಷ್ಟೊಂದು ದಡ್ಡರಾ?: ಕೇಶವಪ್ರಸಾದ್‌
ಸಂವಿಧಾನ ರಚನೆ ಮಂಡಳಿ ಸಭೆಯಲ್ಲಿ 1949ರ ನ. 25ರಂದು ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಮಾಡಿದ ಭಾಷಣ ಈ ಬಿಜೆಪಿಯವರಿಗೆ ಅರ್ಥ ಆಗುತ್ತದೋ ಗೊತ್ತಿಲ್ಲ ಎಂದು ಸಿಎಂ ಹೇಳಿದಾಗ, ಯಾಕೆ ನಾವು ಅಷ್ಟೊಂದು ದಡ್ಡರಾ ಎಂದು ಬಿಜೆಪಿಯ ಕೇಶವ ಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಹೇಳುತ್ತಿರುವುದೆಲ್ಲ ಸುಳ್ಳು, ಹಗರಣದ ಬಗ್ಗೆ ಉತ್ತರ ಕೊಡುವುದು ಬಿಟ್ಟು ರಾಜಕೀಯ ಭಾಷಣ ಮಾಡುತ್ತಿದ್ದಾರೆ. ವಿಷಯಾಂತರ ಮಾಡಿ, ಬಿಜೆಪಿಯವರು ದಲಿತ ವಿರೋಧಿಗಳು ಎಂದು ಬಿಂಬಿಸಲು ಹೊರಟಿದ್ದಾರೆ, ಇದು ಸಹಿಸುವುದಿಲ್ಲ ಎಂದು ಬಿಜೆಪಿಯ ರವಿಕುಮಾರ್‌, ಸಿ.ಟಿ. ರವಿ ವಾಗ್ಧಾಳಿ ನಡೆಸಿದರು. ಈ ವೇಳೆ ಸಿ.ಟಿ. ರವಿ ಮತ್ತು ರವಿ ಕುಮಾರ್‌ ನಡುವೆ ವಿಪಕ್ಷ ನಾಯಕ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಅದಕ್ಕಾಗಿ ಪದೇಪದೆ ಎದ್ದು ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಸದಸ್ಯರು ಕಾಲೆಳೆದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.