Fraud: ಖಾಕಿ ಸೋಗಿನಲ್ಲಿ ಮಹಿಳಾ ಥೆರಪಿಸ್ಟ್ ಗೆ ವಂಚನೆ
Team Udayavani, Jul 23, 2024, 11:09 AM IST
ಬೆಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಮಹಿಳಾ ಥೆರಪಿಸ್ಟ್ಗೆ ಅತ್ಯಾಚಾರದ ಬೆದರಿಕೆ ಹಾಕಿ ಆಕೆಯಿಂದ 1.50 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪಿಯನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಮಮೂರ್ತಿನಗರದ ಮಹೇಂದ್ರ ಕುಮಾರ್ (33) ಬಂಧಿತ ಆರೋಪಿ.
ಜುಲೈ 3ರಂದು ಈ ಘಟನೆ ನಡೆದಿದೆ. ಕೋರಮಂಗಲ 6ನೇ ಬ್ಲಾಕ್ ನಿವಾಸಿ 25 ವರ್ಷದ ಮಹಿಳಾ ಥೆರಪಿಸ್ಟ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಏನಿದು ಪ್ರಕರಣ?: ಪಶ್ಚಿಮ ಬಂಗಾಳ ಮೂಲದ ಸಂತ್ರಸ್ತೆ ಕೋರಮಂಗಲದ 6ನೇ ಬ್ಲಾಕ್ನಲ್ಲಿ ನೆಲೆಸಿದ್ದಾರೆ. ಆನ್ಲೈನ್ನಲ್ಲಿ ಬುಕ್ಕಿಂಗ್ ಪಡೆದು ಗ್ರಾಹಕರು ಕರೆಯುವ ಸ್ಥಳಕ್ಕೆ ತೆರಳಿ ಮಸಾಜ್ ಥೆರಪಿ ಮಾಡುತ್ತಾರೆ. ಜುಲೈ 3ರಂದು ರಾತ್ರಿ 9.30ಕ್ಕೆ ಆರೋಪಿ ಮಹೇಂದ್ರ ಕುಮಾರ್, ಸುರೇಶ್ ಹೆಸರಿನಲ್ಲಿ ಮಸಾಜ್ಗಾಗಿ ಆನ್ಲೈನ್ನಲ್ಲಿ ಬುಕ್ಕಿಂಗ್ ಮಾಡಿದ್ದಾನೆ. ಬಳಿಕ ಥೆರಪಿಸ್ಟ್ಗೆ ಕರೆ ಮಾಡಿ ರಾಮಮೂರ್ತಿನಗರದ ನವ್ಯ ನಿಸರ್ಗ ಅಪಾರ್ಟ್ ಮೆಂಟ್ ಬಳಿ ಬರುವಂತೆ ಸೂಚಿಸಿದ್ದಾನೆ. ರಾತ್ರಿ 10.30ಕ್ಕೆ ಆರೋಪಿ ನೀಡಿದ್ದ ವಿಳಾಸಕ್ಕೆ ಮಹಿಳೆ ತೆರಳಿದ್ದಾರೆ. ಅದೇ ವೇಳೆ ಚಾಲಕನೊಂದಿಗೆ ಕಾರಿನಲ್ಲಿ ಬಂದ ಆರೋಪಿ ಥೆರಪಿಸ್ಟ್ ಅನ್ನು ಕಾರಿನಲ್ಲಿ ಕೂರಿಸಿಕೊಂಡಿದ್ದಾನೆ. ಬಳಿಕ ಸ್ವಲ್ಪ ದೂರ ಹೋಗುತ್ತಿದ್ದಂತೆ ಕಾರಿನಲ್ಲಿ ಕುಳಿತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿ ಹಲ್ಲೆ ನಡೆಸಿ, ನಾನು ಪೊಲೀಸ್ ಅಧಿಕಾರಿ. ನನಗೆ ಹಣ ಕೊಡಬೇಕು. ಇಲ್ಲವಾದರೆ, ನಿನ್ನ ಮೇಲೆ ಅತ್ಯಾಚಾರ ಮಾಡುವುದಾಗಿ ಬೆದರಿಸಿದ್ದಾನೆ. 10 ಲಕ್ಷ ರೂ. ಕೊಡುವಂತೆ ಬೇಡಿಕೆ ಇರಿಸಿದ್ದಾನೆ. ಅದಕ್ಕೆ ಥೆರಪಿಸ್ಟ್, ನನ್ನ ಬಳಿ ಅಷ್ಟೊಂದು ಹಣವಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಎಂದಿದ್ದಾರೆ. ಅದರಿಂದ ಕೋಪಗೊಂಡ ಆರೋಪಿ, ಹಣ ಕೊಡಲೇಬೇಕು. ನಿನ್ನ ಸ್ನೇಹಿತರು ಅಥವಾ ಸಂಬಂಧಿಕರಿಗೆ ಕರೆ ಮಾಡಿ ಹಣ ತರಿಸು ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ.
1.50 ಲಕ್ಷ ರೂ. ಸುಲಿಗೆ: ಆರೋಪಿಯ ದೌರ್ಜನ್ಯದಿಂದ ಗಾಬರಿಗೊಂಡ ಸಂತ್ರಸ್ತೆ ತನ್ನ ಸ್ನೇಹಿತನಿಗೆ ಕರೆ ಮಾಡುತ್ತಿದ್ದಂತೆ, ಆರೋಪಿಯೇ ಮೊಬೈಲ್ ಕಸಿದುಕೊಂಡು ಮಾತಾಡಿದ್ದಾನೆ. ಬಳಿಕ ಸ್ಕ್ಯಾನರ್ ಕಳುಹಿಸಿ, ಗೂಗಲ್ ಪೇ ಮೂಲಕ ಸಂತ್ರಸ್ತೆ ಸ್ನೇಹಿತನಿಂದ 1.50 ಲಕ್ಷ ರೂ. ಅನ್ನು 2 ಬಾರಿ ಹಾಕಿಸಿಕೊಂಡಿದ್ದಾನೆ. ನಂತರ ಈ ಹಣವನ್ನು ತನ್ನ ಸಹಚರರ ಮೂಲಕ ಎಟಿಎಂನಲ್ಲಿ ಡ್ರಾ ಮಾಡಿಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು. ನಂತರ ಆರೋಪಿಯು ನೀನು ಇಲ್ಲಿ ಇರಬೇಡ. ನಿನ್ನ ಸ್ವಂತ ಊರು ಪಶ್ಚಿಮ ಬಂಗಾಳಕ್ಕೆ ಹೋಗು. ಇಲ್ಲವಾದರೆ, ನಿನ್ನ ಮೇಲೆ ಸುಳ್ಳು ಕೇಸು ಹಾಕಿ ಜೈಲಿಗೆ ಕಳುಹಿಸುತ್ತೇನೆ ಎಂದು ಹೆದರಿಸಿದ್ದಾನೆ. ಬಳಿಕ ಅದೇ ಕಾರಿನಲ್ಲಿ ರಾತ್ರಿ ವೈಟ್μàಲ್ಡ್, ಕೋರಮಂಗಲ, ಹೆಬ್ಟಾಳ ಸೇರಿ ಇತರೆ ಸ್ಥಳಗಳಲ್ಲಿ ಸುತ್ತಾಡಿಸಿ, ಮುಂಜಾನೆ 4.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂತ್ರಸ್ತೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಬಳಿಕ ಸಂತ್ರಸ್ತೆ ಠಾಣೆಗೆ ಬಂದು ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಮೋಜಿಗಾಗಿ ಸುಲಿಗೆ: ಡಾಗ್ ಬ್ರಿàಡಿಂಗ್ ಕೆಲಸ ಮಾಡುತ್ತಿದ್ದ ಆರೋಪಿ, ಮೋಜಿನ ಜೀವನಕ್ಕಾಗಿ ಸುಲಭವಾಗಿ ಹಣ ಸಂಪಾದಿಸಲು ವಂಚಿಸಿದ್ದಾನೆ. ಅಲ್ಲದೆ, ಈ ಹಿಂದೆ ಸಹ ಆರೋಪಿಯು ಮಾರತಹಳ್ಳಿ, ಪುಲಿಕೇಶಿನಗರ ಸೇರಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಹಲವರಿಗೆ ವಂಚನೆ ಮಾಡಿರುವುದು ಆತನ ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.