Udupi:ಪ್ರವಾಸಿ ವಾಹನಗಳಿಗೆ ಜಿಪಿಎಸ್,ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಪ್ರತಿಭಟನೆ

ಖಾಸಗಿಯಾಗಿ ಬಾಡಿಗೆ ಮಾಡುವ ವಾಹನಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಿ

Team Udayavani, Jul 23, 2024, 2:39 PM IST

2-udupi

ಉಡುಪಿ: ಪ್ರವಾಸಿ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಎದುರು ಜು.23ರ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಕೆ.ರಘುಪತಿ ಭಟ್ ಮಾತನಾಡಿ, ಟ್ಯಾಾಕ್ಸಿ ಉದ್ಯಮದವರು ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಡಿದರೆ ಯಶಸ್ಸು ಸಿಗಲಿದೆ. ಸರಕಾರ ಮನಸ್ಸು ಮಾಡಿದರೆ ಈ ಸಮಸ್ಯೆಯನ್ನು ಸುಲಭದಲ್ಲಿ ಪರಿಹಾರ ಮಾಡಬಹುದು. ಟ್ಯಾಾಕ್ಸಿಯ ಹೊಸ ವಾಹನಗಳಿಗೆ ಅಳವಡಿಕೆ ಮಾಡುವ ನಿರ್ಧಾರವನ್ನು ಸರಕಾರ ಮಾಡಬೇಕು ಎಂದರು.

ಹಳೆ ವಾಹನಗಳಿಗೆ ಇದನ್ನು ಅಳವಡಿಸುವ ಸ್ಥಿತಿಯಲ್ಲಿ ಚಾಲಕರು-ಮಾಲಕರು ಇಲ್ಲ. ಈಗಾಗಲೇ ಟ್ಯಾಕ್ಸಿ ಚಾಲಕ-ಮಾಲಕರು ಹಲವಾರು ತೆರಿಗೆಗಳನ್ನು ಪಾವತಿಸಿ ನಷ್ಟದಲ್ಲಿ ದಿನ ದೂಡುತ್ತಿದ್ದಾಾರೆ. ಬೆಂಗಳೂರಿನಂತಹ ನಗರಗಳಲ್ಲಿ ಇದು ನಡೆಯಬಹುದು. ಆದರೆ ಸೀಮಿತ ಜನಸಂಖ್ಯೆ ಇರುವ ಉಡುಪಿಯಲ್ಲಿ ಇದು ಅಸಾಧ್ಯದ ಮಾತು ಎಂದು ಹೇಳಿದರು.

ವೈಟ್‌ಬೋರ್ಡ್‌ನಲ್ಲಿ ಬಾಡಿಗೆ ಮಾಡುವವರಿಗೆ ಸರಕಾರ ಕಡಿವಾಣ ಹಾಕಿದರೆ ಈ ಉದ್ಯಮ ಚೇತರಿಕೆ ಕಾಣಲು ಸಾಧ್ಯವಿದೆ. ಸರಕಾರ ಇದನ್ನು ಗಮನಿಸಿ ಕಳ್ಳ ಉದ್ಯಮಗಳನ್ನು ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಗಮನಹರಿಸಬೇಕು. ಸಾಧ್ಯವಿದ್ದರೆ ಖಾಸಗಿಯಾಗಿ ಬಾಡಿಗೆ ಮಾಡುವ ವಾಹನಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಟ್ಯಾಾಕ್ಸಿಮನ್‌ಗಳ ಧ್ವನಿಯನ್ನು ರಾಜ್ಯ ಸರಕಾರ ಗಂಭೀರವಾಗಿ ತೆಗೆದುಕೊಂಡು ಇದಕ್ಕೆ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಟ್ಯಾಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ.ಕೋಟ್ಯಾನ್, ಕೆಟಿಡಿಓ ಅಧ್ಯಕ್ಷ ರಮೇಶ್ ಕುಂದಾಪುರ, ಉಪಾಧ್ಯಕ್ಷರಾದ ಮಂಜು ಪೂಜಾರಿ, ರಾಘವೇಂದ್ರ ಸೋಮಯಾಜಿ, ಜಯಕರ ಕುಂದರ್, ರವಿ ಶೆಟ್ಟಿ, ಸತೀಶ್ ನಾಯಕ್, ಕೋಶಾಧಿಕಾರಿ ಪ್ರಕಾಶ್ ಅಡಿಗ, ಜತೆ ಕೋಶಾಧಿಕಾರಿ ಕೃಷ್ಣ ಕೋಟ್ಯಾನ್, ಸಂಘಟನ ಕಾರ್ಯದರ್ಶಿಗಳಾದ ವಿಕ್ರಂ ರಾವ್, ಸತೀಶ್ ಶೆಟ್ಟಿ, ಮಹೇಶ್ ಕುಮಾರ್, ವಿನ್ಸಿ ಡಿ’ಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಅನಂತರ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಹಾಗೂ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಪಿ.ನಾಯ್‌ಕ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.