ಹುಟ್ಟುಹಬ್ಬಕ್ಕೆ ಗ್ಯಾಂಗ್‌ಸ್ಟರ್‌ ಆಗಿ ಬಂದ ಸೂರ್ಯ; ʼSuriya 44ʼ ಸ್ಪೆಷೆಲ್‌ ಟೀಸರ್‌ ಔಟ್


Team Udayavani, Jul 23, 2024, 3:57 PM IST

ಹುಟ್ಟುಹಬ್ಬಕ್ಕೆ ಗ್ಯಾಂಗ್‌ಸ್ಟರ್‌ ಆಗಿ ಬಂದ ಸೂರ್ಯ; ʼSuriya 44ʼ ಸ್ಪೆಷೆಲ್‌ ಟೀಸರ್‌ ಔಟ್

ಚೆನ್ನೈ: ಕಾಲಿವುಡ್‌ ನಟ ಸೂರ್ಯ(Actor Suriya) ತನ್ನ ಹುಟ್ಟುಹಬ್ಬಕ್ಕೆ ಅವರ ಫ್ಯಾನ್ಸ್‌ ಗಳಿಗೆ  ಭರ್ಜರಿ ಗಿಫ್ಟ್‌ ನೀಡಿದ್ದಾರೆ. ʼಸೂರ್ಯ44ʼ (Suriya 44) ಚಿತ್ರದ ಬರ್ತ್‌ ಡೇ ಟೀಸರ್‌ ನೋಡಿ ಕಾಲಿವುಡ್‌ ಥ್ರಿಲ್‌ ಆಗಿದೆ.

ಕಳೆದ ಕೆಲ ಸಮಯದಿಂದ ಸೂರ್ಯ ಅವರ ʼಕಂಗುವʼ ಸಿನಿಮಾದ ಬಗ್ಗೆ ಪ್ಯಾನ್‌ ಇಂಡಿಯಾದಲ್ಲಿ ಜೋರಾಗಿ ಸದ್ದು ಕೇಳಿ ಬರುತ್ತಿದೆ. ಈ ಚಿತ್ರದ ಟೀಸರ್‌ ಹಾಗೂ ಸೂರ್ಯ ಅವರ ರಗಡ್‌ ಲುಕ್‌ ನೋಡಿ ಚಿತ್ರದ ಬಗೆಗಿನ ಕುತೂಹಲ ಹೆಚ್ಚಾಗಿದೆ.

ʼಕಂಗುವʼ ಚಿತ್ರದ ಹಾಡೊಂದು ಸೂರ್ಯ ಅವರ ಬರ್ತ್‌ ಡೇಗೆ ರಿಲೀಸ್‌ ಆಗಿದೆ.

ಕಾರ್ತಿಕ್‌ ಸುಬ್ಬರಾಜ್‌ (Karthik Subbaraj) ಅವರೊಂದಿಗೆ ಸೂರ್ಯ ಸಿನಿಮಾ ಮಾಡುತ್ತಿದ್ದು, ಈ ಮಾಸ್‌ ಚಿತ್ರಕ್ಕೆ ತಾತ್ಕಾಲಿಕವಾಗಿ ʼ Suriya 44 ʼ ಟೈಟಲ್‌ ಇಡಲಾಗಿದೆ. ಅನೌನ್ಸ್‌ ಆದ ದಿನದಿಂದ ಭಾರೀ ಸದ್ದು ಮಾಡಿದ ಈ ಚಿತ್ರದಿಂದ ಇದೀಗ ಬರ್ತ್‌ ಡೇ ಟೀಸರ್‌ ರಿಲೀಸ್‌ ಆಗಿದೆ.

ಹೇಗಿದೆ ಟೀಸರ್?:  ಈ ಸಿನಿಮಾದಲ್ಲಿ ಸೂರ್ಯ ಗ್ಯಾಂಗ್ ಸ್ಟರ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. “ಸಮುದ್ರದಲ್ಲಿ ಎಲ್ಲೋ” ಎನ್ನುವ ಕ್ಯಾಪ್ಷನ್‌ ನಿಂದ ಶುರುವಾಗುವ ಟೀಸರ್‌ ನಲ್ಲಿ ಸೂರ್ಯ ಸಿಗರೇಟ್‌ ಎಳೆಯುತ್ತಾ ತನ್ನ ಸಹಚರರೊಂದಿಗೆ ನಡೆದುಕೊಂಡು ಬಂದು ಗನ್‌ ಶೂಟ್‌ ಮಾಡುವುದನ್ನು ತೋರಿಸಲಾಗಿದೆ.

“ಒಂದು ಪ್ರೀತಿ, ಒಂದು ನಗು, ಒಂದು ಯುದ್ಧ… ಒಂದಕ್ಕಾಗಿ ಕಾಯುತ್ತಿದೆ..” ಎಂದು ಸೂರ್ಯ ಅವರು ನಡೆದುಕೊಂಡು ಬರುವುದನ್ನು ತೋರಿಸಲಾಗಿದೆ. ಸೂರ್ಯ ಗಡ್ಡ ಬಿಟ್ಟು, ಬಾಡಿ ಬೆಳೆಸಿಕೊಂಡು ಕಾಣಿಸಿರುವ ಅವತಾರ ನೋಡಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸೂರ್ಯ ಜೊತೆ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು, ಜಯರಾಮ್, ಕರುಣಾಕರನ್ ಮತ್ತು ಜೋಜು ಜಾರ್ಜ್ ಮುಂತಾದವರು ಪ್ರಮುಖದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಂತೋಷ್ ನಾರಾಯಣನ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು,  ಸೂರ್ಯ ಅವರ ನಿರ್ಮಾಣ ಸಂಸ್ಥೆ  2ಡಿ ಎಂಟರ್‌ಟೈನ್‌ಮೆಂಟ್ ಬಂಡವಾಳ ಹಾಕಲಿದೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.