Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
ಢವಳೇಶ್ವರ, ನಂದಗಾಂವ, ಮಿರ್ಜಿ ಸೇತುವೆಗಳು ಜಲಾವೃತ
Team Udayavani, Jul 23, 2024, 4:31 PM IST
ಮಹಾಲಿಂಗಪುರ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ.
ಕಳೆದ 5-6 ದಿನಗಳಿಂದ ಘಟಪ್ರಭಾ ನದಿಗೆ ನೀರು ಹೆಚ್ಚಾಗಿ ಹರಿದು ಬರುತ್ತಿದೆ. ಜು. 20ರ ಶನಿವಾರದಿಂದ ನಂದಗಾಂವ ಸೇತುವೆ ಸಂಪೂರ್ಣ ಜಲಾವೃತವಾಗಿದೆ.
ಇಂದು (ಜು.23ರ ಮಂಗಳವಾರ) ಢವಳೇಶ್ವರ, ಮಿರ್ಜಿ ಸೇತುವೆ ಜಲಾವೃತ: ಘಟಪ್ರಭಾ ನದಿಗೆ ನೀರು ಹೆಚ್ಚಿದ ಕಾರಣ ಜು.23ರ ಮಂಗಳವಾರ ಮುಂಜಾನೆಯಿಂದ ಢವಳೇಶ್ವರ ಮತ್ತು ಮಿರ್ಜಿ ಸೇತುವೆಗಳು ಜಲಾವೃತವಾಗಿವೆ.
ಸೇತುಗಳ ಮೇಲೆ ಒಂದು ಅಡಿಯಷ್ಟು ನೀರು ಹರಿಯುತ್ತಿರುವುದರಿಂದ ಸೇತುವೆ ಬಳಿ ಬ್ಯಾರಿಕೇಡ್ ಅಳವಡಿಸಿ, ಪೊಲೀಸ್ ಸಿಬ್ಬಂದಿ ನೇಮಕಗೊಳಿಸಿ ಸೇತುವೆಗಳ ಮೇಲಿನ ಸಂಚಾರ ನಿಷೇಧಿಸಲಾಗಿದೆ.
ಜು.23ರ ಮಂಗಳವಾರ ಮುಂಜಾನೆ ಸಿಕ್ಕಿದ ಮಾಹಿತಿಯಂತೆ ಘಟಪ್ರಭಾ ನದಿಗೆ ದುಪದಾಳ ಜಲಾಶಯದಿಂದ 15,370, ಮಾರ್ಕಂಡೇಯ ಜಲಾಶಯದಿಂದ 3837, ಬಳ್ಳಾರಿ ನಾಲಾದಿಂದ 1911 ಕ್ಯೂಸೆಕ್ ಸೇರಿ ಸರಿ ಸುಮಾರು 21,118 ಕ್ಯೂಸೆಕ್ ನೀರು ಘಟಪ್ರಭಾ ನದಿಗೆ ಹರಿದು ಬರುತ್ತಿದೆ.
ಆದರೆ ಇದುವರೆಗೂ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಟ್ಟಿಲ್ಲ. 51 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯಯುಳ್ಳ ಹಿಡಕಲ್ ಜಲಾಶಯ ಜು.23 ರ ಮುಂಜಾನೆವರೆಗೆ 38.53 ಟಿಎಂಸಿ ನೀರು ಸಂಗ್ರಹವಾಗಿದೆ.
ಹಿಡಕಲ್ ಜಲಾಶಯಕ್ಕೆ ಸುಮಾರು 27, 754 ಕ್ಯೂಸೆಕ್ ನೀರಿನ ಒಳಹರಿವು ಇದೆ. ಪಶ್ಚಿಮ ಘಟ್ಟಗಳು ಮತ್ತು ಬೆಳಗಾವಿ ಭಾಗದಲ್ಲಿ ಮಳೆ ಹೀಗೆ ಮುಂದುವರೆದರೆ ಮುಂದಿನ 4-5 ದಿನಗಳಲ್ಲಿ ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿ, ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಲು ಪ್ರಾರಂಭವಾಗುವದರಿಂದ ಘಟಪ್ರಭಾ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.