![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 23, 2024, 5:25 PM IST
ಕೊಲಂಬೋ: ಭಾರತ ವಿರುದ್ದದ ಸರಣಿಗೆ ಶ್ರೀಲಂಕಾ ತಂಡ (Sri Lanka Team) ಪ್ರಕಟಿಸಲಾಗಿದೆ. ಭಾರತದ ವಿರುದ್ದ ಶ್ರೀಲಂಕಾವು ಜುಲೈ 27ರಿಂದ 30ರವರೆಗೆ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಇದಕ್ಕಾಗಿ ತಂಡ ಪ್ರಕಟಿಸಲಾಗಿದ್ದು, ನೂತನ ನಾಯಕನ ಆಯ್ಕೆ ಮಾಡಲಾಗಿದೆ.
ಶ್ರೀಲಂಕಾದ ಟಿ20 ತಂಡದ ನಾಯಕನಾಗಿದ್ದ ವಾನಿಂದು ಹಸರಂಗ (Wanindu Hasaranga) ಅವರು ಟಿ20 ವಿಶ್ವಕಪ್ ಸೋಲಿನ ಬಳಿಕ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಹೊಸ ನಾಯಕನ ನೇಮಕವಾಗಿದ್ದು, ಮಿಡಲ್ ಆರ್ಡರ್ ಬ್ಯಾಟರ್ ಚರಿತ ಅಸಲಂಕಾ (Charith Asalanka) ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಇತ್ತೀಚೆಗೆ ಮುಗಿದ ಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಚರಿತ್ ಅಸಲಂಕಾ ನಾಯಕತ್ವದ ಜಾಫ್ನಾ ಕಿಂಗ್ಸ್ ತಂಡವು ಚಾಂಪಿಯನ್ ಆಗಿತ್ತು.
ಭಾರತ ವಿರುದ್ದದ ಸರಣಿಗೆ 16 ಜನರ ತಂಡ ಪ್ರಕಟಿಸಲಾಗಿದೆ. ಹಿರಿಯ ಆಲ್ ರೌಂಡರ್ ಏಂಜಲೋ ಮ್ಯಾಥ್ಯೂಸ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಆದರೆ ಮಾಜಿ ನಾಯಕ ದಾಸುನ್ ಶನಕ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಟಿ20 ವಿಶ್ವಕಪ್ ತಂಡದಲ್ಲಿರದ ದಿನೇಶ್ ಚಾಂಡಿಮಾಲ್ ಅವರು ತಂಡಕ್ಕೆ ಮರಳಿದ್ದಾರೆ.
ಭಾರತ ತಂಡದಂತೆ ಲಂಕಾಗೂ ಹೊಸ ಕೋಚ್ ಆಗಮನವಾಗಿದೆ. ಮಾಜಿ ಆಟಗಾರ ಸನತ್ ಜಯಸೂರ್ಯ ಅವರು ತಂಡದ ಕೋಚಿಂಗ್ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ನಾಯಕತ್ವ ತ್ಯಜಿಸಿದ ಹಸರಂಗ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಲಂಕಾ ತಂಡ: ಚರಿತ್ ಅಸಲಂಕ (ನಾಯಕ), ಪಾತ್ತುಮ್ ನಿಸ್ಸಾಂಕ, ಕುಸಲ್ ಜನಿತ್ ಪೆರೇರಾ, ಅವಿಷ್ಕ ಫೆರ್ನಾಂಡೊ, ಕುಸಲ್ ಮೆಂಡಿಸ್, ದಿನೇಶ್ ಚಾಂಡಿಮಾಲ್, ಕಮಿಂದು ಮೆಂಡಿಸ್, ದಾಸುನ್ ಶನಕ, ವಾನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಚಮಿಂದು ವಿಕ್ರಮಸಿಂಗ, ಮತೀಶಾ ಪತಿರಣ, ನುವಾನ್ ತುಷಾರ, ದುಷ್ಮಂತ ಚಮೀರ, ಬಿನೂರ ಫೆರ್ನಾಂಡೋ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.