Union Budget 2024: ಮುದ್ರಾ ಸಾಲ ಮಿತಿ 20 ಲಕ್ಷ ರೂ.ಗಳಿಗೆ ಏರಿಕೆ


Team Udayavani, Jul 23, 2024, 8:21 PM IST

Budget 2024; Mudra loan limit increased to Rs.20 lakhs

ಹೊಸದಿಲ್ಲಿ: ದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆ  (ಪಿಎಂಎಂವೈ)ಅನ್ವಯ ಪಡೆಯುವ ಸಾಲದ ಮಿತಿಯನ್ನು ಪರಿಷ್ಕರಿಸಲಾಗಿದೆ. ಮುದ್ರಾದ “ತರುಣ ವರ್ಗ’ದ ಅನ್ವಯ ನೀಡಲಾಗುವ ಸಾಲದ ಮಿತಿಯನ್ನು 10ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಈ ಮೂಲಕ ಉದ್ಯಮಿಗಳಿಗೆ ಕೇಂದ್ರ ಬಜೆಟ್‌ನಲ್ಲಿ ಸಿಹಿ ನೀಡಲಾಗಿದೆ.

ಮುದ್ರಾ ಯೋಜನೆಯಲ್ಲಿ 3 ವರ್ಗದಲ್ಲಿ (ಕ್ಯಾಟಗರಿಯಲ್ಲಿ) ಸಾಲಗಳನ್ನು ನೀಡಲಾಗುತ್ತದೆ. ಈ ಪೈಕಿ ತರುಣ ವರ್ಗದ ಅನ್ವಯ ನೀಡಲಾಗುತ್ತಿದ್ದ ಸಾಲದ ಮಿತಿ ಈ ಹಿಂದೆ 5ರಿಂದ 10 ಲಕ್ಷ ರೂ.ಗಳ ವರೆಗಿತ್ತು. ಇದೀಗ ಇದೇ ವರ್ಗದಲ್ಲಿ ಈ ಹಿಂದೆ ಸಾಲ ಪಡೆದು, ಯಸ್ವಿಯಾಗಿ ಮರುಪಾವತಿಸಿದ ಉದ್ಯಮಿಗಳು ಹೊಸದಾಗಿ 20 ಲಕ್ಷ ರೂ.ಗಳವರೆಗೆ ಸಾಲ ಪಡೆಯಬಹುದಾಗಿದೆ. ಈ ಮೂಲಕ ಉದ್ಯಮ ವಿಸ್ತರಣೆಗೆ ಕೇಂದ್ರದಿಂದ ಹೆಚ್ಚಿನ ಬೆಂಬಲ ಸಿಕ್ಕಂತಾಗಿದೆ. ಉಳಿದಂತೆ ಶಿಶು ಹಾಗೂ ಕಿಶೋರ ವರ್ಗದ ಸಾಲದ ಮಿತಿಗಳು ಹಾಗೆಯೇ ಮುಂದುವರಿದಿವೆ. ಶಿಶು ವರ್ಗದಲ್ಲಿ 50,000ರೂ.ಗಳವರೆಗೆ ಸಾಲ ಪಡೆಯಬಹುದಾಗಿದ್ದು, ಕಿಶೋರ ವರ್ಗದಲ್ಲಿ 50 ಸಾವಿರದಿಂದ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ದೊರೆಯಲಿದೆ. ಪಿಎಂಎಂವೈ ಅನ್ವಯ ಬ್ಯಾಂಕುಗಳು, ಬ್ಯಾಂಕಿಂಗ್‌ ಅಲ್ಲದ ಹಣಕಾಸು ಕಂಪನಿಗಳು (ಎನ್‌ಬಿಎಫ್ಸಿಎಸ್‌), ಸಣ್ಣ ಹಣಕಾಸು ಸಂಸ್ಥೆಗಳು (ಎಂಎಫ್ಐಎಸ್‌) ಹಾಗೂ ಇತರ ಹಣಕಾಸು ಸಂಸ್ಥೆಗಳ ಮೂಲಕ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ಏನಿದು ಮುದ್ರಾ ಯೋಜನೆ ?: ಕಾರ್ಪೋರೇಟ್‌ ಅಲ್ಲದ ಕೃಷಿಯೇತರ ಸಣ್ಣ ಮತ್ತು ಸೂಕ್ಷ್ಮಉದ್ಯಮಿಗಳಿಗೆ ಮೇಲಾಧಾರ ರಹಿತ ಸಾಲವನ್ನು ಸುಲಭವಾಗಿ ಒದಗಿಸುವ ನಿಟ್ಟಿನಲ್ಲಿ 2015ರ ಏಪ್ರಿಲ್‌ 8ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ನೀಡಿದರು. ಕಡಿಮೆ ಬಡ್ಡಿದರದಲ್ಲಿ ದೊರೆಯುವ ಈ ಸಾಲ ಸೌಲಭ್ಯದಿಂದ ಹೊಸದಾಗಿ ಉದ್ಯಮ ಆರಂಭಿಸಲು ಅಥವಾ ಅಸ್ತಿತ್ವದಲ್ಲಿರುವ ಉದ್ಯಮದ ವಿಸ್ತರಣೆಗೆ ಅನುಕೂಲವಾಗಲಿದೆ.

 ಮುದ್ರಾದಿಂದ ಮಹಿಳಾ ಸಬಲೀಕರಣ: 2024ರ ಫೆಬ್ರವರಿವರೆಗೆ ಮುದ್ರಾ ಯೋಜನೆ ಅನ್ವಯ 22.5 ಲಕ್ಷ ಕೋಟಿ ರೂ.ಮೊತ್ತದ ಒಟ್ಟು 43 ಕೋಟಿ ಸಾಲಗಳನ್ನು ನೀಡಲಾಗಿದೆ. ಈ ಪೈಕಿ 30 ಕೋಟಿ ಸಾಲಗಳನ್ನು ಮಹಿಳೆಯರಿಗೇ ನೀಡಲಾಗಿದೆ. ಮಹಿಳೆಯರು ಹೊಸದಾಗಿ ಉದ್ಯಮಗಳನ್ನು ಆರಂಭಿಸಲು ಅಗತ್ಯವಿರುವ ಸಾಲ ಸೌಲಭ್ಯ ಒದಗಿಸುವ ಮೂಲಕ ಮಹಿಳಾ ಉದ್ಯಮಿಗಳನ್ನು ಸೃಷ್ಟಿಸುವುದರ ಜತೆಯೆಲ್ಲೇ ಉದ್ಯೋಗ ಅವಕಾಶಗಳನ್ನೂ ಮುದ್ರಾ ಯೋಜನೆ ಮೂಲಕ ಸೃಷ್ಟಿಸಲಾಗುತ್ತಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.