![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 23, 2024, 8:27 PM IST
ನವದೆಹಲಿ: ಹೊಚ್ಚಹೊಸ ಕೇಂದ್ರಾಡಳಿತ ಪ್ರದೇಶ ಲಡಾಖ್ಗೆ ಕೇಂದ್ರ ಸರ್ಕಾರ ಬರೋಬ್ಬರಿ 5,958 ಕೋಟಿ ರೂ. ನೆರವು ಘೋಷಿಸಿದ್ದು ಇದು ಕಳೆದ ಸಾಲಿಗಿಂತ ಶೇ.32ರಷ್ಟು ಹೆಚ್ಚು.
ಕಳೆದ ವರ್ಷ ಲಡಾಖ್ಗೆ ಕೇಂದ್ರ ಸರ್ಕಾರ 4,500 ಕೋಟಿ ರೂ.ಗಳನ್ನು ನಿಗದಿಪಡಿಸಿತ್ತು. 2019ರಲ್ಲಿ ಜಮ್ಮು ಮತ್ತು ಕಾಶ್ಮೀರ 370ನೇ ವಿಧಿಯ ರದ್ದತಿಯ ಬಳಿಕ ಲಡಾಖ್ನ್ನು ಕೇಂದ್ರಾಳಿತ ಪ್ರದೇಶ ಎಂದು ಘೋಷಿಸಿದ್ದು ಇಡೀ ಪ್ರಾಂತ್ಯದ ಆಡಳಿತ, ಅಭಿವೃದ್ಧಿ ಹೊಣೆ ಕೇಂದ್ರ ಸರ್ಕಾರದ ಹೆಗಲೇರಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ಅತಿ ಹೆಚ್ಚು ಅನುದಾನವನ್ನು ಒದಗಿಸಿದ್ದಾರೆ.
ಕೃಷಿ ಮತ್ತು ಸಂಬಂಧಿತ ಯೋಜನೆಗಳು, ನೀರು ಸರಬರಾಜು, ಗ್ರಾಮೀಣ ಅಭಿವೃದ್ಧಿ, ವಿದ್ಯುತ್, ಅರಣ್ಯೀಕರಣ ಮತ್ತು ವನ್ಯಜೀವಿ, ವೈದ್ಯಕೀಯ ಮತ್ತು ಸಾರ್ವಜನಿಕ ಆರೋಗ್ಯ, ಶಿಕ್ಷಣ ಮುಂತಾದ ಇಲಾಖೆಗಳಿಗೆ ಈ ನೆರವು ದೊರೆಯಲಿದೆ. ಲಡಾಖ್ ಪ್ರಾಂತ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮೂಲಸೌಕರ್ಯಗಳಿಗೆ ಮತ್ತು ಪಾರಂಪರಿಕ ಸಂಸ್ಕೃತಿ ಪುನರುಜ್ಜೀವಕ್ಕೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಹಸಿರು ಇಂಧನ, ದೂರಸಂಪರ್ಕ, ರಸ್ತೆ ಸಂಪರ್ಕ, ಕ್ರೀಡೆ, ಗ್ರಿಡ್ ಟ್ರಾನ್ಸ್ಮಿಷನ್ ಲೈನ್ಸ್ಗೆ ಒತ್ತು ನೀಡಲಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.