Budget 2024; ದೇಶದ 100 ನಗರದಲ್ಲಿ ಕೈಗಾರಿಕಾ ಪಾರ್ಕ್ಗಳು
Team Udayavani, Jul 24, 2024, 3:32 AM IST
ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ಗಳ ನಿರ್ಮಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ 12 ಕೈಗಾರಿಕಾ ಕಾರಿಡಾರ್ಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ದೇಶದ 100 ನಗರಗಳಲ್ಲಿ ಕೈಗಾರಿಕಾ ಪಾರ್ಕ್ಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ.
ಕೈಗಾರಿಕಾ ಪಾರ್ಕ್ಗಳಲ್ಲಿ ಸಂಪೂರ್ಣ ವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ. ಇದಕ್ಕಾಗಿ ದೇಶದ 100 ನಗರಗಳನ್ನು ಆಯ್ಕೆ ಮಾಡಲು ನಿರ್ಧರಿಸ ಲಾಗಿದೆ. ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೈಗಾರಿಕಾ ಕಾರಿಡಾರ್ಗಳನ್ನು ನಿರ್ಮಾಣ ಮಾಡಲಾಗುತ್ತದೆ. ದೆಹ ಲಿ-ಮುಂಬೈ ಇಂಡಸ್ಟ್ರಿಯಲ್ ಕಾರಿಡಾರ್, ವೆಸ್ಟರ್ನ್ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಅಭಿವೃದ್ಧಿಪಡಿಸಿದೆ. ಪೂರ್ವ ಕರಾವಳಿ ವಲಯವನ್ನು ನಿಯಂತ್ರಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಚೆನ್ನೈ- ವೈಜಾಗ್ ಕೈಗಾರಿಕಾ ಕಾರಿಡಾರ್ಗೆ ಈ ಯೋಜನೆಯಿಂದ ಹೆಚ್ಚಿನ ಕೊಡುಗೆ ದೊರೆಯುವ ಸಂಭವವಿದೆ. 800 ಕಿ.ಮೀ. ವ್ಯಾಪ್ತಿ ಒಳಗೊಂಡಿದೆ.
ಉದ್ಯಮಗಳ ನ್ಯಾಯ ಮಂಡಳಿ ಬಲವರ್ಧನೆ
ದಿವಾಳಿತನ ಸಂಹಿತೆಗೆ (ಐಬಿಸಿ) ಬದಲಾವಣೆಗಳನ್ನು ತರುವ ಮೂಲಕ ಉದ್ಯಮಗಳ ವ್ಯಾಜ್ಯ ಪರಿಹರಿಸುವ ನ್ಯಾಯಮಂಡಳಿಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳುವುದಾಗಿ ಘೋಷಿಸಲಾಗಿದೆ. ಉದ್ಯ ಮಗಳು ಎದುರಿಸುತ್ತಿರುವ ಬಾಕಿ ವಸೂಲಾತಿ ಸಮಸ್ಯೆ ಕ್ಷಿಪ್ರವಾಗಿ ಇತ್ಯರ್ಥಗೊಳಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲೂ ಉದ್ದೇಶಿಸಲಾಗಿದೆ. ಅಲ್ಲದೇ, ಐಬಿಸಿ ಅನ್ವಯ ನಿರ್ಧರಿಸಬೇಕಾದ ನಿರ್ದಿಷ್ಟ ಪ್ರಕರಣಗಳ ಮೇಲ್ವಿಚಾರಣೆಗೆಂದೇ ಹೆಚ್ಚು ವರಿ ನ್ಯಾಯಾಧಿಕರಣಗಳ ಸ್ಥಾಪನೆ ಬಗ್ಗೆ ಯೂ ಪ್ರಸ್ತಾಪಿಸಲಾಗಿದೆ. ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಪಾರದರ್ಶಕತೆ ಖಾತರಿ ಪಡಿಸಿಕೊಳ್ಳಲು ನ್ಯಾಯಾಧಿಕರಣ ಗಳಲ್ಲಿ ತಂತ್ರಜ್ಞಾನ ಆಧಾರಿತ ವ್ಯವಸ್ಥೆಗಳನ್ನು ರೂಪಿಸಲಾಗುವುದು. ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯ ಮಂಡಳಿಗಳು ಈಗಾ ಗಲೇ 1,000ಕ್ಕೂ ಅಧಿಕ ಸಂಸ್ಥೆಗಳ ಸಮಸ್ಯೆ ಬಗೆಹರಿಸಿ, 3.3 ಲಕ್ಷ ಕೋಟಿ ರೂ.ಗಳ ಸಾಲ ವಸೂಲಾತಿ ಮಾಡಿವೆ. ಇಂಥ ಪ್ರಕ್ರಿಯೆಗಳನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.