Shiroor Hill Slide: ಗಂಗಾವಳಿಯಲ್ಲಿ ನೌಕಾಪಡೆ ಮುಳುಗು ತಜ್ಞರಿಂದ ಶೋಧ

ಮೃತದೇಹ ಹೊರಲು ಯಾರೂ ಸಿದ್ಧರಿಲ್ಲದಾಗ ಹೆಗಲುಕೊಟ್ಟ ಮಂಗಳೂರಿನ ಪತ್ರಕರ್ತರು

Team Udayavani, Jul 24, 2024, 7:30 AM IST

Shrooru-1

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಸಮೀಪ ಶಿರೂರು ಬಳಿ ಗುಡ್ಡಕುಸಿತದಿಂದ ಗಂಗಾವಳಿ ನದಿಯಲ್ಲಿ ಕೊಚ್ಚಿಹೋಗಿರುವವರ ಪತ್ತೆಗೆ ಮಂಗಳವಾರ ನೌಕಾಪಡೆಯ ಮುಳುಗು ತಜ್ಞರು ಹುಡುಕಾಟ ನಡೆಸಿದರು.

ಶಿರೂರು ಮತ್ತು ಉಳುವರೆ ಗ್ರಾಮಗಳ ನಡುವೆ ಹರಿಯುವ ಗಂಗಾವಳಿ ನದಿಯ ತಳದಲ್ಲಿ ಸ್ಕೂಬಾ ಡ್ರೈವರ್ಸ್‌ ಕೂಡ ಹಗಲಿಡೀ ಸತತ ಪ್ರಯತ್ನ ನಡೆಸಿದರು. ನದಿಯಲ್ಲಿ ಬಿದ್ದಿರುವ ಕಲ್ಲು ಬಂಡೆಗಳು ಮತ್ತು ಮಣ್ಣಿನ ಅವಶೇಷದಡಿ ನೀರಲ್ಲಿ ಬಳಸುವ ವಾಟರ್‌ ಪೆನಟ್ರೇಟಿಂಗ್‌ ರಾಡರ್‌ ಬಳಸಿ ಶೋಧಿಸಲಾಯಿತು. ಲಾರಿ ಹಾಗೂ ಮನೆಗಳ ಅವಶೇಷಗಳ ಹುಡುಕಾಟಕ್ಕೆ ತೀವ್ರ ಶೋಧ ನಡೆದರೂ ಪ್ರಯೋಜನವಾಗಲಿಲ್ಲ.

ಆರು ಬೋಟ್‌ಗಳಲ್ಲಿ 20ಕ್ಕೂ ಅಧಿಕ ಮಂದಿ ನೌಕಾಪಡೆ, ಸೇನಾಪಡೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಸಿಬ್ಬಂದಿ ಹುಡುಕಾಟದಲ್ಲಿ ನಿರತರಾಗಿದ್ದು, ಉಳಿದ ಸಿಬ್ಬಂದಿ ನದಿ ದಂಡೆಯಲ್ಲಿರುವ ಮಣ್ಣಿನಡಿ ಶೋಧ ನಡೆಸಿದರೂ ಲಾರಿ, ಯಾವುದೇ ವಸ್ತು ಅಥವಾ ಶವಗಳ ಸುಳಿವು ದೊರೆತಿಲ್ಲ.

ಬೆಳಗ್ಗೆಯಿಂದಲೇ ವಾಟರ್‌ ಬೋಟ್‌ಗಳನ್ನು ಸಜ್ಜುಗೊಳಿಸಿಕೊಂಡು ನದಿಯಲ್ಲಿ ಕಾರ್ಯಾಚರಣೆ ನಡೆದಿದ್ದು, ಗುಡ್ಡ ಕುಸಿತದ ಘಟನೆಯಲ್ಲಿ ಕಾಣೆಯಾಗಿರುವ ಜಗನ್ನಾಥ, ಕೇರಳ ಮೂಲದ ಚಾಲಕ ಅರ್ಜುನ್‌ ಕುಟುಂಬದವರು ಆಶಾವಾದದಿಂದ ನದಿಯ ಬಳಿ ಸ್ವಲ್ಪ ಹೊತ್ತು ಕಾದಿದ್ದರು. ಇನ್ನೊಂದೆಡೆ ನದಿಯ 60 ಅಡಿ ಆಳದಲ್ಲಿ ಬಿದ್ದಿರುವ ಕಲ್ಲು ಮಣ್ಣು ತೆಗೆಯುವ ಸಾಮರ್ಥಯದ ಪ್ರೋಕ್‌ಲೈನ್‌ ಯಂತ್ರ ಶಿರೂರಿಗೆ ಆಗಮಿಸಿದ್ದು, ಬುಧವಾರ ಕಾರ್ಯಾಚರಣೆ ಆರಂಭವಾಗಲಿದೆ.

ಹೇಗೆಲ್ಲಾ ಕಾರ್ಯಾಚರಣೆ?
*ಗಂಗಾವಳಿ ನದಿ ತಳದಲ್ಲಿ ಸ್ಕೂಬಾ ಡ್ರೈವರ್ಸ್‌ನಿಂದ ನಿರಂತರ ಕಾರ್ಯಾಚರಣೆ
*ವಾಟರ್‌ ಪೆನಟ್ರೇಟಿಂಗ್‌ ರಾಡರ್‌ ಬಳಸಿ ಲಾರಿ, ಅವಶೇಷಗಳಿಗಾಗಿ ಶೋಧ
* 6 ಬೋಟ್‌ಗಳಲ್ಲಿ 20ಕ್ಕೂ ಅಧಿಕ ನೌಕಾಪಡೆ, ಸೇನಾಪಡೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಸಿಬ್ಬಂದಿ
* ಬೆಳಗ್ಗೆಯಿಂದಲೇ ವಾಟರ್‌ ಬೋಟ್‌ಗಳನ್ನು ಸಜ್ಜುಗೊಳಿಸಿ ನದಿಯಲ್ಲಿ ಕಾರ್ಯಾಚರಣೆ

ಶಿರೂರು ದುರಂತ: ಮಹಿಳೆಯ ಶವ ಪತ್ತೆ

ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕಾಣೆಯಾಗಿದ್ದ ಉಳುವರೆ ಗ್ರಾಮದ ಮಹಿಳೆ ಸಣ್ಣಿ ಅವರ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಈ ಮೂಲಕ ಈತನಕ ಒಟ್ಟು 8 ಮಂದಿಯ ಶವ ಪತ್ತೆಯಾದಂತಾಗಿದೆ.

ಜು. 16ರಂದು ಸಂಭವಿಸಿದ ಗುಡ್ಡಕುಸಿತದಲ್ಲಿ ಸಣ್ಣಿ ಮನೆ ಸಹಿತ ಗಂಗಾವಳಿ ನದಿಯ ನೀರಲ್ಲಿ ಕೊಚ್ಚಿ ಹೋಗಿದ್ದರು. ಸತತ 8 ದಿನಗಳ ಶೋಧ ಕಾರ್ಯದ ಬಳಿಕ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಸಣ್ಣಿ ಅವರ ಮೃತದೇಹ ಪತ್ತೆಯಾಗಿದ್ದು, ಎಸ್‌ಡಿಆರ್‌ಎಫ್‌ನವರು ಹೊರತೆಗೆದರು. ಅಂಕೋಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು
ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಗೊಂಡು ಗ್ರಾಮಕ್ಕೆ ಶವ ತಂದಾಗ ಹೊರುವವ ರಿಲ್ಲದೆ ರಸ್ತೆಯೂ ಸರಿಯಿಲ್ಲದೇ ಆ್ಯಂಬುಲೆನ್ಸ್‌ನಲ್ಲೇ ಉಳಿದಿತ್ತು. ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಆಗ ಅಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃತದೇಹವನ್ನು ತಾವೇ ಹೊತ್ತು ಸಾಗಿ ಮನೆಯವರಿಗೆ ಒಪ್ಪಿಸಿ ಅಂತಿಮ ಸಂಸ್ಕಾರ ನಡೆಸಲು ನೆರವಾದರು.

ಗ್ಯಾಸ್‌ಟ್ಯಾಂಕರ್‌ ಚಾಲಕ ನಾಪತ್ತೆ
ಗುಡ್ಡ ಕುಸಿತದಲ್ಲಿ ತಮಿಳುನಾಡು ಮೂಲದ ಗ್ಯಾಸ್‌ ಟ್ಯಾಂಕರ್‌ ಚಾಲಕ ತಮಿಳುನಾಡು ರಾಜ್ಯದ ಕೊವಿಲ್‌ ನಿವಾಸಿ ಶರವಣನ್‌ (38) ನಾಪತ್ತೆ ಆಗಿರುವುದಾಗಿ ಅವರ ತಾಯಿ ಅಂಕೋಲಾ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರಿನಿಂದ ಧಾರವಾಡಕ್ಕೆ ಹೋಗಿ ಗ್ಯಾಸ್‌ ಖಾಲಿ ಮಾಡಿ ಮರಳುವ ಹಾದಿಯಲ್ಲಿ ಶಿರೂರಿನಲ್ಲಿ ಚಹಾ ಸೇವನೆಗೆ ನಿಂತಿದ್ದ ಶರವಣನ್‌ ನಾಪತ್ತೆಯಾಗಿದ್ದರು. ಅವರು ಚಾಲಕನಾಗಿದ್ದ ಟ್ಯಾಂಕರ್‌ ಗುಡ್ಡ ಕುಸಿದ ಸ್ಥಳದಲ್ಲಿದೆ.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.