Union Budget; ದೂರಗಾಮಿ ಸತ್ಪರಿಣಾಮಗಳ ನಿರ್ಮಲಾ “ಸಪ್ತಮ’ ಬಜೆಟ್‌


Team Udayavani, Jul 24, 2024, 6:00 AM IST

ದೂರಗಾಮಿ ಸತ್ಪರಿಣಾಮಗಳ ನಿರ್ಮಲಾ “ಸಪ್ತಮ’ ಬಜೆಟ್‌

ದಾಖಲೆಯ ಮೋದಿ -3.0 ಸರಕಾರದ ಇನ್ನೊಂದು ದಾಖಲೆಯಾಗಿ ನಿರ್ಮಲಾ ಸೀತಾರಾಮನ್‌ ಅವರು 7ನೇ ಬಾರಿಗೆ ಮುಂಗಡ ಪತ್ರವನ್ನು ಮಂಡಿಸಿದ್ದಾರೆ. ಹಲವು ಕಾರಣಗಳಿಗಾಗಿ ಈ ಬಜೆಟ್‌ ಸ್ಮರಣಾರ್ಹ ಮತ್ತು ಉಲ್ಲೇಖಾರ್ಹವಾಗಿ­ರುವುದು ಕೂಡ ಒಂದು ದಾಖಲೆಯೇ. ವಿಶೇಷವಾಗಿ ಮೋದಿಯವರ ವಿಕಸಿತ ಭಾರತ ಧ್ಯೇಯ ಸಾಧನೆಗಾಗಿ ದೂರಗಾಮಿ ಪರಿಣಾಮಗಳನ್ನು ಬೀರುವಂತೆ ರೂಪಿಸಿದ ಬಜೆಟ್‌ ಇದು. ತತ್‌ಕ್ಷಣಕ್ಕೆ ಖುಷಿ ಉಂಟು ಮಾಡುವಂತಹ “ಜನಪ್ರಿಯತೆ’ಯ ಘೋಷಣೆಗಳು ಇದರಲ್ಲಿ ಕಡಿಮೆ ಇವೆ. ಆದರೆ ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು, ಮಧ್ಯಮ ವರ್ಗ ಸೇರಿದಂತೆ ಆದಾಯ ತೆರಿಗೆ ಪಾವತಿದಾರನಿಗೆ ತುಸು ಉಳಿತಾಯ, ಔದ್ಯಮಿಕ ಕ್ಷೇತ್ರಕ್ಕೆ ಉತ್ತೇಜನ ನೀಡುವ ಸೂಕ್ಷ್ಮ ಸಂವೇದಿ ಬಜೆಟ್‌ ಇದು ಎಂದು ನಿಸ್ಸಂಶಯವಾಗಿ ಹೇಳಬಹುದಾಗಿದೆ.

ಲೋಕಸಭಾ ಚುನಾವಣೆಗೆ ಮುನ್ನ ನಿರ್ಮಲಾ ಸೀತಾರಾಮನ್‌ ಮಂಡಿಸಿದ್ದ ಮಧ್ಯಾಂತರ ಬಜೆಟ್‌ನ ಹಲವು ಮುಖ್ಯಾಂಶಗಳನ್ನು ಈ ಬಾರಿಯ ಪೂರ್ಣ ಮುಂಗಡ ಪತ್ರದಲ್ಲಿ ಉಳಿಸಿಕೊಳ್ಳಲಾಗಿದೆ. ಮುಖ್ಯವಾಗಿ ಉಚಿತ ಪಡಿತರವನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸಿರುವುದು ಬಡ ಮತ್ತು ಕಡುಬಡ ವರ್ಗದವರಿಗೆ ನೆಮ್ಮದಿ ತರುವ ವಿಷಯ. ನಿರ್ಮಲಾ ಅವರು ತಮ್ಮ ಬಜೆಟ್‌ನಲ್ಲಿ ಸರಕಾರ ಗಮನ ಹರಿಸಿರುವ ಒಂಬತ್ತು ಅಂಶಗಳ ಬಗ್ಗೆ ಹೇಳಿದ್ದಾರೆ. ಕೃಷಿಯಲ್ಲಿ ಉತ್ಪಾದಕತೆ ಮತ್ತು ನಮ್ಯತೆ, ಉದ್ಯೋಗ ಸೃಷ್ಟಿ ಮತ್ತು ಕೌಶಲವೃದ್ಧಿ, ಸಮಗ್ರ ಮಾನವ ಸಂಪದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ, ಉತ್ಪಾದನೆ ಮತ್ತು ಸೇವಾಕ್ಷೇತ್ರ, ನಗರಾಭಿವೃದ್ಧಿ, ಶಕ್ತಿ ಭದ್ರತೆ, ಮೂಲಸೌಕರ್ಯ, ಆವಿಷ್ಕಾರ, ಸಂಶೋಧನೆ ಮತ್ತು ಅಭಿವೃದ್ಧಿ, ಮುಂದಿನ ಪೀಳಿಗೆಯ ಸುಧಾರಣೆಗಳತ್ತ ಸರಕಾರದ ಗಮನ ಎಂದು ಅವರು ಹೇಳಿದ್ದು, ಬಜೆಟ್‌ ಕೂಡ ಈ ಅಂಶಗಳಿಗೆ ಒತ್ತು ನೀಡಿರುವುದನ್ನು ಗಮನಿಸಬಹುದಾಗಿದೆ.

ಈ ಬಾರಿಯ ಬಜೆಟ್‌ನಲ್ಲಿ ಕಳೆದ ಲೋಕಸಭಾ ಚುನಾವಣೆ ಮತ್ತು ಮುಂದೆ ಬರಲಿರುವ ಹರಿಯಾಣ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನೆರಳು ಕೂಡ ಇರುವುದನ್ನು ಗಮನಿಸಬಹುದು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು 400+ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಹೊಂದಿತ್ತಾದರೂ ಅದು ಕನಸಾಗಿಯೇ ಉಳಿಯಿತು. ಹಲವು ರೀತಿಯ ಜನಕಲ್ಯಾಣ ಯೋಜನೆ, ಕ್ರಮಗಳನ್ನು ಬಿಜೆಪಿ ಸರಕಾರ ಕಳೆದ ಎರಡು ಅವಧಿಗಳಲ್ಲಿ ಕೈಗೊಂಡಿದ್ದರೂ ಲೋಕಸಭಾ ಚುನಾವಣೆಯ ಹಿನ್ನಡೆಗೆ ಮುಖ್ಯವಾಗಿ ನಿರುದ್ಯೋಗ ಸಮಸ್ಯೆ ಕಾರಣ ಎನ್ನಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಅದನ್ನು ಪರಿಹರಿಸುವ ಗಟ್ಟಿತನದ ಕ್ರಮಗಳನ್ನು ಹಾಕಿಕೊಳ್ಳಲಾಗಿದೆ, ಇದು ಸ್ವಾಗತಾರ್ಹ.

ಇನ್ನು ಮಧ್ಯಮ ವರ್ಗದವರಿಗೆ ನೆಮ್ಮದಿ ನೀಡುವ ಕ್ರಮವಾಗಿ ಆದಾಯ ತೆರಿಗೆಯ ಸ್ಲಾéಬ್‌ಗಳಲ್ಲಿ ಬದಲಾವಣೆಗಳನ್ನು ತಂದಿರುವುದು ಕೂಡ ಉತ್ತಮ ಅಂಶ. ಹಾಗೆಯೇ ಕ್ಯಾಪಿಟಲ್‌ ಗೈನ್ಸ್‌ ನಿಯಮಗಳನ್ನು ಕೊಂಚ ಬದಲಾಯಿಸಿ ಜನರಲ್ಲಿ ಹೆಚ್ಚು ಹಣ ಉಳಿಯುವಂತೆ ಮಾಡಲಾಗಿದೆ. ಸ್ಟಾಂಡರ್ಡ್‌ ಡಿಡಕ್ಷನ್‌ ಮಿತಿಯನ್ನು ಕೂಡ ಹೆಚ್ಚಿಸಲಾಗಿರುವುದು ಉತ್ತಮ ಕ್ರಮ. ಕ್ಯಾನ್ಸರ್‌ ಸಂಬಂಧಿತ ಕೆಲವು ಔಷಧಗಳ ಬೆಲೆ ಇಳಿಕೆಯೂ ಉತ್ತಮ ನಡೆ.

ಜಿಎಸ್‌ಟಿ ಸರಳೀಕರಣ, ವಿದೇಶೀ ಬಂಡವಾಳ ಆಕರ್ಷಣೆಯ ಕ್ರಮಗಳು, ಪರಮಾಣು ಇಂಧನ ಕ್ಷೇತ್ರಕ್ಕೆ ಉತ್ತೇಜನ ನೀಡಬಲ್ಲ ಕ್ರಮಗಳು ಕೂಡ ನಿರ್ಮಲಾ ಅವರ ಬಜೆಟ್‌ನ ಗಮನಾರ್ಹ ಮುಖ್ಯಾಂಶಗಳು.

ಒಟ್ಟಾರೆಯಾಗಿ ಹೇಳುವುದಾದರೆ, ತತ್‌ಕ್ಷಣಕ್ಕೆ ಜನರ ಮನಸ್ಸನ್ನು ಗೆಲ್ಲುವಂತಹ ಎದ್ದು ಕಾಣುವ ಘೋಷಣೆಗಳು ಇಲ್ಲದಿದ್ದರೂ ದೂರಗಾಮಿಯಾಗಿ ಜನಕಲ್ಯಾಣವನ್ನು ಸಾಧಿಸುವಂತಹ ಉತ್ತಮ ಮುಂಗಡಪತ್ರವಾಗಿ ನಿರ್ಮಲಾ ಅವರ ಸಪ್ತಮ ಬಜೆಟ್‌ ಮಂಡನೆಯಾಗಿದೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

ಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯ

India: ಕ್ಯಾನ್ಸರ್‌ ಕಾಯಿಲೆ; ನಿರಂತರ ಜಾಗೃತಿ ಅಗತ್ಯ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

BAnga

Bangladesh Unrest: ಹಿಂದೂ ಸಮುದಾಯದ ರಕ್ಷಣೆ: ಬಾಂಗ್ಲಾ ಸರಕಾರ ಬದ್ಧತೆ ತೋರಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.