ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್. ಪತ್ತಾರ
1915ರಲ್ಲಿ ಕಸಾಪ ಸ್ಥಾಪಿಸಲು ಕಾರಣಿಭೂತರಾದರು
Team Udayavani, Jul 24, 2024, 6:09 PM IST
■ ಉದಯವಾಣಿ ಸಮಾಚಾರ
ಗದಗ: ಹರಿದು ಹಂಚಿ ಹೋಗಿದ್ದ ಕನ್ನಡ ನೆಲವನ್ನು ಒಂದುಗೂಡಿಸಲು ಅವಿರತವಾಗಿ ಶ್ರಮಿಸಿದರು ಕನ್ನಡ ಕುಲಪುರೋಹಿತರೆಂದು ಖ್ಯಾತರಾಗಿದ್ದ ಆಲೂರ ವೆಂಕಟರಾಯರು. ಕನ್ನಡಿಗರಲ್ಲಿ ಕೆಚ್ಚನ್ನು ಮೂಡಿಸಿ ಏಕೀಕರಣ ಹೋರಾಟಕ್ಕೆ ಹೊಸ ರೂಪವನ್ನು ನೀಡಿದರು. ಲೇಖನ, ನಾಟಕ, ಕೀರ್ತನಗಳ ಮೂಲಕ ಜಾಗೃತಿ ಮೂಡಿಸಿದರು ಎಂದು ಬರಹಗಾರ ಬಿ.ಎಲ್. ಪತ್ತಾರ ಹೇಳಿದರು.
ನಗರದ ತೋಂಟದ ಶ್ರೀಗಳ ಕನ್ನಡ ಭವನದಲ್ಲಿ ಜಿಲ್ಲಾ ಕಸಾಪ ವತಿಯಿಂದ ಜರುಗಿದ ಸಾಹಿತ್ಯ ಸಿಂಚನ ಮಾಲಿಕೆಯಲ್ಲಿ “ಕನ್ನಡಕ್ಕೆ ಆಲೂರು ವೆಂಕಟರಾಯರ ಕೊಡುಗೆ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಧರ್ಮ, ಸ್ವದೇಶಿ, ಸ್ವಭಾಷೆ ಹಾಗೂ ಸ್ವರಾಜ್ಯ ಇವುಗಳ ಹುಚ್ಚು ಹಿಡಿಸಿಕೊಂಡ ಆಲೂರರು ವಕೀಲಿ ವೃತ್ತಿಯನ್ನು ಬಿಟ್ಟು ಕರ್ನಾಟಕ ಏಕೀಕರಣಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದರು.
ಇತಿಹಾಸದಲ್ಲಿ ಆಸಕ್ತಿಯಿದ್ದ ಆಲೂರ ವೆಂಕಟರಾಯರು ಕರ್ನಾಟಕ ಇತಿಹಾಸ ಸಂಶೋಧನಾ ಮಂಡಳಿಯನ್ನು ಸ್ಥಾಪಿಸಿದರು.
ಕರ್ನಾಟಕ ವಿದ್ಯಾವರ್ಧಕ ಸಂಘದ ಮುಖವಾಣಿಯಾಗಿದ್ದ ವಾಗ್ಭೂಷಣ ಹಾಗೂ ಜಯಕರ್ನಾಟಕ ಪತ್ರಿಕೆಯ ಮೂಲಕ ಕನ್ನಡಿಗರ ಸ್ವಾಭಿಮಾನ ಬಡಿದೆಬ್ಬಿಸುವಂತಹ ಲೇಖನ ಬರೆದು ಪ್ರಕಟಿಸಿದರು. 1915ರಲ್ಲಿ ಕಸಾಪ ಸ್ಥಾಪಿಸಲು ಕಾರಣಿಭೂತರಾದರು ಎಂದರು.
ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಲೂರು ವೆಂಕಟರಾಯರು ಮುಂಬೈದಲ್ಲಿ ವ್ಯಾಸಂಗ ಮಾಡುತ್ತಿರುವ ಸಂದರ್ಭದಲ್ಲಿ ಕನ್ನಡ ನಾಡು ನುಡಿಗೆ ಪಣತೊಟ್ಟರು. ನಂತರ ಕನ್ನಡಿಗರಿಗೆ ಇತಿಹಾಸದ ಪ್ರಜ್ಞೆಯನ್ನು ತಮ್ಮ ಕೃತಿ ಮತ್ತು ಲೇಖನಗಳ ಮೂಲಕ ಮಾಡಿಕೊಟ್ಟು ಹೋರಾಟಕ್ಕೆ ಮಾನಸಿಕ ಸಿದ್ಧತೆ ಮಾಡಿದರು. ಭಾಷಾಭಿಮಾನ ಮತ್ತು ದೇಶಾಭಿಮಾನವನ್ನು ಜೊತೆಯಾಗಿ ಮುನ್ನಡೆಸಿದರು ಎಂದರು.
ಎಚ್.ಟಿ. ಸಂಜೀವಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಚಂದ್ರಶೇಖರ ವಸ್ತ್ರದ, ಕೆ.ಎಚ್. ಬೇಲೂರ, ಸಿ.ಎಂ. ಮಾರನಬಸರಿ, ಪ್ರ.ತೋ. ನಾರಾಯಣಪೂರ, ಎಸ್.ಎಸ್. ಕಳಸಾಪುರಶೆಟ್ರಾ, ಎಸ್.ಯು. ಸಜ್ಜನಶೆಟ್ಟರ್, ಎಸ್.ಎಸ್. ಸೂಳಿಕೇರಿ, ಶಶಿಕಾಂತ ಕೊರ್ಲಹಳ್ಳಿ, ರತ್ನಕ್ಕ ಪಾಟೀಲ, ಪದ್ಮಾಕಬಾಡಿ, ಮಂಜುಳಾ ವೆಂಕಟೇಶಯ್ಯ, ರತ್ನಾ ಪುರಂತರ, ಸುಧಾ ಬಳ್ಳಿ, ಶೈಲಜಾ ಗಿಡ್ನಂದಿ, ಬಸವರಾಜ ಗಣಪ್ಪನವರ, ಎಸ್.ಎ. ಪಾಟೀಲ, ಜೆ.ಎ. ಪಾಟೀಲ ಅಮರೇಶ ರಾಂಪೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.