Assembly: ಸುಳ್ಯದ 110 ಕೆ.ವಿ.ಸಬ್‌ಸ್ಟೇಷನ್‌ ಕಾಮಗಾರಿ ಸ್ಥಿತಿ ತಿಳಿಸಿ: ಶಾಸಕಿ ಭಾಗೀರಥಿ


Team Udayavani, Jul 25, 2024, 7:00 AM IST

Sulya-mLA

ಬೆಂಗಳೂರು: ಸುಳ್ಯದಲ್ಲಿನ ವಿದ್ಯುತ್‌ ಸಮಸ್ಯೆ ಹಾಗೂ 110 ಕೆವಿ ವಿದ್ಯುತ್‌ ಸಬ್‌ಸ್ಟೇಷನ್‌ ಕಾಮಗಾರಿಯ ಬಗ್ಗೆ ವಿಧಾನಸಭೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ ಎತ್ತಿದರು. ಕಾಮಗಾರಿಯು ಯಾವ ಹಂತದಲ್ಲಿದೆ, ನಿರ್ಮಾಣ ಯಾವಾಗ ಪೂರ್ತಿಗೊಳ್ಳಲಿದೆ ಎಂದು ಶಾಸಕರು ಪ್ರಶ್ನಿಸಿದ್ದರು.

ಸುಳ್ಯ 110ಕೆವಿ ಸಾಮರ್ಥ್ಯದ ವಿದ್ಯುತ್‌ ಉಪಕೇಂದ್ರ ಹಾಗೂ ಪ್ರಸರಣ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ. ವಿದ್ಯುತ್‌ ಉಪಕೇಂದ್ರದ ನಿಯಂತ್ರಣ ಕೊಠಡಿ ನಿರ್ಮಾಣ ಕಾರ್ಯ ಹಾಗೂ ಉಪಕೇಂದ್ರದ ಆವರಣ ಗೋಡೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಪ್ರಸರಣ ಮಾರ್ಗದ ಒಟ್ಟು 89 ಗೋಪುರಗಳಲ್ಲಿ, 3 ಗೋಪುರಗಳ ತಳಪಾಯ ನಿರ್ಮಾಣಗೊಂಡಿದೆ. ಗುತ್ತಿಗೆ ಕರಾರಿನಂತೆ ಉಪ ಕೇಂದ್ರದ ಕಾಮಗಾರಿಯನ್ನು ನವೆಂಬರ್‌ ಮೊದಲು ಪೂರ್ಣಗೊಳಿಸಲು ಕಾಲಮಿತಿ ನಿಗದಿಗೊಳಿಸಲಾಗಿದೆ ಎಂದು ಇಂದನ ಸಚಿವ ಕೆ.ಜೆ.ಜಾರ್ಜ್‌ ಅವರು ಉತ್ತರ ನೀಡಿದ್ದಾರೆ.

ಸುಳ್ಯ ಮತ್ತು ಕಡಬ ತಾ|ನ ಮೆಸ್ಕಾಂನ ವಿವಿಧ ಉಪವಿಭಾಗಗಳಿಗೆ ಮಂಜೂರಾದ ಮತ್ತು ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸಲು ಸರಕಾರ ಏನು ಕ್ರಮ ವಹಿಸಿದೆ ಎಂದು ಶಾಸಕರು ಪ್ರಶ್ನಿಸಿದ್ದು, ಸುಳ್ಯದಲ್ಲಿ 20 ಪವರ್‌ಮನ್‌ ಹುದ್ದೆ ಮಂಜೂರಾಗಿದ್ದು 16 ಭರ್ತಿಯಾಗಿದೆ ಎಂದ ಸಚಿವರು ಹೇಳಿದ್ದಾರೆ.

ಪೊಲೀಸ್‌ ಇಲಾಖೆಗೆ ಹೆಚ್ಚುವರಿ ವಾಹನ ಖರೀದಿಗೆ ಅನುದಾನ ಮೀಸಲು: ಗೃಹ ಸಚಿವ
ಬೆಂಗಳೂರು: ಸಾರ್ವಜನಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಪೊಲೀಸ್‌ ಇಲಾಖೆಗೆ ಹೊಸ ವಾಹನಗಳ ಖರೀದಿಗಾಗಿ 2024-25ನೇ ಸಾಲಿನಲ್ಲಿ 50 ಕೋ. ರೂ. ಅನುದಾನವನ್ನು ಮೀಸಲಿರಿಸಲಾಗಿದೆ. ಈ ಅನುದಾನದಲ್ಲಿ ಆದ್ಯತೆಯನುಸಾರ ವಿವಿಧ ಮಾದರಿಯ ವಾಹನಗಳನ್ನು ಖರೀದಿಸಿ ಜಿಲ್ಲೆ ಮತ್ತು ಘಟಕಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಪೊಲೀಸರ ಕರ್ತವ್ಯ ನಿರ್ವಹಣೆ, ತುರ್ತು ಸಂದರ್ಭಗಳ ಬಂದೋಬಸ್ತ್, ಗಸ್ತು, ವಿವಿಐಪಿಗಳ ಎಸ್ಕಾರ್ಟ್‌ ಮೊದಲಾದ ಸಂದರ್ಭಗಳಲ್ಲಿ ಇಲಾಖಾ ಬಳಕೆಗೆ ವಾಹನ ಸೌಕರ್ಯಗಳ ಕೊರತೆ ಇರುವ ವಿಚಾರವನ್ನು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರು ಸದನದ ಗಮನಕ್ಕೆ ತಂದರು.

ವಾಹನ ಸೌಲಭ್ಯದ ಕೊರತೆ ಬಗ್ಗೆ ಸರಕಾರದ ಗಮನಕ್ಕೆ ಬಂದಿದೆ. 2023-24ನೇ ಸಾಲಿನಲ್ಲಿ ಪೊಲೀಸ್‌ ವಾಹನಗಳನ್ನು ಖರೀದಿಸಲು ಸರಕಾರ ಪೊಲೀಸ್‌ ಮೊಬಿಲಿಟಿ ಯೋಜನೆಯಡಿ 100 ಕೋ. ರೂ. ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಅನುದಾನದಲ್ಲಿ ಜೆಮ್‌ ಪೋರ್ಟಲ್‌ ಮುಖಾಂತರ ವಿವಿಧ ಮಾದರಿಯ 1798 ವಾಹನಗಳನ್ನು ಖರೀದಿಸಿದ್ದು, ರಾಜ್ಯದ ನಗರ ಮತ್ತು ಜಿಲ್ಲಾ ಪೊಲೀಸ್‌ ಘಟಕಗಳಿಗೆ ಒದಗಿಸಲಾಗಿದೆ ಎಂದರು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

udupiUdupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.