Udupi: ಹಲವೆಡೆ ಮಳೆ; ಕಾರಿನ ಮೇಲೆ ಬಿತ್ತು ಬೃಹತ್ ಬ್ಯಾನರ್
Team Udayavani, Jul 25, 2024, 12:54 AM IST
ಉಡುಪಿ: ಜಿಲ್ಲೆಯಲ್ಲಿ ಬುಧವಾರ ಹಲವೆಡೆ ಉತ್ತಮ ಮಳೆಯಾಗಿದೆ. ಕುಂದಾಪುರ, ಬೈಂದೂರು, ಉಡುಪಿ, ಕಾರ್ಕಳ, ಹೆಬ್ರಿ, ಕಾಪು, ಬ್ರಹ್ಮಾವರ, ಹೆಬ್ರಿ, ಅಜೆಕಾರು, ಬೈಲೂರು, ಮಾಳ, ಸಿದ್ದಾಪುರ ಸುತ್ತಮುತ್ತಲಿನ ಭಾಗದಲ್ಲಿ ಬಿಟ್ಟುಬಿಟ್ಟು ಸಾಧಾರಣ ಮಳೆಯಾಗಿದೆ.
ಮಧ್ಯಾಹ್ನದ ಬಳಿಕ ರಾತ್ರಿವರೆಗೂ ಹಲವು ಕಡೆಗಳಲ್ಲಿ ಬಿಟ್ಟುಬಿಟ್ಟು ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಮಳೆಗೆ ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಹಲವೆಡೆ 41ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.
ಕುಂದಾಪುರ ತಾಲೂಕಿನಲ್ಲಿ 7 ಮಂದಿ ಕೃಷಿಕರ ಅಡಕೆ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 45.7 ಮಿ. ಮೀ. ಸರಾಸರಿ ಮಳೆಯಾಗಿದೆ.
ಕಾರಿನ ಮೇಲೆ ಬಿತ್ತು ಬೃಹತ್ ಬ್ಯಾನರ್
ಮಣಿಪಾಲದಲ್ಲಿ ಕಾರಿನ ಮೇಲೆ ಬೃಹತ್ ಬ್ಯಾನರ್ ಬಿದ್ದ ಘಟನೆ ಸಂಭ ವಿಸಿದೆ. ಮಣಿಪಾಲ ಡಿಸಿ ಕಚೇರಿ ರಸ್ತೆಯ ಬದಿಯಲ್ಲಿ ಕಾರೊಂದನ್ನು ನಿಲ್ಲಿಸಲಾಗಿತ್ತು. ಸಂಜೆ ಸುರಿದ ಗಾಳಿ ಮಳೆಗೆ ಜಾಹೀರಾತು ಹೋರ್ಡಿಂಗ್ ಅಳವವಡಿಸಲಾಗಿದ್ದು, ಅದರ ಮೇಲೆ ಬ್ಯಾನರ್ ಬಿದ್ದಿದೆ.
ದ.ಕ.: ಮಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮಳೆ ಮುಂದುವರಿದಿದೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ಗಾಳಿ-ಮಳೆಯಾಗಿದ್ದು, ಕೆಲವೆಡೆ ನಷ್ಟ ಉಂಟಾಗಿದೆ. ಮಂಗಳೂರು ನಗರದಲ್ಲಿ ದಿನವಿಡೀ ಬಿಟ್ಟು ಬಿಟ್ಟು ಮಳೆಯಾಗಿದೆ. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜು. 25ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಜು. 26, 27ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.