Valmiki Corp Scam: ಮೂರು ಐಎಎಸ್‌ಗಳಿಗೆ ಇ.ಡಿ. ನೋಟಿಸ್‌?

ಅಕ್ರಮ ಹಣ ವರ್ಗ ಅಧಿಕಾರಿಗಳಿಗೆ ಗೊತ್ತಾಗಲಿಲ್ಲವೇ? ಇ.ಡಿ. ಪ್ರಶ್ನೆ ; ಸದ್ಯದಲ್ಲೇ ವಿಚಾರಣೆ ಆರಂಭ ಸಾಧ್ಯತೆ

Team Udayavani, Jul 25, 2024, 7:10 AM IST

Valmiki Corp Scam: ಮೂರು ಐಎಎಸ್‌ಗಳಿಗೆ ಇ.ಡಿ. ನೋಟಿಸ್‌?

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂ. ಹಗರಣದ ಸಂಬಂಧ ಮೂವರು ಐಎಎಸ್‌ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ಭೀತಿ ಎದುರಾಗಿದ್ದು, ಶೀಘ್ರದಲ್ಲೇ ನೋಟಿಸ್‌ ನೀಡಿ ವಿಚಾರಣೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕ ರಣದ ಇ.ಡಿ. ತನಿಖೆಯು ಬಗೆದಷ್ಟು ಆಳಕ್ಕೆ ಹೋಗುತ್ತಿದೆ. ಇದೀಗ ಹಣಕಾಸು ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಐಎಎಸ್‌ ಅಧಿಕಾರಿಗಳಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲು ಇ.ಡಿ. ಸದ್ದಿಲ್ಲದೆ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.

ಮಾಜಿ ಸಚಿವ ಬಿ. ನಾಗೇಂದ್ರ, ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಹಾಗೂ ನಿಗಮದ ಕೆಲವು ಅಧಿಕಾರಿಗಳು ವಿಚಾರಣೆ ವೇಳೆ ಕೊಟ್ಟ ಮಾಹಿತಿ ಆಧರಿಸಿ ಇ.ಡಿ. ತನಿಖೆ ಮುಂದುವರಿಸಿತ್ತು. ಈ ವೇಳೆ ಹಣಕಾಸು ಇಲಾಖೆಯಿಂದ ವಾಲ್ಮೀಕಿ ನಿಗಮಕ್ಕೆ ದುಡ್ಡು ಒದಗಿಸಲು ಅನುಮತಿ ಕೊಟ್ಟಿರುವುದು ಸೇರಿದಂತೆ ದೊಡ್ಡ ಮೊತ್ತದ ಹಣ ವರ್ಗಾವಣೆ ನಡೆಸಿ ಅಕ್ರಮ ಎಸಗಿರುವುದು ಈ ಮೂವರು ಐಎಎಸ್‌ ಅಧಿಕಾರಿಗಳ ಗಮನಕ್ಕೆ ಬಂದಿರಲಿಲ್ಲವೇ ಎಂಬಿತ್ಯಾದಿ ಅನುಮಾನಗಳು ಹುಟ್ಟಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿಚಾರಣೆ ನಡೆಸಿ ನಿಗಮದ ದೊಡ್ಡ ಮೊತ್ತದ ದುಡ್ಡಿನ ರಹಸ್ಯ ಕೆದಕಲು ಇ.ಡಿ. ಮುಂದಾಗಿದೆ ಎನ್ನಲಾಗಿದೆ.

ಹಗರಣದ ಮಾಹಿತಿ ಕಲೆ ಹಾಕುತ್ತಿರುವ ಸಿಬಿಐ
ಇಡಿ ತನಿಖೆಯ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಹಗರಣದ ಇಂಚಿಂಚೂ ಮಾಹಿತಿ ಹಾಗೂ ದಾಖಲೆ ಕಲೆ ಹಾಕಲು ಪ್ರಾರಂಭಿಸಿದ್ದಾರೆ. ನಿಗಮದಿಂದ ಬ್ಯಾಂಕ್‌ಗೆ ಹಣ ವರ್ಗಾವಣೆ ಮಾಡಲು ಸಹಕರಿಸಿದ ಬ್ಯಾಂಕ್‌ ಸಿಬಂದಿಯ ವಿರುದ್ಧ ಸಿಬಿಐ ಸಾಕ್ಷ್ಯ ಸಂಗ್ರಹಿಸಿದೆ. ಕೆಲವು ಹಿರಿಯ ಪೊಲೀಸ್‌ ಅಧಿಕಾರಿಗಳಿಂದ ಗೌಪ್ಯವಾಗಿ ಸಿಬಿಐ ಮಾಹಿತಿ ಕಲೆ ಹಾಕುತ್ತಿದೆ ಎನ್ನಲಾಗಿದೆ. ಬ್ಯಾಂಕ್‌ ಅವ್ಯವಹಾರದ ತನಿಖೆ ನಡೆಸಿದ ಬಳಿಕ ಹಗರಣದಲ್ಲಿ ಶಾಮೀಲಾದ ಮಾಜಿ ಸಚಿವ ನಾಗೇಂದ್ರ ಸೇರಿ ಇತರ ಆರೋಪಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ. ಹಗರಣದಲ್ಲಿ ಶಾಮೀಲಾದ ಕೆಲವರಿಗೆ ಇಡಿ ಬೆನ್ನಲ್ಲೇ ಸಿಬಿಐ ಭೀತಿಯೂ ಎದುರಾಗಿದೆ.

ಬ್ಯಾಂಕ್‌ ಅವ್ಯವಹಾರದ ಬಗ್ಗೆ ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಡಿಜಿಎಂ ಜೆ. ಮಹೇಶ್‌ ಸಿಬಿಐಗೆ ದೂರು ನೀಡಿದ್ದರು. ಫೆ. 21ರಿಂದ ಮೇ 6ರವರೆಗೆ ಬ್ಯಾಂಕ್‌ನಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಿಬಿಐಗೆ ಒದಗಿಸಿದ್ದರು. ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಎಂಜಿ ರಸ್ತೆ ಶಾಖೆಯ ಮುಖ್ಯ ವ್ಯವಸ್ಥಾಪಕಿಯರಾದ ಶುಚಿಸ್ಮಿತಾ ರಾವುಲ್‌ (ಎ1), ಡಿ.ದೀಪಾ (ಎ2), ಬ್ಯಾಂಕ್‌ನ ಕ್ರೆಡಿಟ್‌ ಆಫೀಸರ್‌ ವಿ.ಕೃಷ್ಣಮೂರ್ತಿ (ಎ3) ವಿರುದ್ಧ ಸಿಬಿಐ ಎಫ್ಐಆರ್‌ ದಾಖಲಿಸಿಕೊಂಡಿತ್ತು.

ಬೆಳವಣಿಗೆಗಳೇನು?
-ವಾಲ್ಮೀಕಿ ನಿಗಮ ಅಧ್ಯಕ್ಷ ದದ್ದಲ್‌,ಮಾಜಿ ಸಚಿವ ನಾಗೇಂದ್ರ ವಿಚಾರಣೆ ವೇಳೆ ಹಲವು ಮಾಹಿತಿ ಬಹಿರಂಗ?
-ಹಣಕಾಸು, ಸಮಾಜ ಕಲ್ಯಾಣ ಇಲಾಖೆಯ ಐಎಎಸ್‌ ಅಧಿಕಾರಿಗಳಿಗೆ ನೋಟಿಸ್‌ ಸಾಧ್ಯತೆ
-ಅಧಿಕಾರಿಗಳ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲು ಇ.ಡಿ.ಯಿಂದ ಸದ್ದಿಲ್ಲದೇ ಸಿದ್ಧತೆ

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.