Karnataka: ರಾಜ್ಯದಲ್ಲಿ ಮತ್ತಷ್ಟು ಭ್ರೂಣಹತ್ಯೆ ಪ್ರಕರಣ ಆತಂಕಕಾರಿ


Team Udayavani, Jul 25, 2024, 6:05 AM IST

fetosd

ಕೇಂದ್ರ ಸರಕಾರದ 10ಕ್ಕೂ ಹೆಚ್ಚು ಅಧಿಕಾರಿಗಳ ವಿಶೇಷ ತಂಡ (ಪಿಸಿ ಮತ್ತು ಪಿಎನ್‌ಡಿಟಿ)ವೊಂದು ಬುಧವಾರ ಬಾಗಲಕೋಟೆ ಜಿಲ್ಲೆಗೆ ಆಗಮಿಸಿ, ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ವಿವಿಧಡೆ ಶೋಧ ನಡೆಸಿದೆ. ಈ ವೇಳೆ, ಸರಕಾರಿ ವೈದ್ಯರೊಬ್ಬರು ಭ್ರೂಣಹತ್ಯೆ ಕಾನೂನು ಬಾಹಿರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವು ಆತಂಕ ಸೃಷ್ಟಿಸಿದೆ. ಒಂದು ವೇಳೆ ಈ ಆರೋಪ ನಿಜವಾದರೆ, ಲಿಂಗ ಭ್ರೂಣ ಪತ್ತೆ, ಹತ್ಯೆಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕಿದ್ದ ಸರಕಾರಿ ವೈದ್ಯರೇ ಕಾನೂನು ಮುರಿಯುತ್ತಿರುವುದು “ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ’! ಕೇಂದ್ರ ಸರಕಾರದ “ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಡೆ ಕಾಯ್ದೆ’ (ಪಿಸಿ ಮತ್ತು ಪಿಎನ್‌ಡಿಟಿ) ಅನುಸಾರ ಕೇಂದ್ರದ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಕೇಂದ್ರ ತಂಡ ನಡೆಸಿದ ದಾಳಿ ವೇಳೆ ಬಾದಾಮಿ ಸರಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ವೈದ್ಯರಾಗಿರುವ ಡಾ| ಕವಿತಾ ಶಿವನಾಯ್ಕರ ಒಡೆತನದ ರೇಣುಕಾ ಆಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆ ಮಾಡುವ ಸಾಮಗ್ರಿಗಳು ಪತ್ತೆಯಾಗಿವೆ. ಆಸ್ಪತ್ರೆಯಲ್ಲಿ ಹಲವು ಭ್ರೂಣಲಿಂಗ ಪತ್ತೆ ಮಾಡಿರುವುದು ಖಚಿತಪಟ್ಟಿದ್ದು, ಅವರೂ ಸೇರಿದಂತೆ ಆಸ್ಪತ್ರೆ ಒಡೆತನ ಹೊಂದಿರುವ ಮೂವರ ವಿರುದ್ಧ ಈಗ ಆರೋಗ್ಯ ಇಲಾಖೆ ದೂರು ನೀಡಲು ಸಜ್ಜಾಗಿದೆ.

ಕಳೆದ ವರ್ಷವೂ ಕರ್ನಾಟಕದಲ್ಲಿ ಭ್ರೂಣ ಹತ್ಯೆಗಳ ಪ್ರಕರಣಗಳು ಭಾರೀ ಸದ್ದು ಮಾಡಿದ್ದವು. ಮಂಡ್ಯದಲ್ಲಿ ಇಂಥ ಬೃಹತ್‌ ಜಾಲವೊಂದು ಬಯಲಾಗಿತ್ತು. ಆದರೆ, ಈಗ ವರದಿಯಾಗಿರುವ ಬಾಗಲಕೋಟೆ ಜಿಲ್ಲೆಯ ಪ್ರಕರಣವು ಇನ್ನೂ ಗಂಭೀರವಾಗಿದೆ. ಯಾಕೆಂದರೆ, ಸರಕಾರಿ ವೈದ್ಯರೊಬ್ಬರು ಭ್ರೂಣ ಹತ್ಯೆಯಂಥ ಹೀನ ಕೃತ್ಯವನ್ನು ನಡೆಸುತ್ತಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಭಾರತದಲ್ಲಿ 1990ರ ದಶಕದಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯ ಪ್ರವೃತ್ತಿಯು ಹೆಚ್ಚಾಯಿತು.

ಅಲ್ಟ್ರಾ ಸ್ಕ್ಯಾನಿಂಗ್‌ ತಂತ್ರಜ್ಞಾನ ವ್ಯವಸ್ಥೆಯ ದುರ್ಬಳಕೆಯೇ ಇದಕ್ಕೆ ಮೂಲ ಕಾರಣ. ಮೊದಲು ನಗರಗಳಲ್ಲಿ ಶುರುವಾದ ಈ ಪ್ರವೃತ್ತಿ ನಿಧಾನವಾಗಿ ಇಡೀ ದೇಶವನ್ನು ಆವರಿಸಿಕೊಂಡಿತು. ಅಧಿಕೃತ ಅಂಕಿ ಸಂಖ್ಯೆಗಳ ಪ್ರಕಾರ, ವರ್ಷಕ್ಕೆ 5 ಲಕ್ಷ ಭ್ರೂಣ ಹತ್ಯೆ ನಡೆಯುತ್ತಿದೆ. ಆದರೆ, ವಾಸ್ತವದಲ್ಲಿ ಈ ಪ್ರಮಾಣ ಇನ್ನೂ ಹೆಚ್ಚಿರುವ ಸಾಧ್ಯತೆಗಳಿವೆ. ಇದರಿಂದಾಗಿ ಲಿಂಗಾನುಪಾತ ಕುಸಿತ ಕಾಣುತ್ತಿದೆ. 2011ರ ಜನಗಣತಿಯ ಪ್ರಕಾರ, 1000 ಗಂಡು ಮಕ್ಕಳಿಗೆ ಕೇವಲ 914 ಹೆಣ್ಣು ಮಕ್ಕಳಿದ್ದಾರೆ.

ಇನ್ನು ಕರ್ನಾಟಕದಲ್ಲಿ ಈ ಪ್ರಮಾಣ 943 ಇದೆ. ಕೆಲವು ರಾಜ್ಯಗಳಲ್ಲಂತೂ ಹೆಣ್ಣು ಮಕ್ಕಳ ಸಂಖ್ಯೆ 900ಕ್ಕಿಂತಲೂ ಕೆಳಗಿದೆ. ಇದರಿಂದ ಸಾಮಾಜಿಕ ಅಸಮತೋಲನ ಸೃಷ್ಟಿಯಾಗಿದೆ. ಲಿಂಗ ಭ್ರೂಣ ಪತ್ತೆ ಮತ್ತು ಭ್ರೂಣ ಹತ್ಯೆ ತಡೆಗೆ ಕರ್ನಾಟಕದಲ್ಲೂ ಕಠಿನ ಕಾನೂನುಗಳು ಜಾರಿಯಲ್ಲಿವೆ. ಆದರೆ ಕಾನೂನು ಅನುಷ್ಠಾನದ ಕೊರತೆಯಿಂದಾಗಿ ಭ್ರೂಣ ಹತ್ಯೆ ಪ್ರಕರಣಗಳು ಆಗಾಗ ವರದಿಯಾಗುತ್ತಲೇ ಇರುತ್ತವೆ. ಕಾಯ್ದೆಗೆ ತಿದ್ದುಪಡಿ ತಂದು ಹೆಚ್ಚಿನ ಶಿಕ್ಷೆ, ದಂಡ ವಿಧಿಸುವ ಬಗ್ಗೆ ಸರ್ಕಾರ ಮುಂದಾಗಬೇಕು.

ಭ್ರೂಣ ಹತ್ಯೆಯನ್ನು ಕೇವಲ ಕಾನೂನು ಬಲದಿಂದ ಮಾತ್ರ ತಡೆಯಲು ಸಾಧ್ಯವಿಲ್ಲ. ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲೂ ಸರಕಾರ ಇನ್ನೂ ಹೆಚ್ಚಿನ ಮುತುವರ್ಜಿಯಿಂದ ಕೆಲಸ ಮಾಡಬೇಕಿದೆ. ನಮ್ಮ ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ, ಹೆಚ್ಚಿನ ತಂದೆ- ತಾಯಿಗಳು ಹೆಣ್ಣು ಎಂದರೆ “ಭಾರ’ ಎಂದೇ ಭಾವಿಸುತ್ತಾರೆ. ಆದರೆ, ಹೆಣ್ಣು ಮಗು ಭಾರವಲ್ಲ, ಕುಟುಂಬದ “ಆಧಾರ’ ಎಂಬ ಮನೋಭಾವನೆಯನ್ನು ಸರಕಾರ ಬೆಳೆಸುವುದು ಈ ಕಾಲದ ಅಗತ್ಯವಾಗಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.