Shimoga; ಮುನ್ನೆಚ್ಚರಿಕೆ ಇಲ್ಲದೆ ಧರೆ ಕಡಿದು ರಸ್ತೆ ಕಾಮಗಾರಿ; ಸಂಚಾರ ಅಸ್ತವ್ಯಸ್ತ
ಶಿಮುಲ್ ಎದುರು ಕುಸಿದ ರಸ್ತೆ, ಸಂಚಾರ ಅಧ್ವಾನ
Team Udayavani, Jul 25, 2024, 11:22 AM IST
ಶಿವಮೊಗ್ಗ: ಯಾವುದೇ ಮುನ್ನೆಚ್ಚರಿಕೆ ಪಾಲಿಸದೆ ಧರೆ ಕಡಿದು ಚತುಷ್ಪಥ ರಸ್ತೆ ಕಾಮಗಾರಿ ಮಾಡುತ್ತಿರುವ ಪರಿಣಾಮ ಸರ್ವಿಸ್ ರಸ್ತೆ ಕುಸಿದಿದ್ದು ಸಂಚಾರ ದುಸ್ತರವಾಗಿದೆ.
ಶಿವಮೊಗ್ಗ – ಬೆಂಗಳೂರು ಚತುಷ್ಪಥ ಹೆದ್ದಾರಿ ಕಾಮಗಾರಿ ಕುಂಟುತ್ತಾ ಸಾಗಿದ್ದು ಶಿವಮೊಗ್ಗ ಭದ್ರಾವತಿ ನಡುವಿನ ಶಿವಮೊಗ್ಗ ಹಾಲು ಒಕ್ಕೂಟ ಎದುರು ರಸ್ತೆಯನ್ನು ಸಮತಟ್ಟು ಮಾಡಲಾಗುತ್ತಿದ್ದು ತಾತ್ಕಾಲಿಕವಾಗಿ ಸರ್ವಿಸ್ ರಸ್ತೆಯಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಧರೆ ಕುಸಿತವಾಗಿದೆ. ಇಲ್ಲಿ ಎರಡು ಲಾರಿಗಳು ಹೋಗಿಬರುವಷ್ಟೇ ಸ್ಥಳವಕಾಶ ಇದ್ದು ಕೈಗಾರಿಕಾ ಪ್ರದೇಶ ಇರುವುದರಿಂದ ಪ್ರತಿ ದಿನ ಸಾವಿರಾರು ಭಾರೀ ವಾಹನಗಳು ಸಂಚರಿಸುತ್ತವೆ. ಮೊದಲೇ ಕಿರಿದಾಗಿ ಸಂಚಾರಕ್ಕೆ ದುಸ್ತರವಾಗಿದ್ದ ರಸ್ತೆ ಕುಸಿದಿರುವುದು ಮತ್ತಷ್ಟು ಸಮಸ್ಯೆ ತಂದಿಟ್ಟಿದೆ.
ಶಿವಮೊಗ್ಗದಿಂದ ಬೆಂಗಳೂರು, ಮೈಸೂರು ಹೋಗುವ ಎಲ್ಲ ವಾಹನಗಳು ಇಲ್ಲಿಂದಲೇ ಹೋಗಬೇಕು. ಕೆಳಗಿನ ರಸ್ತೆ 20 ಅಡಿಗೂ ಅಧಿಕ ಆಳವಿದ್ದು ಯಮಾರಿದರೆ ಪ್ರಾಣಾಪಾಯವಾಗುವುದು ನಿಶ್ಚಿತ. ಮಳೆಗಾಲ ಹಿನ್ನೆಲೆ ರಸ್ತೆ ಕಾಮಗಾರಿ ಸ್ಥಗಿತಗೊಳಿಸಲಾಗಿದ್ದು ಕಾರ್ಮಿಕರೆಲ್ಲರೂ ರಜೆಯಲ್ಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಕ್ಷಣ ಸರಿಪಡಿಸಿದಿದ್ದರೆ ಸಮಸ್ಯೆ ಉಂಟಾಗುವುದು ನಿಶ್ಚಿತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.