Session; ಗದ್ದಲದ ನಡುವೆ 5 ಮಸೂದೆ ಅಂಗೀಕಾರ! ಕೆರಳಿದ ವಿಪಕ್ಷಗಳಿಂದ ಮುಂದುವರಿದ ಪ್ರತಿಭಟನೆ

ಮುಡಾ ವಿರುದ್ಧದ ಚರ್ಚೆಗೆ ಅವಕಾಶ ನೀಡದ ಸಭಾಪತಿ ಬಸವರಾಜ ಹೊರಟ್ಟಿ

Team Udayavani, Jul 26, 2024, 12:06 AM IST

ಗದ್ದಲದ ನಡುವೆ 5 ಮಸೂದೆ ಅಂಗೀಕಾರ! ಕೆರಳಿದ ವಿಪಕ್ಷಗಳಿಂದ ಮುಂದುವರಿದ ಪ್ರತಿಭಟನೆ

ಬೆಂಗಳೂರು: ಅಹೋರಾತ್ರಿ ಧರಣಿ ಅನಂತರವೂ ಮುಡಾ ನಿವೇಶನ ಹಂಚಿಕೆ ಹಗರಣ ಕುರಿತ ಚರ್ಚೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ತಳ್ಳಿಹಾಕಿದ್ದರಿಂದ ಗುರುವಾರ ಕೂಡ ಮೇಲ್ಮನೆಯಲ್ಲಿ ವಿಪಕ್ಷಗಳ ಹೋರಾಟ ಮುಂದುವರಿಯಿತು. ಆ ಗದ್ದಲದ ನಡುವೆಯೇ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಬಹುತೇಕ ಎಲ್ಲ ಮಸೂದೆಗಳಿಗೆ ಅನುಮೋದನೆ ನೀಡಲಾಯಿತು.

ಕಲಾಪ ಆರಂಭವಾಗುತ್ತಿದ್ದಂತೆ ಮುಡಾ ಹಗರಣ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಬಾವಿಗಿಳಿದು ಧರಣಿ ನಡೆಸಿದ ವಿಪಕ್ಷಗಳ ಸದಸ್ಯರು, ಈಗಾಗಲೇ ಅಹೋರಾತ್ರಿ ಧರಣಿ ನಡೆಸಿದ್ದೇವೆ. ಒಂದು ದಿನದ ಹಿಂದೆಯೇ ಮರುಪರಿಶೀಲನೆ ಅರ್ಜಿ ಸಲ್ಲಿಸಲಾಗಿತ್ತು. ಅದರ ಪರಿಶೀಲನೆಗೆ ಸಾಕಷ್ಟು ಸಮಯಾವಕಾಶವನ್ನೂ ತೆಗೆದುಕೊಂಡಿದ್ದೀರಿ. ಈಗಲಾದರೂ ಅವಕಾಶ ಕಲ್ಪಿಸಬೇಕು ಎಂದು ಸಭಾಪತಿಗಳಿಗೆ ಮನವಿ ಮಾಡಿದರು.

ಪ್ರತಿಕ್ರಿಯಿಸಿದ ಸಭಾಪತಿಗಳು, ನಿಯಮ 62ರ ಅಡಿ ನಿಲುವಳಿ ಸೂಚನೆ ಮಂಡನೆಗೆ ವಿಪಕ್ಷ ನಾಯಕರು ಈಗಾಗಲೇ ನಿರಾಕರಿಸಿದ ಪ್ರಸ್ತಾವವನ್ನು ಮರುಪರಿಶೀಲಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ವಿಚಾರದ ಬಗ್ಗೆ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಆಯೋಗ ನೇಮಕ ಮಾಡಿದ್ದು ತನಿಖೆ ನಡೆಯುತ್ತಿದೆ. ತನಿಖೆ ನಡೆಸಿ ವರದಿ ನೀಡುವಂತೆ ಸರಕಾರ ಆಯೋಗಕ್ಕೆ ಹೇಳಿದೆ. ಹಾಗಾಗಿ ಮರುಪರಿಶೀಲನೆ ಅರ್ಜಿಯನ್ನು ನಿರಾಕರಿಸಲಾಗಿದೆ ಎಂದು ಪ್ರಕಟಿಸಿದರು. ಇದರ ಬೆನ್ನಲ್ಲೇ ಆಡಳಿತ ಪಕ್ಷದವರು ಮೇಜು ಕುಟ್ಟಿ ಸ್ವಾಗತಿಸಿದರು.

ನಿರ್ಣಯವನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು 40 ವರ್ಷ ಸಚಿವನಾಗಿ ಕೆಲಸ ಮಾಡಿದ್ದೇನೆ. ಒಂದೇ ಒಂದು ಕಪ್ಪುಚುಕ್ಕೆ ಇಲ್ಲ. ಇದರಿಂದ ವಿಪಕ್ಷಗಳಿಗೆ ಹೊಟ್ಟೆಕಿಚ್ಚು ಶುರುವಾಗಿದೆ. ಹಾಗಾಗಿ ನನಗೆ ಮಸಿ ಬಳಿಯಬೇಕು ಎಂಬ ದುರುದ್ದೇಶದಿಂದ ಹಗರಣವೇ ಇಲ್ಲದಿದ್ದರೂ ಹಗರಣದಂತೆ ಬಿಂಬಿಸಲು ಹೊರಟಿದ್ದಾರೆ. ಸಭಾಪತಿಗಳು ಯಾವುದೇ ಕಾರಣಕ್ಕೂ ನಿರ್ಣಯ ದಿಂದ ಹಿಂದೆ ಸರಿಯಬಾರದು ಎಂದರು.

ಮತ್ತಷ್ಟು ಕೆರಳಿದ ವಿಪಕ್ಷಗಳ ಸದಸ್ಯರು, ಮುಡಾ ನಿವೇಶನಗಳನ್ನು ನುಂಗಿ ನೀರುಕುಡಿದ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ… ಸಮಾಜವಾದಿ ಅಂತಾರೆ ಬಡವರ ಸೈಟ್‌ಗಳನ್ನು ನುಂಗುತ್ತಾರೆ…’ ಅಂತ ಘೋಷಣೆ ಕೂಗಿದರು. ಮತ್ತೂಂದೆಡೆ ಬಹುದೊಡ್ಡ ಹಗರಣ ಇದಾಗಿದ್ದರಿಂದ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಸಭಾಪತಿಗಳನ್ನೂ ಒತ್ತಾಯಿಸಿದರು.

ಕೇವಲ ಅರ್ಧಗಂಟೆಯಲ್ಲಿ ಅಂಗೀಕಾರ
ಕೇವಲ ಅರ್ಧಗಂಟೆಯಲ್ಲಿ 5 ಮಸೂದೆಗಳು ಮತ್ತು 2 ನಿರ್ಣಯಗಳ ಮಂಡನೆ ಜತೆಗೆ ಅಂಗೀಕಾರಗೊಂಡವು. ಅಷ್ಟೇ ಅಲ್ಲ, ವರದಿ ಮತ್ತು ಕಾಗದಪತ್ರಗಳನ್ನು ಇದೇ ಅವಧಿಯಲ್ಲಿ ಮಂಡಿಸಲಾಯಿತು.

ಈ ಪೈಕಿ ಕರ್ನಾಟಕ ಧನವಿನಿಯೋಗ (ಸಂಖ್ಯೆ-4) ಮಸೂದೆ -2024, ಕರ್ನಾಟಕ ನೀರಾವರಿ (ತಿದ್ದುಪಡಿ) ಮಸೂದೆ, ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ಎರಡನೇ ತಿದ್ದುಪಡಿ) ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ದಿ) ಮಸೂದೆ, ಸರಕು-ಸೇವೆಗಳ ಮಸೂದೆಗಳು ಚರ್ಚೆ ಇಲ್ಲದೆ ಅಂಗೀಕಾರಗೊಂಡವು.

2026ರಲ್ಲಿನ ಅಥವಾ ಅದರ ಅನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆ ನಡೆಸಬಾರದು. 1971ರ ಜನಗಣತಿ ಆಧರಿಸಿ ನಿರ್ಧರಿಸಬೇಕು ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸುವ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು. ಜತೆಗೆ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯ ಉಂಟುಮಾಡಲಿದೆ. ಹಾಗಾಗಿ ಈ ನೀತಿಯನ್ನು ಅನುಷ್ಠಾನಗೊಳಿಸಬಾರದು ಎಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನೂ ಕೈಗೊಳ್ಳಲಾಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.