YSRCP ಜಗನ್ ಕೊಲಂಬಿಯಾದ ಮಾದಕವಸ್ತು ದೊರೆ ಇದ್ದಂತೆ: ಆಂಧ್ರ ಸಿಎಂ
Team Udayavani, Jul 26, 2024, 12:12 AM IST
ಹೈದರಾಬಾದ್: ಆಂಧ್ರದಲ್ಲಿ ನಡೆಯುತ್ತಿರುವ ಹಿಂಸಾಚಾರ ಫೋಟೋಗಳನ್ನು ಮಾಜಿ ಸಿಎಂ ಜಗನ್ಮೋಹನ್ ರೆಡ್ಡಿ ದಿಲ್ಲಿಯಲ್ಲಿ ಪ್ರದರ್ಶಿಸಿ, ಪ್ರತಿಭಟಿಸಿ ದ್ದರು. ಇದಕ್ಕೆ ತಿರುಗೇಟು ನೀಡಿರುವ ಆಂಧ್ರ ಸಿಎಂ ನಾಯ್ಡು, ಕೊಲಂಬಿಯಾದ ಡ್ರಗ್ ದೊರೆ ಪ್ಯಾಬ್ಲೋ ಎಸ್ಕೋ ಬಾರ್ಗೆ ಜಗನ್ರನ್ನು ಹೋಲಿಸಿದ್ದಾರೆ! ಮೊದಲು ಮಾದಕ ವಸ್ತುಗಳ ಉಗ್ರನಾಗಿದ್ದ ಪ್ಯಾಬ್ಲೋ ರಾಜಕಾರಣಿಯಾದ. ಬಳಿಕ ಮಾದಕವಸ್ತು ಮಾರಾಟ ಮಾಡಲಾರಂಭಿಸಿದ. 5 ವರ್ಷದಲ್ಲಿ ಆಂಧ್ರ ಮಾದಕ ವಸ್ತುಗಳ ರಾಜಧಾನಿಯಾಗಿದೆ. ಇದರಲ್ಲಿ ಜಗನ್ ಪಾತ್ರ ದೊಡ್ಡದಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿ ಥಳಿತ ಕೇಸ್ ಜಟಾಪಟಿ
ಅಮರಾವತಿ: ಆಂಧ್ರಪ್ರದೇಶದ ಖಾಸಗಿ ಕಾಲೇಜಿನ ಹಾಸ್ಟೆಲ್ನಲ್ಲಿ ಜೂನಿಯರ್ ವಿದ್ಯಾರ್ಥಿಗಳಿಗೆ ದೊಣ್ಣೆಯಿಂದ ಹೊಡೆದಿರುವ ನರಸರಾವ್ಪೇಟೆಯಲ್ಲಿ ನಡೆದಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಒಬ್ಬನ್ನು ಬಂಧಿಸಲಾಗಿದೆ. ಇನ್ನೂ ಐವರಿಗಾಗಿ ಶೋಧ ನಡೆದಿದೆ. ಥಳಿತ ಪ್ರಕರಣ ಫೆಬ್ರವರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ಸಿಸಿ ಸೋಗಿನಲ್ಲಿ ಸೀನಿಯರ್ಸ್ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಒಳಗೆ ಕರೆದುಕೊಂಡು ಹೋಗಿ ಥಳಿಸಿದ್ದಾರೆ ಎನ್ನಲಾಗಿದೆ. ಈ ಘಟನೆ ಈಗ ರಾಜಕೀಯ ತಿರುವು ಪಡೆದಿದ್ದು, ಆಂಧ್ರದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿಲ್ಲ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ ಎಂದು ವಿಪಕ್ಷ ವೈಆರ್ಸಿಪಿ ಟೀಕಿಸಿದೆ. ಅದಕ್ಕೆ ತಿರುಗೇಟು ನೀಡಿದ ಗೃಹ ಸಚಿವೆ ಅನಿತಾ ವಂಗ ಲಪುಡಿ “ಜಗನ್ರೆಡ್ಡಿ ಆಡಳಿತದಲ್ಲಿ ಈ ಘಟನೆ ನಡೆದಿದೆ. ನಮ್ಮ ಸರಕಾರ ಬಂದದ್ದೇ ಜೂನ್ನಲ್ಲಿ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.