Kargil Vijay Diwas: ಪಾಕಿಸ್ತಾನ ಇತಿಹಾಸದಿಂದ ಯಾವ ಪಾಠವನ್ನೂ ಕಲಿತಿಲ್ಲ: ಪ್ರಧಾನಿ ಮೋದಿ

ದೇಶಕ್ಕಾಗಿ ಹುತಾತ್ಮರಾದ ಸೈನಿಕರ ತ್ಯಾಗ ಅಮರ.

Team Udayavani, Jul 26, 2024, 1:21 PM IST

Kargil Vijay Diwas: ಪಾಕಿಸ್ತಾನ ಇತಿಹಾಸದಿಂದ ಯಾವ ಪಾಠವನ್ನೂ ಕಲಿತಿಲ್ಲ: ಪ್ರಧಾನಿ ಮೋದಿ

ಕಾರ್ಗಿಲ್:‌ ಹಿಂದಿನ ಇತಿಹಾಸದಿಂದ ಪಾಕಿಸ್ತಾನ(Pakistan) ಯಾವುದೇ ಪಾಠ ಕಲಿತಿಲ್ಲ, ಆ ದೇಶ ಇನ್ನೂ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದನ್ನು ಮುಂದುವರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ(PM Modi) ಶುಕ್ರವಾರ (ಜುಲೈ 26) 1999ರ ಕಾರ್ಗಿಲ್‌(Kargil War) ಯುದ್ದದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಿ ಮಾತನಾಡಿದರು.

ಪಾಕಿಸ್ತಾನ ಯಾವಾಗೆಲ್ಲಾ ದುಸ್ಸಾಹಸ ನಡೆಸಿತ್ತೋ ಆವಾಗ ಸೋಲನ್ನೇ ಅನುಭವಿಸಿದೆ. ಆದರೂ ಕೂಡಾ ಪಾಕ್‌ ಇತಿಹಾಸದಿಂದ ಪಾಠ ಕಲಿತಿಲ್ಲ ಎಂದು ಕಾರ್ಗಿಲ್‌ ಯುದ್ಧ ಸ್ಮಾರಕದಲ್ಲಿ(Kargil War Memorial) ಪ್ರಧಾನಿ ಮೋದಿ ಹೇಳಿದರು.

ದೇಶಕ್ಕಾಗಿ ಹುತಾತ್ಮರಾದ ಸೈನಿಕರ ತ್ಯಾಗ ಅಮರ. ಅಷ್ಟೇ ಅಲ್ಲ ಕಾರ್ಗಿಲ್‌ ವಿಜಯ್‌ ದಿವಸದಂದು ಸದಾ ಸ್ಮರಿಸಿಕೊಳ್ಳುವುದಾಗಿ ತಿಳಿಸಿದರು.

ಕಾರ್ಗಿಲ್‌(Kargil)ನ ಲಡಾಖ್‌ ನ ಅತೀ ಎತ್ತರದ ಪ್ರದೇಶದಲ್ಲಿ ಸುಮಾರು 3ತಿಂಗಳ ಕಾಲ ಯುದ್ಧ ನಡೆದ ನಂತರ 1999ರ ಜುಲೈ 26ರಂದು ಭಾರತೀಯ ಸೇನೆ(Indian Army) ಪಾಕ್‌ ವಿರುದ್ಧದ ಆಪರೇಶನ್‌ ವಿಜಯ್‌ ನಲ್ಲಿ ಗೆಲುವು ಸಾಧಿಸಿರುವುದಾಗಿ ಘೋಷಿಸಿತ್ತು.

ಕಾರ್ಗಿಲ್‌ ಯುದ್ಧದಲ್ಲಿ ಪಾಕ್‌ ವಿರುದ್ಧ ಜಯ ಸಾಧಿಸಿರುವ ದಿನವನ್ನು ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್‌ ವಿಜಯ್‌ ದಿವಸ್‌ ಎಂದು ಆಚರಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ ವಿಜಯ್‌ ದಿವಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ಲಡಾಖ್‌ ನ ದ್ರಾಸ್‌ ನಲ್ಲಿ ಹಿಮಾಚಲ್‌ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಲಡಾಖ್‌ ನಡುವಿನ ಸಂಪರ್ಕಕ್ಕಾಗಿ ಸುರಂಗ ಮಾರ್ಗ ಕಾಮಗಾರಿಗೆ ಚಾಲನೆ ನೀಡಿದ್ದರು.

ವಿಶ್ವದ ಎತ್ತರದ ಸುರಂಗಕ್ಕೆ ಚಾಲನೆ
ಬಂಡೆ ಸ್ಫೋಟಿಸುವ ಮೂಲಕ ಹಿಮಾಚಲ ಪ್ರದೇಶ ಹಾಗೂ ಲಡಾಖ್‌ ನಡುವೆ ಎಲ್ಲ ಋತುವಿನಲ್ಲೂ ಸಂಪರ್ಕ ಕಲ್ಪಿಸುವ ಸುರಂಗಕ್ಕೆ ಮೋದಿ ಚಾಲನೆ ನೀಡಿದ್ದಾರೆ. ಲಡಾಖ್‌ನ ದ್ರಾಸ್‌ನಲ್ಲಿ ಕಾರ್ಗಿಲ್‌ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಿ ಇಲ್ಲಿಂದಲೇ ವರ್ಚುವಲ್‌ ಆಗಿ ಶಿನ್‌ ಕುನ್‌ ಲಾ ಸುರಂಗ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಈ ಸುರಂಗ 4.1 ಕಿ.ಮೀ ಉದ್ದವಿರಲಿದ್ದು, ನಿಮು ಪಡುಂ ದರ್ಚಾ ಹೆದ್ದಾರಿಯಲ್ಲಿ 15,800 ಅಡಿ ಎತ್ತರದಲ್ಲಿ ನಿರ್ಮಾಣವಾಗಲಿದೆ. ನಿರ್ಮಾಣದ ಬಳಿಕ ವಿಶ್ವದ ಅತೀ ಎತ್ತರದ ಸುರಂಗ ಎನಿಸಲಿದೆ. ಪ್ರಸ್ತುತ ಚೀನದ ಮಿ ಲಾ ಸುರಂಗವು 15,590 ಅಡಿ ಎತ್ತರ ಹೊಂದಿದ್ದು ವಿಶ್ವದ ಎತ್ತರದ ಸುರಂಗ ಎನಿಸಿಕೊಂಡಿದೆ. ಟ್ವಿನ್‌-ಟ್ಯೂಬ್‌ ದ್ವಿಪಥ ಸುರಂಗವಾಗಿರುವ ಶಿನ್‌ ಕುನ್‌ ಲಾದ ಮೇಲೆ ಫಿರಂಗಿ ಮತ್ತು ಕ್ಷಿಪಣಿ ದಾಳಿಯಾದರೂ ಯಾವುದೇ ಹಾನಿ ಆಗದು ಎಂಬುದು ವಿಶೇಷ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.