Kundapura: ಮಕ್ಕಳನ್ನು ಹೊತ್ಕೊಂಡೇ ಹೊಳೆ ದಾಟಿಸಬೇಕು!ಅಮಾಸೆಬೈಲಿನ ಕುಡಿಸಾಲು ಪರಿಸರದ ಸಮಸ್ಯೆ

ಇಲ್ಲಿ ಸೇತುವೆಯೂ ಇಲ್ಲ; ಸಂಕವೂ ಇಲ್ಲ

Team Udayavani, Jul 27, 2024, 12:14 PM IST

Screenshot (3) copy

ಕುಂದಾಪುರ: ಅಮಾಸೆಬೈಲು ಗ್ರಾಮದ ಬಳ್ಮನೆ ಸಮೀಪದ ಕುಡಿಸಾಲು ಪರಿಸರದ ಮಕ್ಕಳು ಜೋರು ಮಳೆ ಬಂದ ದಿನ ಶಾಲೆಗೆ ರಜೆ ಹಾಕಲೇಬೇಕು. ಇಲ್ಲಿ ಮಳೆ ಕಡಿಮೆ ಇದ್ದರೂ ಹೊಳೆ ದಾಟಲು ಸೇತುವೆಯಿಲ್ಲ. ಪೋಷಕರೇ ಅವರನ್ನು ಎತ್ತಿಕೊಂಡು ಹೊಳೆ ದಾಟಿಸಿ ಕಳುಹಿಸಬೇಕಾದ ಪರಿಸ್ಥಿತಿಯಿದೆ. ಕೆಲವೊಮ್ಮೆ ನೀರಿನ ರಭಸ ಎಷ್ಟಿರುತ್ತದೆ ಎಂದರೆ ಹಿರಿಯರಿಗೂ ಈ ಮಕ್ಕಳನ್ನು ಹೊತ್ತುಕೊಂಡು ದಾಟುವುದು ಕಷ್ಟ. ಆವತ್ತು ಶಾಲೆಗೆ ರಜೆ!

ಅಮಾಸೆಬೈಲು ಗ್ರಾ.ಪಂ.ನ ಎರಡನೇ ವಾರ್ಡಿನ ಬಳ್ಮನೆ ಸಮೀಪದ ಕುಡಿಸಾಲು – ಹಂದಿಮನೆ ಭಾಗದಲ್ಲಿ 6 ಮನೆಗಳಿವೆ. ಇವರಿಗೆ ಶಾಲೆಗೆ ಹೋಗಬೇಕಾದರೆ 4 ಕಿ.ಮೀ. ದೂರದ ಜಡ್ಡಿನಗದ್ದೆಗೆ ಬರಬೇಕು. 2 ಕಿ.ಮೀ. ದೂರದ ಬಳ್ಮನೆಯಲ್ಲಿ ಕಿ.ಪ್ರಾ. ದವರೆಗೆ ಮಾತ್ರವಿದೆ. ಎರಡೂ ಕಡೆಗೂ ಈ ಹೊಳೆಯನ್ನೇ ದಾಟಿ ಬರಬೇಕು. ಹೊಳೆಗೆ ಸೇತುವೆಯಿಲ್ಲ. ಮರದ ಪಾಲ ಹಾಕಿದರೆ ಭಾರೀ ಮಳೆಗೆ ಕೊಚ್ಚಿ ಕೊಂಡು ಹೋಗುತ್ತಿದೆ. ಮಳೆಗಾಲವಿಡೀ ಮಕ್ಕಳನ್ನು ಮನೆಯವರೇ ಎತ್ತಿಕೊಂಡು ಬಂದು, ಹೊಳೆ ದಾಟಿಸಬೇಕಾದ ಸ್ಥಿತಿಯಿದೆ. ದಶಕಗಳಿಗೂ ಹೆಚ್ಚು ಕಾಲದಿಂದ ಇಲ್ಲಿ ಸೇತುವೆಗಾಗಿ ಬೇಡಿಕೆ ಇಡುತ್ತಿದ್ದರೂ, ಈಡೇರುವ ಲಕ್ಷಣ ಮಾತ್ರ ಕಾಣುತ್ತಿಲ್ಲ. ಹೀಗಾಗಿ ಪೀಳಿಗೆ ಯಿಂದ ಪೀಳಿಗೆ ಮಕ್ಕಳನ್ನು ಹೊತ್ತುಕೊಂಡು ದಾಟಿಸುವುದನ್ನು ಅಭ್ಯಾಸ ಮಾಡಿಕೊಂಡಂತಿದೆ.

14 ದಿನ ಶಾಲೆಗೆ ಹೋಗಿಲ್ಲ…

ಭಾರೀ ಮಳೆಯಿಂದಾಗಿ ಕಳೆದ 25 ದಿನಗಳಲ್ಲಿ ನಮ್ಮ ಇಲ್ಲಿನ ಮಕ್ಕಳು 14 ದಿನ ಶಾಲೆಗೆ ಹೋಗಲು ಸಾಧ್ಯವಾಗಿಲ್ಲ. ಹೊಳೆ ತುಂಬಿ ಹರಿಯುವುತ್ತಿರುವುದರಿಂದ ದೊಡ್ಡವರು ದಾಟುವುದು ಕಷ್ಟ. ಇಲ್ಲಿಂದ 3-4 ಮಕ್ಕಳು ಜಡ್ಡಿನಗದ್ದೆ ಶಾಲೆಗೆ ಹೋಗುವವರಿದ್ದಾರೆ. ಜೋರು ಮಳೆ ಬಂದರೆ ಇಲ್ಲಿನ ಮಕ್ಕಳಿಗೆ ರಜೆಯೇ ಹಾಕಬೇಕಾಗುತ್ತದೆ. ಮಳೆಗಾಲದಲ್ಲಿ ಇಲ್ಲಿನ ಮಕ್ಕಳು ಶಾಲೆಗೆ ಹೋಗುವುದಕ್ಕಿಂತ ರಜೆ ಹಾಕುವುದೇ ಹೆಚ್ಚು.

ಇದು ಏಳು ದಶಕಗಳ ಬೇಡಿಕೆ
ಸ್ಥಳೀಯರೇ ಹೇಳುವ ಪ್ರಕಾರ ಕುಡಿಸಾಲು ಹೊಳೆಗೆ ಸೇತುವೆ ಬೇಡಿಕೆ ಇಂದು- ನಿನ್ನೆಯದಲ್ಲ. ಬರೋಬ್ಬರಿ 7 ದಶಕಗಳಿಂದ ನಾವು ಬೇಡಿಕೆ ಕೊಡುತ್ತಿದ್ದೇವೆ. ಎಲ್ಲ ಜನಪ್ರತಿನಿಧಿಗಳು, ಅಮಾಸೆಬೈಲು ಗ್ರಾ.ಪಂ.ಗೆ ಮನವಿ ಕೊಟ್ಟಿದ್ದೇವೆ. ಈಗಿನ ಶಾಸಕರಿಗೂ ಮನವಿ ಕೊಟ್ಟಿದ್ದು, ಮಾಡಿಕೊಡುವ ಬಗ್ಗೆ ಭರವಸೆ ಕೊಟ್ಟಿದ್ದಾರೆ ಎನ್ನುತ್ತಾರೆ ಇಲ್ಲಿನ ನಿವಾಸಿಗಳು.

ಇನೆಷ್ಟು ವರ್ಷ ಕಾಯಬೇಕು…
ಇಲ್ಲಿನ ನಿವಾಸಿಗರು ಕಳೆದ 70 ವರ್ಷಗಳಿಗೂ ಹೆಚ್ಚು ಕಾಲದಿಂದ ಸೇತುವೆಯೊಂದು ಮಾಡಿಕೊಡಿ ಎಂದು ಕೇಳುತ್ತಿದ್ದಾರೆ. ಆದರೆ ಯಾರೂ ಓಗೊಟ್ಟಿಲ್ಲ. ಬಹುಷಃ ಇಲ್ಲಿರುವುದು 6 ಮನೆಗಳು ಮಾತ್ರ ಅನ್ನುವ ಕಾರಣಕ್ಕೆ ಈ ರೀತಿಯ ತಾತ್ಸಾರ ತೋರುತ್ತಿದ್ದಾರೆಯೇ? 6 ಮನೆಗಳಿದ್ದರೂ, ಅವರಿಗೆ ಮೂಲ ಸೌಕರ್ಯ ಕೇಳಿ ಪಡೆಯುವ ಹಕ್ಕಿಲ್ಲವೇ? ಅನ್ನುವುದಾಗಿ ಆಳುವ ವರ್ಗವನ್ನು ಅಲ್ಲಿನ ಜನ ಪ್ರಶ್ನಿಸುತ್ತಿದ್ದಾರೆ.

6 ತಿಂಗಳು ವಾಹನ ಸಂಚಾರವಿಲ್ಲ
ಮಳೆಗಾಲ ಆರಂಭವಾಗುವ ಜೂನ್‌ನಿಂದ ಮುಂದಿನ ಡಿಸೆಂಬರ್‌ವರೆಗೆ ಇಲ್ಲಿನ ಜನರಿಗೆ ಹೊಳೆಯಾಚೆಗೆ ವಾಹನ ಸಂಚಾರವೇ ಇಲ್ಲ. ಅದಕ್ಕೂ ಮೊದಲೇ ಕುಂದಾಪುರ ಅಥವಾ ಅಮಾಸೆಬೈಲು ಪೇಟೆಯಿಂದ ರಿಕ್ಷಾ ಮಾಡಿಕೊಂಡು, ಮನೆಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ತಂದಿಟ್ಟುಕೊಳ್ಳಬೇಕು. ಅದರ ಅನಂತರ ಏನಾದರೂ ಬೇಕಾದರೂ 8 ಕಿ.ಮೀ. ದೂರದ ಅಮಾಸೆಬೈಲಿನಿಂದ ಕುಡಿಸಾಲು ಹೊಳೆಯವರೆಗೆ ರಿಕ್ಷಾ ಅಥವಾ ಬೈಕ್‌ನಲ್ಲಿ ತರಬೇಕು. ಅಲ್ಲಿಂದ ಮುಂದಕ್ಕೆ ತಲೆ ಮೇಲೆ ಹೊತ್ತು ಕೊಂಡೇ ಬರಬೇಕು ಎನ್ನುತ್ತಾರೆ ಸ್ಥಳೀಯರಾದ ಸುದೀಪ್‌.

ಹುಷಾರಿಲ್ಲ ಅಂದ್ರೆ ಭಯವಾಗುತ್ತೆ!
ನಾವು ಚಿಕ್ಕವರಿದ್ದಾಗಲೂ ನಮ್ಮ ಅಪ್ಪ- ಅಮ್ಮ ಹೀಗೆ ಎತ್ತಿಕೊಂಡೇ ಹೊಳೆ ದಾಟಿಸುತ್ತಿದ್ದರು. ಈಗ ನಾವು ನಮ್ಮ ಮಕ್ಕಳನ್ನು ಸಹ ಎತ್ತಿಕೊಂಡೇ ಹೊಳೆ ದಾಟಿಸಿ, ಕಳುಹಿಸುತ್ತಿದ್ದೇವೆ. ಸೇತುವೆಯಿಲ್ಲದೆ ತುಂಬಾ ಕಷ್ಟವಾಗುತ್ತಿದೆ. ಅದರಲ್ಲೂ ಯಾರಿಗಾದರೂ ಹುಷಾರಿಲ್ಲಂದ್ರೆ ತುಂಬಾ ಭಯವಾಗುತ್ತೆ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದೇ ಒಂದು ದೊಡ್ಡ ಪ್ರಯಾಸದ ಕೆಲಸ. ಸಣ್ಣ ಮಗುವಿಗೆ ಈಗ ಕೆಮ್ಮು, ಕಫ ಇದೆ. ಆದರೆ ಆಸ್ಪತ್ರೆಗೆ ಹೊಳೆ ದಾಟಿ, ಕರೆದುಕೊಂಡು ಹೋಗಬೇಕು. ಅದು ಕಷ್ಟವೆಂದು ಆಸ್ಪತ್ರೆಗೆ ಹೋಗಿಲ್ಲ ಎನ್ನುವುದಾಗಿ ಅಳಲು ತೋಡಿಕೊಳ್ಳುತ್ತಾರೆ ಕುಡಿಸಾಲಿನ ನಿವಾಸಿ ಶ್ಯಾಮಲಾ.

–  ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.