Bengaluru: ಬಾಡಿಗೆ ಮನೆಯಲಿದ್ದ ಗೆಳತಿಯನ್ನು ಪಿಜಿಗೆ ಕರೆತಂದಿದ್ದಕ್ಕೆ ಯುವತಿ ಹತ್ಯೆ?

ಬಾಡಿಗೆ ಮನೆಯಲ್ಲಿ ಪ್ರೇಯಸಿಯನ್ನು ಇರಿಸಿಕೊಂಡಿದ್ದ ಆರೋಪಿ ;ಇದರಿಂದ ಸಿಟ್ಟಿ ಗೆದ್ದು ಹತ್ಯೆ

Team Udayavani, Jul 27, 2024, 12:58 PM IST

5-bng-crime

ಬೆಂಗಳೂರು: ಕೋರಮಂಗಲದ ವಿಆರ್‌ ಲೇಔಟ್‌ನ ಪಿಜಿಯೊಂದರಲ್ಲಿ ಇತ್ತೀಚೆಗೆ ಬಿಹಾರ ಮೂಲದ ಕೃತಿ ಕುಮಾರಿ ಎಂಬ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣದ ತನಿಖೆ ನಡೆಸುತ್ತಿದ್ದಂತೆ ಇನ್ನಷ್ಟು ಮಾಹಿತಿಗಳು ಬಹಿರಂಗಗೊಂಡಿದ್ದು, ಗೆಳತಿಯನ್ನು ಆರೋಪಿಯಿಂದ ಪಾರು ಮಾಡಲು ಹೋಗಿ ತಾನೇ ಕೊಲೆಯಾಗಿರುವ ಸಂಗತಿ ಗೊತ್ತಾಗಿದೆ.

ಆರೋಪಿ ಮಧ್ಯಪ್ರದೇಶದ ಅಭಿಷೇಕ್‌ಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.

ಪ್ರಕರಣದ ವಿವರ: ಅಭಿಷೇಕ್‌ ಹಾಗೂ ಕೊಲೆಯಾದ ಕೃತಿ ಕುಮಾರಿಯ ಸ್ನೇಹಿತೆ ಪ್ರೀತಿಸುತ್ತಿದ್ದರು. ಅಭಿಷೇಕ್‌ ಪ್ರೇಯಸಿ ಹಾಗೂ ಕೃತಿ ಕುಮಾರಿ ಇಬ್ಬರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಒಂದೇ ಪಿಜಿಯಲ್ಲಿ ವಾಸವಾಗಿದ್ದರು. ಅಭಿಷೇಕ್‌ ಮಧ್ಯಪ್ರದೇ ಶದ ಭೋಪಾಲ್‌ ನಿಂದ ಬೆಂಗಳೂರಿನಲ್ಲಿರುವ ಈ ಪಿಜಿಗೆ ಆಗಾಗ ಬಂದು ಪ್ರೇಯಸಿ ಜೊತೆ ಸುತ್ತಾಡಿಕೊಂಡು ಮತ್ತೆ ಊರಿಗೆ ಹಿಂತಿರುಗುತ್ತಿದ್ದ.

ಅಭಿಷೇಕ್‌ ಭೋಪಾಲ್ ನಲ್ಲಿ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಪ್ರೇಯಸಿ ಕೆಲಸಕ್ಕೆ ಸೇರುವಂತೆ ಒತ್ತಡ ಹಾಕುತ್ತಿದ್ದಳು. ಕೆಲಸಕ್ಕೆ ಸೇರಿಕೊಂಡಿದ್ದಾಗಿ ಅಭಿಷೇಕ್‌ ಪ್ರೇಯಸಿಗೆ ಇತ್ತೀಚೆಗೆ ಸುಳ್ಳು ಹೇಳಿದ್ದ. ಆದರೆ, ಇದು ಆತನ ಪ್ರೇಯಸಿಗೆ ಗೊತ್ತಾಗಿತ್ತು.

ಹೀಗಾಗಿ ಅಭಿಷೇಕ್‌ನನ್ನು ನಿರ್ಲಕ್ಷಿಸಿದ್ದಳು. ಇದರಿಂದ ಕೋಪಗೊಂಡ ಅಭಿಷೇಕ್‌ ಪಿಜಿ ಬಳಿ ಗಲಾಟೆ ಮಾಡುತ್ತಿದ್ದ. ಪ್ರಕರಣ ನಡೆಯುವ 3 ದಿನಗಳ ಮುನ್ನ ಬೆಂಗಳೂರಿನಲ್ಲಿ ಅಭಿಷೇಕ್‌ ಬಾಡಿಗೆ ಮನೆ ಮಾಡಿದ್ದ. ಈ ಬಾಡಿಗೆ ಮನೆಗೆ ಪ್ರೇಯಸಿಯನ್ನೂ ಕರೆಸಿ ಆಕೆಯ ಜೊತೆಯಲ್ಲಿದ್ದ. ಇದು ಅಭಿಷೇಕ್‌ ಪ್ರೇಯಸಿಗೆ ಇಷ್ಟವಿರಲಿಲ್ಲ. ಇಲ್ಲಿಂದ ಕರೆದುಕೊಂಡು ಹೋಗುವಂತೆ ಗೆಳತಿ ಕೃತಿ ಕುಮಾರಿಗೆ ಆಕೆ ಹೇಳಿದ್ದಳು. ಅದರಂತೆ ಕೃತಿ ಕುಮಾರಿ ತನ್ನ ಸ್ನೇಹಿತರೊಂದಿಗೆ ತೆರಳಿ ಗೆಳತಿಯನ್ನು ತನ್ನ ಪಿಜಿಗೆ ಕರೆತಂದಿದ್ದಳು.

ಇದು ಅಭಿಷೇಕ್‌ ಗಮನಕ್ಕೆ ಬರುತ್ತಿದ್ದಂತೆ ಆತ ಆಕ್ರೋಶಗೊಂಡಿದ್ದ. ಮಂಗಳವಾರ ರಾತ್ರಿ 11.30ರ ಸುಮಾರಿಗೆ ಪಿಜಿ ಬಂದು ಒಳ ಹೋಗಿ ಕೃತಿ ಕುಮಾರಿ ಇದ್ದ ಕೋಣೆ ಬಾಗಿಲು ತಟ್ಟಿದ್ದ. ಕೃತಿ ಕುಮಾರಿ ಬಾಗಿಲು ತೆಗೆಯುತ್ತಿದ್ದಂತೆ ಆಕೆಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದ.

ಆರೋಪಿ ಅಭಿಷೇಕ್‌ ಹೊರ ರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಯು ಪ್ರೇಯಸಿಯನ್ನು ಕೂಡಿ ಹಾಕಿರುವ ಆರೋಪವೂ ಕೇಳಿ ಬಂದಿದ್ದು, ನಂತರ ಸಮಯ ನೋಡಿ ಗೆಳತಿಯನ್ನು ಮನೆಯಿಂದ ಪಿಜಿಗೆ ಕೃತಿ ಕುಮಾರಿ ಕರೆತಂದಿದ್ದಳು ಎನ್ನಲಾಗುತ್ತಿದೆ.

ಸಹಾಯಕ್ಕೆ ಬಾರದ ಪಿಜಿ ಯುವತಿಯರು

ಆರೋಪಿಯು ಕೃತಿ ಕುಮಾರಿಗೆ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ದೃಶ್ಯಗಳು ಕೃತ್ಯ ನಡೆದ ಪಿಜಿಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆರೋಪಿ ಅಭಿಷೇಕ್‌ ಮೊದಲು ಪಿಜಿ ರೂಮಿನ ಬಾಗಿಲು ಬಡಿದಿದ್ದಾನೆ. ಆಕೆ ಬಾಗಿಲು ತೆರೆಯುತ್ತಿದ್ದಂತೆ ರೂಂನ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ ನಲ್ಲಿ ಕೃತಿ ಕುಮಾರಿ ಆತನಿಂದ ಪಾರಾಗಲು ಹೊರಗೆ ಬಂದಿದ್ದಾಳೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿಯು ಕೃತಿ ಕುಮಾರಿಯ ಕತ್ತನ್ನು ಹಿಡಿದು ಕಾರಿಡಾರ್‌ನಲ್ಲೇ ಮನಬಂದಂತೆ ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಚೂರಿಯಿಂದ ಇರಿದಿದ್ದಾನೆ. ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡುತ್ತಿದ್ದಳು. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿಯನ್ನ ನೋಡಿದ ಪಿಜಿಯ ಮೂವರು ಯುವತಿಯರು ಆತಂಕಕ್ಕೆ ಒಳಗಾಗಿ ಯಾರಿಗೋ ಕರೆ ಮಾಡಲು ಮುಂದಾಗುತ್ತಾರೆ. ಆ ವೇಳೆ ತನ್ನ ಸಹಾಯಕ್ಕೆ ಬರುವಂತೆ ಕೃತಿ ಕುಮಾರಿ ಅಂಗಲಾಚಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.