Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


Team Udayavani, Jul 27, 2024, 1:42 PM IST

Protest across the state if Ramanagara name is changed: pramod muthalik

ಗದಗ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ (Bengaluru South) ಎಂದು ಬದಲಾವಣೆ ಮಾಡಿರುವುದು ಖಂಡನೀಯ. ರಾಮನಗರ (Ramanagara) ಹೆಸರು ಇದ್ದರೆ ನಿಮಗೆ ತೊಂದರೆ ಏನು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಹರಿಹಾಯ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆ ಬದಲಾವಣೆ ಮಾಡುವುದಾದರೆ ಬೇರೆ ದಾರಿಗಳು, ಹೆಸರುಗಳಿವೆ. ರಾಮನಗರವನ್ನು ಬೆಂಗಳೂರು ಭಾಗ ಎಂದು ಕರೆಬಹುದಲ್ಲವೇ. ರಾಮನ ಹೆಸರಿನ ಜಿಲ್ಲೆ ಬದಲಾಯಿಸುತ್ತಿರುವುದು ಅತ್ಯಂತ ಖಂಡನೀಯ ಎಂದರು.

ಕಾಂಗ್ರೆಸ್ ನವರಿಗೆ, ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ಹೇಳಲು ಬಯಸುತ್ತೆನೆ. ಸ್ವಾತಂತ್ರ್ಯ ಬಂದು 75 ವರ್ಷವಾಯಿತು.  ಬದಲಾವಣೆ ಮಾಡುವುದಾದರೆ ವಿಕ್ಟೋರಿಯಾ ಆಸ್ಪತ್ರೆ, ಚರ್ಚ್ ರೋಡ್, ಕಬ್ಬನ್‌ ಪಾರ್ಕ್, ಕರ್ಜನ್ ರೋಡ್ ಸೇರಿದಂತೆ 32 ಕಡೆ ಹೆಸರು ಬದಲಾವಣೆ ಮಾಡಿ. ಕನ್ನಡ ಅಭಿಮಾನ, ದೇಶಾಭಿಮಾನ, ಸ್ವಾಭಿಮಾನ ಇದ್ದರೆ 32 ಕಡೆಯ ಹೆಸರು ಬದಲಾಯಿಸಿ. ಡಿಕೆ ಶಿವಕುಮಾರ ಇರುವುದನ್ನು ಡಿಕೆ ಶರೀಫ್ ಮಾಡಿಕೊಳ್ಳಿ. ರಾಮನಗರಕ್ಕೆ ತನ್ನದೆ ಆದ ಇತಿಹಾಸ ಇದೆ. ಅದ್ಯಾಕೆ ಬದಲಾವಣೆ ಮಾಡುತ್ತೀರಿ. ರಾಮನಗರ ಹೆಸರು ಪರಿವರ್ತನೆ‌ ಮಾಡಿದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ನಾಯಿ ಮಾಂಸ ಪತ್ತೆ ಪ್ರಕರಣದ ಬಗ್ಗೆ ಮಾತನಾಡಿ, ಬೆಂಗಳೂರು ರೈಲ್ವೆ ಸ್ಟೇಷನ್ ನಲ್ಲಿ ಅಬ್ದುಲ್ ರಜಾಕ್ ಮಾಲಿಕತ್ವದ ಬಾಕ್ಸ್ ನಲ್ಲಿ ನಾಯಿ ಮಾಂಸ ಪತ್ತೆಯಾಗಿದೆ. ರಾಜಸ್ಥಾನ ಜೈಪುರದಿಂದ ಬೆಂಗಳೂರಿಗೆ ಕಳೆದ 15 ವರ್ಷದಿಂದ ಸರಬರಾಜಾಗುತ್ತಿದೆ. ಕಳೆದ 15 ವರ್ಷದಿಂದ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ. ಬೆಂಗಳೂರು 3, 5, 7 ಸ್ಟಾರ್ ಹೊಟೆಲ್ ಗೆ ಸಪ್ಲೈ ಮಾಡುತ್ತಾ ಬಂದಿದ್ದಾರೆ. ಆಹಾರ ಇಲಾಖೆ, ಬಿಬಿಎಂಪಿ ಅಧಿಕಾರಿಗಳು ಕತ್ತೆ ಕಾಯುತ್ತಿದ್ದಾರಾ? ಆಹಾರ ಇಲಾಖೆ, ಬಿಬಿಎಂ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲಾಲ್ ಮಾಂಸ ತಿನ್ನಬೇಡಿ ಎಂದರೂ ತಿನ್ನುತ್ತಾರೆ. ಅಬ್ದುಲ್ ನೀಚ, ಕೋಮುವಾದಿ, ದೇಶ ದ್ರೋಹಿ, ಸಂವಿಧಾನ ವಿರೋಧಿ, ಔರಂಗ್ ಜೇಬ್ ನನ್ನ ಹೀರೋ ಎನ್ನುತ್ತಾನೆ. ಅಂತವನಿಗೆ ಶಿಕ್ಷೆಯಾಗಬೇಕು. ಜೈಪುರದಿಂದ ಬೆಂಗಳೂರಿಗೆ ಬರಬೇಕಾದರೆ ಎಷ್ಟು ಗಂಟೆ ಬೇಕಾಗುತ್ತೆ, ಅದರ ಗುಣಮಟ್ಟ ಏನಾಗುತ್ತೆ? ಅಬ್ದುಲ್ ರಜಾಕ್ ಬೆನ್ನಿಗೆ ನಿಂತವರು ಜಮೀರ್ ಅಹ್ಮದ್. ಜಮೀರ್ ಇದಕ್ಕೆ ಉತ್ತರ ನೀಡಬೇಕು. ನಾಯಿ, ನರಿ, ದನದ ಮಾಂಸ ನೀಡುತ್ತಿರುವುದು ನಿಲ್ಲಿಸಬೇಕು. ಅಬ್ದಲ್ ರಜಾಕ್ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಆ‌ ಬಾಕ್ಸ್ ಗೆ ಮೀನಿನ ಮಾಂಸ ಎಂದು ಬರೆದಿದ್ದಾರೆ, ಇದೆಂತಾ ಮೋಸ. ಈ ಬಗ್ಗೆ ಅಬ್ದುಲ್ ರಜಾಕ್ ಬಂಧಿಸಿ, ತನಿಖೆ ಆಗಬೇಕು ಎಂದು ಮುತಾಲಿಕ್ ಆಗ್ರಹಿಸಿದರು.

ಟಾಪ್ ನ್ಯೂಸ್

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

11-bng

Bengaluru: ಉದ್ಯಮಿ ಮನೆಯಲ್ಲಿ 1.22 ಕೋಟಿ ಚಿನ್ನ ಕಳವು; ಇಬ್ಬರ ಸೆರೆ

6

Kundapura: ಮರವಂತೆ ಮಾರಸ್ವಾಮಿ ಸ್ಟಾಪ್‌ನಲ್ಲಿ ನಿಲ್ಲದ ಸರಕಾರಿ ಬಸ್‌!

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.