Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ
Team Udayavani, Jul 27, 2024, 2:41 PM IST
ಮೈಸೂರು; ಜಿ ಟಿ ದೇವೇಗೌಡರಿಗೆ ಮುಡಾದಿಂದ ಜಮೀನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಪಕ್ಕ ಕುಳಿತು ಆರೋಪ ಮಾಡಿದ್ದಾರೆ. ಆದರೆ ಸಚಿವರು ಹೇಳಿರುವಂತೆ ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದರು.
ಜಲದರ್ಶಿನಿ ಅತಿಥಿ ಗೃಹದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ 50-60 ವರ್ಷಗಳ ರಾಜಕಾರಣದಲ್ಲಿ ಯಾವುದೇ ಕಟ್ಟಡ ಕಟ್ಟಲು ಆಗಿಲ್ಲ. ನನ್ನ ತಂದೆಯಿಂದ ಬಂದಿರುವ ಜಮೀನಿನಲ್ಲಿ ಉತ್ತು ಬಿತ್ತು ಬೆಳೆ ಬೆಳೆದಿದ್ದೇನೆ. ಬಂಗಾರದ ಮನುಷ್ಯ ಚಲನಚಿತ್ರದಿಂದ ಪ್ರಭಾವಿತನಾಗಿ ಬೇಸಾಯ ಮಾಡಿದ್ದೇನೆ. ಪ್ರಗತಿಪರ ರೈತ ಎನಿಸಿಕೊಂಡಿದ್ದೇನೆ. ಆನಂತರವೂ ಕಾನೂನು ಬದ್ದವಾಗಿ ಜಮೀನು ಖರೀದಿಸಿದ್ದೇನೆ ಎಂದರು.
ನನ್ನಂತಹ ರಾಜಕಾರಣಿ ರಾಜ್ಯ ಮಾತ್ರವಲ್ಲ, ಇಡೀ ದೇಶದಲ್ಲೇ ಇಲ್ಲ. ಮುಡಾದ 90% ಭಾಗ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಇದೆ. ಈ ಭಾಗದಲ್ಲಿ ಅಂದಿನಿಂದ ಇಂದಿನವರೆಗೂ ನಾನು ಒಂದೇ ಒಂದು ನಿವೇಶನ ಪಡೆದಿಲ್ಲ. ಗೋವಿಂದರಾಜು ಮುಡಾ ಅಧ್ಯಕ್ಷರಾಗಿದ್ದಾಗ ಲಾಟರಿಯಲ್ಲಿ ಒಂದು ನಿವೇಶನ ಬಂದಿದೆ. 50×80 ಅಳತೆಯ ನಿವೇಶನ ಲಾಟಿರಿಯಲ್ಲಿ ಬಂದಿರುವುದನ್ನು ಹೊರತುಪಡಿಸಿದರೆ ಯಾವುದೇ ಒಂದು ನಿವೇಶನ ಪಡೆದಿಲ್ಲ. ನಗರಾಭಿವೃದ್ಧಿ ಸಚಿವರು ಸರಿಯಾಗಿ ನಡೆದುಕೊಂಡಿದ್ದರೇ ಎಲ್ಲರ ಬಂಡವಾಳ ಬಯಲಾಗುತ್ತಿತ್ತು. ಆದರೆ ನಗರಾಭಿವೃದ್ಧಿ ಸಚಿವರು ಸರಿಯಾಗಿ ನಡೆದುಕೊಂಡಿಲ್ಲ ಎಂದು ದೇವೇಗೌಡ ಹೇಳಿದರು.
ಮುಂದಿವರಿಸಿದ ಮುನಿಸು
ಜಿ.ಟಿ.ದೇವೆಗೌಡರು ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ನಾಯಕರ ಜೊತೆ ಮುನಿಸು ಮುಂದುವರೆಸಿದರು. ಸಚಿವರ ಸುದ್ದಿಗೋಷ್ಠಿಯಲ್ಲಿ ಹೆಚ್.ಡಿ.ಕೆ, ಸಾ.ರಾ.ಮಹೇಶ್, ಮಂಜೇಗೌಡರ ಹೆಸರು ಪ್ರಸ್ತಾಪ ಮಾಡಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನನಗೆ ನನ್ನ ಪ್ರಕರಣದ ಬಗ್ಗೆಯಷ್ಟೆ ಗೊತ್ತು. ಬೇರೆ ಯಾರು ಏನು ಮಾಡಿದ್ದಾರೆ ಗೊತ್ತಿಲ್ಲ ಎಂದು ಖಾರವಾಗಿ ಉತ್ತರಿಸಿದರು.
ಯಾರ ಮೇಲೆ ಆರೋಪ ಬಂದಿದೆ ಅವರೆ ಉತ್ತರ ಕೊಡುತ್ತಾರೆ ಎಂದು ಹೇಳುವ ಮೂಲಕ ಜೆ.ಡಿ.ಎಸ್ ನಾಯಕರ ವಿಚಾರವಾಗಿ ಸಮರ್ಥಿಸಿಕೊಳ್ಳಲು ಮುಂದಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Mudubidire: 77 ಕೋ.ರೂ. ವೆಚ್ಚದ ಅಮೃತ್ 2.0 ನೀರಿನ ಯೋಜನೆಗೆ ಚಾಲನೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.