Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ


Team Udayavani, Jul 27, 2024, 2:41 PM IST

g t devegowda

ಮೈಸೂರು; ಜಿ ಟಿ ದೇವೇಗೌಡರಿಗೆ ಮುಡಾದಿಂದ ಜಮೀನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆರೋಪಿಸಿದ್ದಾರೆ‌. ಮುಖ್ಯಮಂತ್ರಿ ಪಕ್ಕ ಕುಳಿತು ಆರೋಪ ಮಾಡಿದ್ದಾರೆ. ಆದರೆ ಸಚಿವರು ಹೇಳಿರುವಂತೆ ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದರು.

ಜಲದರ್ಶಿನಿ ಅತಿಥಿ ಗೃಹದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ 50-60 ವರ್ಷಗಳ ರಾಜಕಾರಣದಲ್ಲಿ ಯಾವುದೇ ಕಟ್ಟಡ ಕಟ್ಟಲು ಆಗಿಲ್ಲ. ನನ್ನ ತಂದೆಯಿಂದ ಬಂದಿರುವ ಜಮೀನಿನಲ್ಲಿ ಉತ್ತು ಬಿತ್ತು ಬೆಳೆ ಬೆಳೆದಿದ್ದೇನೆ. ಬಂಗಾರದ ಮನುಷ್ಯ ಚಲನಚಿತ್ರದಿಂದ ಪ್ರಭಾವಿತನಾಗಿ ಬೇಸಾಯ ಮಾಡಿದ್ದೇನೆ. ಪ್ರಗತಿಪರ ರೈತ ಎನಿಸಿಕೊಂಡಿದ್ದೇನೆ. ಆನಂತರವೂ ಕಾನೂನು ಬದ್ದವಾಗಿ ಜಮೀನು ಖರೀದಿಸಿದ್ದೇ‌ನೆ ಎಂದರು.

ನನ್ನಂತಹ ರಾಜಕಾರಣಿ ರಾಜ್ಯ ಮಾತ್ರವಲ್ಲ, ಇಡೀ ದೇಶದಲ್ಲೇ ಇಲ್ಲ.  ಮುಡಾದ 90% ಭಾಗ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಇದೆ. ಈ ಭಾಗದಲ್ಲಿ ಅಂದಿನಿಂದ ಇಂದಿನವರೆಗೂ ನಾನು ಒಂದೇ ಒಂದು ನಿವೇಶನ ಪಡೆದಿಲ್ಲ‌. ಗೋವಿಂದರಾಜು ಮುಡಾ ಅಧ್ಯಕ್ಷರಾಗಿದ್ದಾಗ ಲಾಟರಿಯಲ್ಲಿ ಒಂದು ನಿವೇಶನ ಬಂದಿದೆ. 50×80 ಅಳತೆಯ ನಿವೇಶನ ಲಾಟಿರಿಯಲ್ಲಿ ಬಂದಿರುವುದನ್ನು ಹೊರತುಪಡಿಸಿದರೆ ಯಾವುದೇ ಒಂದು ನಿವೇಶನ ಪಡೆದಿಲ್ಲ‌. ನಗರಾಭಿವೃದ್ಧಿ ಸಚಿವರು ಸರಿಯಾಗಿ ನಡೆದುಕೊಂಡಿದ್ದರೇ ಎಲ್ಲರ ಬಂಡವಾಳ ಬಯಲಾಗುತ್ತಿತ್ತು. ಆದರೆ ನಗರಾಭಿವೃದ್ಧಿ ಸಚಿವರು ಸರಿಯಾಗಿ ನಡೆದುಕೊಂಡಿಲ್ಲ ಎಂದು ದೇವೇಗೌಡ ಹೇಳಿದರು.

ಮುಂದಿವರಿಸಿದ ಮುನಿಸು

ಜಿ.ಟಿ.ದೇವೆಗೌಡರು ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ನಾಯಕರ ಜೊತೆ ಮುನಿಸು ಮುಂದುವರೆಸಿದರು. ಸಚಿವರ ಸುದ್ದಿಗೋಷ್ಠಿಯಲ್ಲಿ ಹೆಚ್.ಡಿ.ಕೆ,  ಸಾ.ರಾ.ಮಹೇಶ್, ಮಂಜೇಗೌಡರ ಹೆಸರು ಪ್ರಸ್ತಾಪ ಮಾಡಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನನಗೆ ನನ್ನ ಪ್ರಕರಣದ ಬಗ್ಗೆಯಷ್ಟೆ ಗೊತ್ತು. ಬೇರೆ ಯಾರು ಏನು‌ ಮಾಡಿದ್ದಾರೆ ಗೊತ್ತಿಲ್ಲ ಎಂದು ಖಾರವಾಗಿ ಉತ್ತರಿಸಿದರು.

ಯಾರ ಮೇಲೆ ಆರೋಪ ಬಂದಿದೆ ಅವರೆ ಉತ್ತರ ಕೊಡುತ್ತಾರೆ‌ ಎಂದು ಹೇಳುವ ಮೂಲಕ ಜೆ.ಡಿ.ಎಸ್ ನಾಯಕರ ವಿಚಾರವಾಗಿ ಸಮರ್ಥಿಸಿಕೊಳ್ಳಲು ಮುಂದಾಗಲಿಲ್ಲ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

CTCM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.