Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಹೊಂಬಾಡಿ ಮಂಡಾಡಿ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ರಾಶಿಬಿದ್ದ ಟನ್‌ಗಟ್ಟಲೇ ತ್ಯಾಜ್ಯ

Team Udayavani, Jul 27, 2024, 3:17 PM IST

Screenshot (7) copy

ತೆಕ್ಕಟ್ಟೆ: ಹೊಂಬಾಡಿ ಮಂಡಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ (SLRM) ಸ್ಥಾಪನೆಗೊಂಡು ಕಾರ್ಯನಿರ್ವಹಿಸುತ್ತಿದೆ. ಹೊಂಬಾಡಿ ಮಂಡಾಡಿ, ಕಾಳಾವರ, ಕೊರ್ಗಿ,ಗೋಪಾಡಿ, ಬೀಜಾಡಿ ಸೇರಿದಂತೆ ಒಟ್ಟು 5 ಗ್ರಾ.ಪಂ.ಗಳ ಘನ ತ್ಯಾಜ್ಯವನ್ನು ಈ ಘಟಕದಲ್ಲಿ ವಿಲೇವಾರಿ ಮಾಡಲಾಗುತ್ತಿದ್ದು,ಪ್ರಸ್ತುತ ತ್ಯಾಜ್ಯಗಳ ಪ್ರಮಾಣವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಗ್ರಾ.ಪಂ.ಗೆ ಅದರ ಸಮರ್ಪಕ ನಿರ್ವಹಣೆಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಈಗಾಗಲೇ ಗ್ರಾ.ಪಂ. ಹಿಂದೂ ರುದ್ರಭೂಮಿಗಾಗಿ ಕಾದಿರಿಸಿದ ಸ್ಥಳದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಘನ ತ್ಯಾಜ್ಯ ಘಟಕ (SLRM) ನಿರ್ಮಾಣಗೊಂಡು ಕಾರ್ಯನಿರ್ವಹಿಸುತ್ತಿದೆ. ಸುಮಾರು ನಾಲ್ಕು ಗ್ರಾ.ಪಂ. ಗಳ ನಡುವೆ ಐದು ವರ್ಷಗಳ ಹಿಂದೆ ಒಪ್ಪಂದ ಮಾಡಿಕೊಂಡು ಟಿಪ್‌ ಎನ್ನುವ ಖಾಸಗಿ ಎನ್‌ಜಿಒ ಸಂಸ್ಥೆಯ ಸಹಭಾಗಿತ್ವದೊಂದಿಗೆ ಸುಮಾರು 11 ಮಂದಿ ಕಾರ್ಮಿಕರು ಸ್ವತ್ಛತ ಕಾರ್ಯದಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ವಿಲೇವಾರಿಯಾಗದೆ ಉಳಿದ ತ್ಯಾಜ್ಯ ರಾಶಿ
ಐದು ಗ್ರಾ.ಪಂ. ವ್ಯಾಪ್ತಿಯಿಂದ ಬರುವ ತ್ಯಾಜ್ಯಗಳು 5 ವರ್ಷಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿ 11 ಮಂದಿ ಕಾರ್ಮಿಕರು ನಿರಂತರವಾಗಿ ಕಸ ವಿಂಗಡಿಸಿದ ಸುಮಾರು ಟನ್‌ಗಟ್ಟಲೇ ಪ್ಲಾಸ್ಟಿಕ್‌ ತ್ಯಾಜ್ಯಗಳು ಕಿರಿದಾದ ಜಾಗದಲ್ಲೇ ಶೇಖರಿಸಲಾಗಿದ್ದು, ಅದರ ಸಮರ್ಪಕವಾದ ವಿಲೇವಾರಿಯಾಗದೆ ಮಳೆಗಾಲದ ಸಂದರ್ಭ
ಸುತ್ತಮುತ್ತಲಿನವರು ತೊಂದರೆ ಅನುಭವಿಸು ವಂತಾಗಿದೆ.

ಅತ್ಯಧಿಕ ತ್ಯಾಜ್ಯ
ಮೊದಲು ನಮ್ಮ ಒಂದೇ ಗ್ರಾಮದ ಕಸ ವಿಲೇವಾರಿ ಅಷ್ಟೊಂದು ಕಷ್ಟವಾಗುತ್ತಿರಲಿಲ್ಲ. ಆದರೆ ಈಗ 5 ಗ್ರಾಮ ಪಂಚಾಯತ್‌ಗಳಿಂದ ಘಟಕದ ಸಾಮರ್ಥ್ಯಕ್ಕಿಂತಲೂ ಅತ್ಯಧಿಕ ತ್ಯಾಜ್ಯಗಳು ಬಂದು ಬೀಳುವುದರಿಂದ ಇಲ್ಲಿನ ಕಾರ್ಮಿಕರಿಗೂ ಸಹ ಕಸ ವಿಲೇವಾರಿ ಕಷ್ಟಸಾಧ್ಯವಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕಾಗಿದೆ ಎಂದು ನರಸಿಂಹ ಆಗ್ರಹಿಸಿದ್ದಾರೆ.

ತುರ್ತು ಸಭೆ ಕರೆಯಲು ನಿರ್ಣಯ
ಕಳೆದ ಐದು ವರ್ಷಗಳ ಹಿಂದೆ ಘಟಕ ಸ್ಥಾಪಿಸುವಾಗ ಕಾಳಾವರ ಗ್ರಾ.ಪಂ. ವ್ಯಾಪ್ತಿಯ ಸುಮಾರು 5 ಎಕ್ರೆ ವಿಸ್ತೀರ್ಣದಲ್ಲಿ ಎಂಆರ್‌ಎಫ್‌ ಘಟಕ ಸ್ಥಾಪನೆಗೆ ಯೋಜನೆಗಳು ಸಿದ್ಧವಾಗಿದೆ ಎನ್ನುವ ಕಾರಣಕ್ಕೆ ತಾತ್ಕಾಲಿಕ ನೆಲೆಯಆಧಾರದ ಮೇಲೆ ಈ 4 ಗ್ರಾ.ಪಂ.ಗಳನ್ನು ಒಂದಾಗಿಸಿಕೊಂಡಿದ್ದೇವೆ. ಆದರೆ ಇದುವರೆಗೆ ಎಂಆರ್‌ಎಫ್‌ ಘಟಕಕ್ಕಾಗಿ ಕಾದಿರಿಸಿದ ಸ್ಥಳಗಳ ಸಮಸ್ಯೆಗಳು ಬಗೆಹರಿಯದೇ ಇರುವ ಪರಿಣಾಮ ಇಲ್ಲಿ ಒತ್ತಡ ಹೆಚ್ಚಾಗಿದೆ. ಪ್ರಸ್ತುತ ಟಿಪ್‌ ಎನ್‌ಜಿಒ ಎನ್ನುವ ಖಾಸಗಿ ಸಂಸ್ಥೆಯೊಂದು ನಿರ್ವಹಣ ಜವಾಬ್ದಾರಿಯನ್ನು ಹೊತ್ತಿದ್ದು, ಇಲ್ಲಿನ ಯಾವುದೇ ಬೆಳವಣಿಗೆಗಳ ಕುರಿತು ಗ್ರಾ.ಪಂ.ಗೆ ಯಾವುದೇ ಮಾಹಿತಿ ನೀಡುವುದಿಲ್ಲ. ಆದ್ದರಿಂದ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರ ಕಲ್ಪಿಸುವ ನಿಟ್ಟಿನಿಂದ ಸಂಬಂಧಪಟ್ಟವರಿಗೆ ಪತ್ರ ಬರೆದು ತುರ್ತು ಸಭೆ ಕರೆಯಲು ನಿರ್ಣಯಿಸಲಾಗಿದೆ.
– ಕೆ.ಗಣೇಶ್‌ ಶೆಟ್ಟಿ ಹುಣ್ಸೆಮಕ್ಕಿ ಸದಸ್ಯರು, ಗ್ರಾ.ಪಂ. ಹೊಂಬಾಡಿ ಮಂಡಾಡಿ

ಆಯಾ ಗ್ರಾ.ಪಂ.ಗಳೇ ವಿಲೇವಾರಿ ಮಾಡಿಕೊಳ್ಳಲಿ
ಐದು ಗ್ರಾ.ಪಂ.ಗಳಿಂದ ಒಂದೇ ವಾಹನದಲ್ಲಿ ದಿನಕ್ಕೆ ನಾಲ್ಕೈದು ಟ್ರಿಪ್‌ ಕಸಗಳ ರಾಶಿ ಬರುತ್ತಿದ್ದು, ಅದಕ್ಕೆ ಸರಿಯಾಗಿ ಕಾರ್ಮಿಕರ ಸಂಖ್ಯೆ ಹೆಚ್ಚು ಮಾಡಲು ಸಮರ್ಪಕವಾದ ಜಾಗದ ಕೊರತೆಯಿದೆ. ಬಂದ ಕಸ ಹಾಗೂ ವಿಂಗಡಣೆ
ಕಸಗಳನ್ನು ಅಲ್ಲಿಯೇ ಹಾಕಿಕೊಳ್ಳಬೇಕಾದ ಅನಿವಾರ್ಯತೆ ಇದ್ದು, ಅತ್ಯಂತ ಕಷ್ಟದ ಸ್ಥಿತಿಯಲ್ಲಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಟಿಪ್‌ ಎನ್ನುವ ಎನ್‌ಜಿಒ ಸಂಸ್ಥೆಯು ಕಸ ವಿಲೇವಾರಿ ಮಾಡುವ ನಿಟ್ಟಿನಿಂದ ಕೆಲವೊಂದು ಪಂಚಾಯತ್‌ನ ಸಹಯೋಗದೊಂದಿಗೆ ಒಂದಷ್ಟು ಮಂದಿಗೆ ಉದ್ಯೋಗವನ್ನು ಸೃಷ್ಟಿಸಿ, ಸವಲತ್ತು ಒದಗಿಸುತ್ತಿದೆ. ಪ್ರಸ್ತುತ ಕಸ ವಿಲೇವಾರಿ ಕಾರ್ಯವನ್ನು ಸ್ಥಗಿತಗೊಳಿಸುತ್ತೇವೆ ಎಂದು ಟಿಪ್‌ ಎನ್‌ಜಿಒ ಕಡೆಯಿಂದ ಗ್ರಾ.ಪಂ.ಗೆ ಈಗಾಗಲೇ ಪತ್ರ ಬರೆಯಲಾಗಿದೆ. ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಆಯಾ ಗ್ರಾ.ಪಂ.ಗಳು ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಿ.
– ವಿಜಯಲಕ್ಷ್ಮೀ, ಮುಖ್ಯ ಮೇಲ್ವಿಚಾರಕಿ, ಎಸ್‌ಎಲ್‌ಆರ್‌ಎಂ ಘಟಕ

ಕಾರ್ಮಿಕರಿಗೂ ಬೇಕಿದೆ ಆರೋಗ್ಯ ಸುರಕ್ಷತೆ

ಸುಮಾರು 11 ಮಂದಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಗ್ರಾಮೀಣ ಭಾಗದ ಪುರುಷ ಹಾಗೂ ಮಹಿಳಾ ಕಾರ್ಮಿಕರು ಆರೋಗ್ಯ ಸುರಕ್ಷತೆಯನ್ನು ಲೆಕ್ಕಿಸದೇ, ಮುಖ ಗವಸು ಹಾಗೂ ಕೈ ಗವಸು ಧರಿಸದೇ ಕಸ ವಿಂಗಡಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಕಂಡು ಬಂದಿದೆ.

– ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.