Bengaluru: ರೈಲ್ವೆ ನಿಲ್ದಾಣದಲ್ಲಿ ನಾಯಿ ಮಾಂಸ ಗಲಾಟೆ

ಇಲ್ಲ, ಇಲ್ಲ.. ಇದು ನಾಯಿ ಮಾಂಸ: ಹಿಂದೂ ಸಂಘಟನೆಗಳು , ಸ್ಯಾಂಪಲ್‌ ಪಡೆದ ಆಹಾರ ಅಧಿಕಾರಿಗಳು‌

Team Udayavani, Jul 27, 2024, 2:59 PM IST

6-bng

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನಲ್ಲಿ ವಾರದ ಮೂರು ದಿನಗಳು ಸರಬರಾಜು ಆಗುತ್ತಿದ್ದ 4,500 ಕೆ.ಜಿ. ಮಟನ್‌ ಮಾಂಸದ ಮೇಲೆ “ನಾಯಿ ಮಾಂಸ’ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಮಾಂಸ ಮಾರಾಟ ವ್ಯಾಪಾರಿಗಳು ಅನುಮಾನ ವ್ಯಕ್ತಪಡಿಸಿ, ಆಕ್ರೋಶ ಹೊರ ಹಾಕಿರುವ ಪ್ರಕರಣ ನಡೆದಿದೆ.

ರಾಜಸ್ಥಾನದಿಂದ ರೈಲಿನಲ್ಲಿ ಬೆಂಗಳೂರಿಗೆ ಶುಕ್ರವಾರ 90 ಮಾಂಸದ ಬಾಕ್ಸ್‌ಗಳು ಬಂದಿದ್ದವು. ಈ ವಿಚಾರ ತಿಳಿದು ಹಿಂದೂ ಕಾರ್ಯಕರ್ತರು ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದ ಬಳಿ ಬಂದು ಇದು ಯಾವುದರ ಮಾಂಸ ಎಂದು ಗಲಾಟೆ ಮಾಡಿದ್ದಾರೆ.

ಆ ವೇಳೆ ಮಾಂಸ ತರಿಸಿಕೊಂಡ ವ್ಯಾಪಾರಿ ಸ್ಥಳಕ್ಕೆ ಧಾವಿಸಿದ್ದು ಅಲ್ಲಿ ನೆರೆದಿದ್ದವರಿಗೆ ಬಾಕ್ಸ್‌ಗಳನ್ನು ತೆರೆಯಲು ಬಿಡಲಿಲ್ಲ. ನಂತರ ಶಿವಾಜಿನಗರ, ಯಶವಂತಪುರ ಸೇರಿ ವಿವಿಧೆಡೆಯಿಂದ ಬಂದ ಮಾಂಸ ಖರೀದಿ ವ್ಯಾಪಾರಿ ಗಳು “ಇದು ನಾಯಿ ಮಾಂಸ ಅಲ್ಲ’ ಎಂದು ಹೇಳಿ ಬಾಕ್ಸ್‌ ತೆರೆದ ಹಿಂದೂ ಕಾರ್ಯಕರ್ತರ ಮೇಲೆ ಆಕ್ರೋಶ ಹೊರ ಹಾಕಿದರು.

ಇದಾದ ನಂತರ ರೈಲಿನಲ್ಲಿ ಬಂದಿದ್ದ ಮಾಂಸವನ್ನು ಎತ್ತಿ ನೋಡಿದ್ದಾರೆ. ಆಗ ಉದ್ದ ಬಾಲವಿರುವ ನಾಯಿಯ ಆಕಾರದಲ್ಲಿ ಹೋಲುತ್ತಿರುವ ಮಾಂಸವನ್ನು ನೋಡಿ ಇದು ನಾಯಿ ಮಾಂಸ ಎಂದು ಆರೋಪಿಸಿದ್ದಾರೆ. ಆಗ ಎಲ್ಲ ಬಾಕ್ಸ್‌ಗಳಲ್ಲಿರುವ ಮಾಂಸ ಪರಿಶೀಲಿಸುವಂತೆ ಅಲ್ಲಿದ್ದ ಹಿಂದೂ ಕಾರ್ಯಕರ್ತರು ಒತ್ತಾಯಿಸಿದರು. ಆದರೆ ವ್ಯಾಪಾರಿ ವ್ಯಾಪಾರ ಮಾಡುವುಕ್ಕೆ ಕಷ್ಟವಾಗುತ್ತದೆ ಎಂದು ಉಳಿದ ಬಾಕ್ಸ್‌ಗಳನ್ನು ತೆರೆಯಲು ಬಿಡಲಿಲ್ಲ. ನಂತರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿ ಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದರು.

ಸ್ಯಾಂಪಲ್‌ ಪಡೆದುಕೊಂಡ ಆಹಾರ ಸುರಕ್ಷತಾ ಅಧಿಕಾರಿಗಳು:

ಈ ಪ್ರಕರಣದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಯಾಗಿ ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್‌ಗಳನ್ನು ಓಪನ್‌ ಮಾಡಿ ಪರಿಶೀಲನೆ ಮಾಡಿದ್ದಾರೆ. ಮಾಂಸದ ಸ್ಯಾಂಪಲ್‌ ಪಡೆದುಕೊಂಡಿದ್ದಾರೆ.

ಒಟ್ಟು 4 ಬಾಕ್ಸ್‌ಗಳಿಂದ ಸ್ಯಾಂಪಲ್‌ ಸಂಗ್ರಹಿಸಲಾಗಿದೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್‌ ಆಗಿ ಪಡೆದಿದ್ದೇವೆ. ಇದನ್ನು ಲ್ಯಾಬ್‌ಗ ರವಾನಿಸಿ ಪರೀಕ್ಷಿಸಲಾಗುತ್ತದೆ. ಇದರ ವರದಿ ಬರುವುದಕ್ಕೆ 14 ದಿನಗಳ ಕಾಲವಕಾಶ ಬೇಕಾಗುತ್ತದೆ. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಟೆಸ್ಟಿಂಗ್‌ನಲ್ಲಿ ಗೊತ್ತಾಗಲಿದೆ ಎಂದು ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿಯೊಬ್ಬರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಏನಿದು ಗಲಾಟೆ?

 12 ವರ್ಷದಿಂದ ಕಡಿಮೆ ರೇಟ್‌ಗೆ ಮಾಂಸ ತರಿಸಿಕೊಳ್ಳುತ್ತಿರುವ ವ್ಯಾಪಾರಿ

 ಬೆಂಗಳೂರಿನ ಹೋಟೆಲ್‌, ಅಂಗಡಿಗಳಿಗೆ ಕೆಜಿಗೆ 700-800 ರೂ.ಗೆ ಮಾರಾಟ

 ಕಡಿಮೆ ದರಕ್ಕೆ ಮಾರುವುದರಿಂದ ಬೆಂಗಳೂರಿನ ಸ್ಥಳೀಯ ವ್ಯಾಪಾರಿಗಳಿಗೆ ನಷ್ಟ

 ಹೀಗೆ ಶುಕ್ರವಾರ ಬಂದ ಮಾಂಸಕ್ಕೆ ಪುನೀತ್‌ ಕೆರೆಹಳ್ಳಿ ತಂಡ ತಡೆ, ನಾಯಿ ಮಾಂಸವೆಂದು ಶಂಕೆ ‌

12 ವರ್ಷಗಳಿಂದ ಮಾಂಸ ವ್ಯಾಪಾರ

ಕಳೆದ 12 ವರ್ಷಗಳಿಂದ ಅಬ್ದುಲ್‌ ರಜಾಕ್‌ ಎನ್ನುವ ವ್ಯಾಪಾರಿ ರಾಜಸ್ಥಾನದಿಂದ ಕಡಿಮೆ ಬೆಲೆಗೆ ಕುರಿ ಮಾಂಸವನ್ನು ಬೆಂಗಳೂರಿಗೆ ತರಿಸಿ ಕೊಂಡು ಅದನ್ನು ಹೋಟೆಲ್, ರೆಸ್ಟೋರೆಂಟ್‌ ಸೇರಿ ಇತರೆ ಅಂಗಡಿಗಳಿಗೆ ಕಡಿಮೆ ದರಕ್ಕೆ ಸರಬರಾಜು ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ 700 ರೂ.ಗಳಿಂದ 800 ರೂ.ಗಳಿಗೆ ಮಾಂಸ ಮಾರಾಟ ಮಾಡಲಾಗುತ್ತಿದ್ದು. ರಾಜಸ್ಥಾನದಿಂದ ತರಿಸಿಕೊಂಡು ಬೆಂಗಳೂರಿನಲ್ಲಿ ಅಂಗಡಿ ಮುಂಗಟ್ಟುಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಇಲ್ಲಿನ ಮಟನ್‌ ಮಾರಾಟ ವ್ಯಾಪಾರಿಗಳಿಗೆ ನಷ್ಟ ಉಂಟಾಗುತ್ತದೆ ಎಂಬ ಆರೋಪ ಕೇಳಿ ಬಂದಿದೆ.

ಮಾಲೀಕ ರಜಾಕ್‌, ಪುನೀತ್‌ ಮಧ್ಯೆ ಗಲಾಟೆ

ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದಲ್ಲಿ ಪುನೀತ್‌ ಕೆರೆಹಳ್ಳಿ ಸಂಗಡಿಗರು ಮಾಂಸದ ಬಾಕ್ಸ್‌ಗಳನ್ನು ತಡೆದಿದ್ದು ನಾಯಿ ಮಾಂಸ ಇದೆ ಎಂಬ ವಿಚಾರಕ್ಕೆ ಅಬ್ದುಲ್‌ ರಜಾಕ್‌ ಮತ್ತು ಪುನೀತ್‌ ಮಧ್ಯೆ ಗಲಾಟೆ ನಡೆದಿತ್ತು. ಈ ಬಗ್ಗೆ ಅಬ್ದುಲ್‌ ರಜಾಕ್‌ ಮಾಧ್ಯಮದವರ ಜತೆಗೆ ಮಾತ ನಾಡಿದ್ದು ಇದು ಅಕ್ರಮ ಬ್ಯುಸಿನೆಸ್‌ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್‌ ಇದೆ. ಎಲ್ಲ ಬಾಕ್ಸ್ ಗಳಲ್ಲಿ ಕುರಿ ಮಾಂಸ ಮಾತ್ರವಿದೆ. 12 ವರ್ಷದಿಂದ ಈ ಬ್ಯುಸಿನೆಸ್‌ ಮಾಡುತ್ತಿದ್ದೇವೆ. ಅವರೇ ಬಾಕ್ಸ್‌ ಓಪನ್‌ ಮಾಡಿಸಿದ್ದಾರೆ. ಕುರಿಯ ಮಾಂಸ ಇರುವುದನ್ನು ನೋಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.